ಜಮೀನು ಹರಾಜು ನೋಟಿಸ್ : ದಯಾಮರಣಕ್ಕೆ ಅರ್ಜಿ ಹಾಕಿದ ಗುಂಡ್ಲುಪೇಟೆ ರೈತ
ಚಾಮರಾಜನಗರ, ಜುಲೈ 16: ಸಾಲದ ಬಾಕಿ ಕಟ್ಟಲು ಕಾಲವಕಾಶ ಕೊಡಬೇಕು ಇಲ್ಲವೇ ತಮಗೆ ದಯಾಮರಣ ಕೊಡಬೇಕೆಂದು ರೈತರೊಬ್ಬರು ದಯಾಮರಣಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಸಾಲ ಮರು ಪಾವತಿ ಮಾಡದಿರುವ ಹಿನ್ನೆಲೆಯಲ್ಲಿ ಜಮೀನು ಹರಾಜು ಹಾಕಲಾಗುವುದು ಎಂದು ಕಂದೇಗಾಲ ಗ್ರಾಮದ ರೈತರ ಮನೆ ಮುಂದೆ ಗುಂಡ್ಲುಪೇಟೆ ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ನೊಟೀಸ್ ಅಂಟಿಸಿದ್ದು, ರೈತ ಕಂಗಲಾಗಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಗ್ರಾಮದ ರೈತ ಗಿರೀಶ್ ಹಾಗೂ ಗುಂಡಪ್ಪ ಎಂಬುವರು 2012ರಲ್ಲಿ ಪಟ್ಟಣದ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ 7 ಲಕ್ಷ ರೂ. ಬೆಳೆಸಾಲ ಪಡೆದಿದ್ದರು. ನಂತರ ರೈತರ ಎರಡು ವರ್ಷಗಳ ಕಾಲ ಕಂತಿನ ರೂಪದಲ್ಲಿ ಬೆಳೆ ಸಾಲದ ಹಣವನ್ನು ಬ್ಯಾಂಕ್ಗೆ 1.50 ಲಕ್ಷ ರೂ. ನಗದು ಪಾವತಿಸಿದ್ದಾರೆ. ಇದಲ್ಲದೇ ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಸಾಲಮನ್ನಾ ಯೋಜನೆಯಡಿಯಲ್ಲಿ 1.75 ಲಕ್ಷ ರೂ. ಸಾಲಮನ್ನಾ ಆಗಿದೆಯಂತೆ.

ಓನ್ ಟೈಂ ಸೆಟಲ್ಮೆಂಟ್(ಒಟಿಎಸ್)ನಡಿ 5 ಲಕ್ಷ ರು.ಕಟ್ಟಿ ಎಂದು ಬ್ಯಾಂಕ್ ನೌಕರರು ಈ ಹಿಂದೆ ಹೇಳಿದ್ದರು. ಆಗ 5 ಲಕ್ಷ ರೂ. ಕಟ್ಟಲು ಬ್ಯಾಂಕ್ ಗೆ ಹೋದರೆ ಕೋರ್ಟ್ನಲ್ಲಿ ಕೇಸಿದೆ ಎಂದು ಸಾಗ ಹಾಕಿದ್ದರು. ಈಗ ಬಡ್ಡಿ, ಚಕ್ರ ಬಡ್ಡಿ ಎಲ್ಲಾ ಸೇರಿ 29 ಲಕ್ಷ ರೂ. ಕಟ್ಟಬೇಕಾಗುತ್ತದೆ ಎನ್ನುತ್ತಿದ್ದಾರೆ. ಇದಕ್ಕೆ ಒಪ್ಪದ ಕಾರಣ ಮನೆ ಮುಂದೆ ಜಮೀನು ಹರಾಜು ಮಾಡುವುದಾಗಿ ನೋಟೀಸ್ ಅಂಟಿಸಿದ್ದಾರೆ ಎಂದು ರೈತ ಗುಂಡಪ್ಪ ಅಳಲು ತೋಡಿಕೊಂಡಿದ್ದಾರೆ.

ನಮ್ಮ ಜಮೀನು ಹರಾಜು ಹಾಕಿದರೇ ನಮ್ಮ ಇಡೀ ಕುಟುಂಬ ಬೀದಿ ಪಾಲಾಗಲಿದೆ, ಬೀದಿ ಪಾಲಾಗುವುದಕ್ಕಿಂತ ಸಾಯುವುದೇ ಮೇಲು, ಹಾಗಾಗಿ ನಮಗೆ ದಯಾಮರಣಕ್ಕೆ ಅವಕಾಶ ಕೊಡಬೇಕೆಂದು ರಾಷ್ಟ್ರಪತಿಗೆ ಡಿಸಿ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ದಯಾಮರಣಕ್ಕೆ ಅವಕಾಶ ಸಿಗದಿದ್ದರೇ ಈ ಹರಾಜು ನಿಲ್ಲಿಸಿ ಸಾಲ ಪಾವತಿಗೆ ಕಾಲಾವಕಾಶ ಕೊಡಬೇಕೆಂದು ಕೋರಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications