ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುಂಡ್ಲುಪೇಟೆ: ಸಚಿವ ಯು.ಟಿ.ಖಾದರ್ ವಿರುದ್ಧ ಎಫ್‍ಐಆರ್

ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಯು.ಟಿ. ಖಾದರ್ ವಿರುದ್ಧ ಗುಂಡ್ಲುಪೇಟೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಗುಂಡ್ಲುಪೇಟೆ, ಮಾರ್ಚ್ 30: ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಯು.ಟಿ. ಖಾದರ್ ವಿರುದ್ಧ ಗುಂಡ್ಲುಪೇಟೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

ಇದನ್ನು ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ನಲಿನ್ ಅತುಲ್ ಖಚಿತಪಡಿಸಿದ್ದಾರೆ..

Gundlupet: FIR filled against minister U T Khader

ಸಚಿವ ಯು.ಟಿ. ಖಾದರ್ ಅವರು ಮಾ. 27 ರಂದು ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿ ಬಳಿ ಮತಯಾಚನೆ ಸಮಯದಲ್ಲಿ ವ್ಯಕ್ತಿಯೊಬ್ಬರಿಗೆ ಹಣದ ಆಮಿಷವೊಡ್ಡಿದ್ದಾರೆ. ಹಾಗೂ ಅವರ ಕಾರು ಚಾಲಕ ವ್ಯಕ್ತಿಯೊಬ್ಬರಿಗೆ ಹಣ ನೀಡುತ್ತಿರುವುದು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ ಎಂದು ಗುಂಡ್ಲುಪೇಟೆ ಟೌನ್ ನಿವಾಸಿ ಎಲ್. ಸುರೇಶ್ ದೂರು ಅರ್ಜಿ ಸಲ್ಲಿಸಿದ್ದರು.[ಕಾಂಗ್ರೆಸ್ ನಿಂದ ಹಣ ಪಡೀರಿ, ಲಿಂಗಾಯಿತ್ರ ಮನೆಗೆ ಹೋಗ್ಬೇಡಿ: ಈಶ್ವರಪ್ಪ]

ಮತದಾರರಿಗೆ ಹಣದ ಆಮಿಷ ನೀಡಿ ಪ್ರಚೋದಿಸುವುದು ಅಸಂಜ್ಞೆಯ ಅಪರಾಧವಾದ್ದರಿಂದ ಪ್ರಕರಣ ನೊಂದಾಯಿಸಿಕೊಂಡು ಪ್ರಥಮ ವರ್ತಮಾನ ವರದಿ ದಾಖಲಿಸಲಾಗಿದೆ. ನ್ಯಾಯಾಲಯದಿಂದ ಅನುಮತಿ ಪಡೆದು ಮಾ.28 ರಂದು ಐಪಿಸಿ ಸೆಕ್ಷನ್ 171 (ಬಿ)(ಸಿ)(ಇ) ಮತ್ತು (ಎಫ್)ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

English summary
First information report filled against food and public supply minister UT Khader in Gundlupet. It is alleged that minister offer bribe to voters ahead of Gundlupet by-election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X