ವಕೀಲನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ: ಕಲಾಪ ಬಹಿಷ್ಕರಿಸಿದ ವಕೀಲರು
ಚಾಮರಾಜನಗರ, ಜೂನ್ 03: ಗುಂಡ್ಲುಪೇಟೆ ಪಟ್ಟಣದ ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ವಕೀಲರು ನ್ಯಾಯಾಲಯದ ಕಲಾಪದಿಂದ ದೂರ ಉಳಿದು ಕಲಾಪಗಳನ್ನು ಬಹಿಷ್ಕರಿಸಿದ ಘಟನೆ ನಡೆದಿದೆ.
ಪಟ್ಟಣದ ನ್ಯಾಯಾಲಯಗಳ ಆವರಣದಲ್ಲಿ ಶನಿವಾರ ಸಮಾವೇಶಗೊಂಡ ವಕೀಲ ಸಂಘದ ಪದಾಧಿಕಾರಿಗಳು ತಮ್ಮ ಸಹೋದ್ಯೋಗಿ ವಕೀಲರಾದ ರಂಜಿತ್ ಅವರ ಮೇಲೆ ಪೋಲೀಸರು ನಡೆಸಿದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದರು.

ಈ ಸಂದರ್ಭದಲ್ಲಿ ಗುಂಡ್ಲುಪೇಟೆ ವಕೀಲರ ಸಂಘದ ಅಧ್ಯಕ್ಷ ಟಿ.ಎಸ್. ವೆಂಕಟೇಶ್ ಮಾತನಾಡಿ 'ವಕೀಲ ರಂಜಿತ್ ಅವರ ಮೇಲೆ ಹಲ್ಲೆ ನಡೆಸಿದ ಪೊಲೀಸರನ್ನು ಅಮಾನತು ಮಾಡುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಲ್ಲಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ವಕೀಲರ ಸಂಘದ ಪದಾಧಿಕಾರಿಗಳಾದ ಹೆಚ್.ವಿ. ರವಿಕಾಂತ್ , ಬಿ. ಶಿವಣ್ಣ, ಎಸ್.ಎನ್. ನಂದೀಶ್ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಅನಿಲ್ ಕುಮಾರ್, ಕಿರಣ್, ಪುಟ್ಟಸ್ವಾಮಿ, ಜವರಾಜು, ಟಿಪ್ಪು ಸುಲ್ತಾನ್ , ರಾಜೇಶ್, ಶಾಂತಮಲ್ಲಪ್ಪ , ಮನು ಶ್ಯಾನುಭೋಗ್ ಸೇರಿದಂತೆ ವಕೀಲರ ಸಂಘದ ಸದಸ್ಯರು ಹಾಜರಿದ್ದರು.
ಘಟನೆಯ ಹಿನ್ನೆಲೆ ಏನು?
ಕೌಟುಂಬಿಕ ಸಮಸ್ಯೆ ಸಂಬಂಧ ವಕೀಲ ರಂಜಿತ್ ಅವರ ಮಾವ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಠಾಣೆಗೆ ಕರೆದೊಯ್ದ ಪೊಲೀಸರು ವಕೀಲ ರಂಜಿತ್ ಅವರ ಮೇಲೆ ಕಳೆದ ಬುಧವಾರ ರಾತ್ರಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಆಸ್ಪತ್ರೆಗೆ ದಾಖಲಾಗಿದ್ದ ರಂಜಿತ್ ಅವರು ವಕೀಲರ ಸಂಘಕ್ಕೆ ದೂರು ನೀಡಿದ್ದರು. ಇಂದು ನ್ಯಾಯಲಯದ ವಕೀಲರ ಸಂಘದ ಆವರಣದಲ್ಲಿ ವಕೀಲರು ಸಭೆ ನಡೆಸಿ ನಡಾವಳಿ ಅಂಗೀಕರಿಸಿ ನ್ಯಾಯಾಲಯದ ಕಲಾಪವನ್ನು ಬಹಿಷ್ಕರಿಸಿ, ಕಲಾಪದಿಂದ ಹೊರಗುಳಿದಿದ್ದಾರೆ.
ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಪರಿಹಾರ ವಿತರಣೆ
ಗುಂಡ್ಲುಪೇಟೆ: ಬಂಡೀಪುರ ಹುಲಿ ಯೋಜನೆಯ ಸರಗೂರು ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ಅರಣ್ಯ ಇಲಾಖೆ ಪರಿಹಾರದ ಚೆಕ್ ವಿತರಿಸಿದೆ. ಹೆಡಿಯಾಲ ಉಪವಿಭಾಗದ ಮೊಳೆಯೂರು ವಲಯದ ಕಾಡಂಚಿನ ಗ್ರಾಮದಲ್ಲಿ ಜೂ.1ರಂದು ರಾತ್ರಿ ಜಮೀನಿನ ಕಾವಲು ಕಾಯಲು ತೆರಳಿದ್ದ ರವಿಕುಮಾರ್ ಮೇಲೆ ಕಾಡಾನೆ ದಾಳಿ ನಡೆಸಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಮೃತ ರೈತನ ನಿವಾಸಕ್ಕೆ ತೆರಳಿದ ಹುಲಿ ಯೋಜನೆಯ ಕ್ಷೇತ್ರ ನಿರ್ದೇಶಕ ಡಾ.ರಮೇಶ್ಕುಮಾರ್ ಮೃತರ ಕುಟುಂಬದ ಸದಸ್ಯರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು. ಈ ವೇಳೆ ಎಸಿಎಫ್ ಕೆ.ಪರಮೇಶ್, ಹೆಡಿಯಾಲ, ಎನ್.ಬೇಗೂರು, ಗುಂಡ್ರೆ, ಮೊಳೆಯೂರು ವಲಯಗಳ ಆರ್ಎಫ್ಒಗಳು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications