9 ವರ್ಷಗಳಿಂದ ಆರೋಗ್ಯ ಸಹಾಯಕಿಯರಿಲ್ಲದೆ ಆಸ್ಪತ್ರೆಗೆ ಬೀಗ!
ಆರೋಗ್ಯ ಸಹಾಯಕಿಯರಿಲ್ಲದೆ ಚಾಮರಾಜನಗರ ಗುಂಡ್ಲುಪೇಟೆಯ ಮಲ್ಲಯನಪುರ ಗ್ರಾಮದ 'ಕಿರಿಯ ಆರೋಗ್ಯ ಸಹಾಯಕಿ ಕೇಂದ್ರ' ಕಳೆದ 9 ವರ್ಷಗಳಿಂದ ಬಾಗಿಲು ಎಳೆದುಕೊಂಡಿದೆ.
ಚಾಮರಾಜನಗರ, ಜನವರಿ 26: ಆರೋಗ್ಯ ಸಹಾಯಕಿರಿಲ್ಲದೆ ಇಲ್ಲಿನ ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಕಿರಿಯ ಆರೋಗ್ಯ ಕೇಂದ್ರಕ್ಕೆ ಕಳೆದ 98 ವರ್ಷಗಳಿಂದ ಬೀಗ ಜಡಿಯಲಾಗಿದೆ.
ಗ್ರಾಮೀಣ ಭಾಗದ ಜನರ ಉಪಯೋಗಕ್ಕಾಗಿ ಹಲವು ವರ್ಷಗಳ ಹಿಂದೆ ಮಲ್ಲಯನಪುರ ಗ್ರಾಮದಲ್ಲಿ ಕಿರಿಯ ಆರೋಗ್ಯ ಕೇಂದ್ರ ತೆರೆಯಲಾಗಿತ್ತು. ಗ್ರಾಮದಲ್ಲಿ 2,700 ಜನಸಂಖ್ಯೆಯಿದ್ದು ಈ ಹಿಂದೆ ಇವರೆಲ್ಲಾ ಕಾಯಿಲೆ ಬಂದರೆ ದೂರದ ಕಗ್ಗಳದಹುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಬೇಕಾಗಿತ್ತು. ಇದನ್ನು ತಪ್ಪಿಸುವ ಸಲುವಾಗಿಯೇ ಮಲ್ಲಯ್ಯನಪುರದಲ್ಲಿ ಕಿರಿಯ ಆರೋಗ್ಯ ಸಹಾಯಕಿ ಕೇಂದ್ರವನ್ನು ತೆರೆಯಲಾಗಿತ್ತು.[ಮತ್ತೆ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದವು ಮೂರು ಹುಲಿ]

ದಶಕಗಳ ಹಿಂದೆ ಇಲ್ಲಿ ಎಲ್ಲವೂ ಸರಿಯಾಗಿತ್ತು. ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಆರೋಗ್ಯ ಸಹಾಯಕಿ ನಿತ್ಯ ಆರೋಗ್ಯ ಕೇಂದ್ರದ ಬಾಗಿಲು ತೆರೆಯುತ್ತಿದ್ದರು. ಗ್ರಾಮದ ಮಹಿಳೆಯರು ಭೇಟಿ ನೀಡಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯುತ್ತಿದ್ದರು. ಆದರೆ ಆಗಿದ್ದ ಆರೋಗ್ಯ ಸಹಾಯಕಿ 9 ವರ್ಷಗಳ ಹಿಂದೆ ವರ್ಗಾವಣೆ ಮಾಡಿಕೊಂಡು ತೆರಳಿದ ಕಾರಣದಿಂದ ಕಿರಿಯ ಆರೋಗ್ಯ ಸಹಾಯಕಿ ಕೇಂದ್ರಕ್ಕೆ ಬೀಗ ಬಿದ್ದಿದೆ. ನಂತರ ಇದುವರೆಗೂ ಸಹಾಯಕಿಯರ ನೇಮಕವಾಗಿಲ್ಲ.
ಇದರಿಂದ ಗ್ರಾಮದ ಮಹಿಳೆಯರು, ಗರ್ಭಿಣಿಯರು ಹಾಗೂ ಬಾಣಂತಿಯರು ಸಕಾಲಕ್ಕೆ ವೈದ್ಯಕೀಯ ಸೇವೆ ದೊರಕದೆ ಪರದಾಡುವಂತಾಗಿದೆ. ಆರೋಗ್ಯ ಸಹಾಯಕಿಯರಿಲ್ಲದೆ ಆಶಾ ಕಾರ್ಯಕರ್ತೆಯರೇ ಪ್ರಾಥಮಿಕ ಆರೋಗ್ಯ ಸೇವೆ ನೀಡುವಂತಾಗಿದೆ.[ಸತ್ತ ಆನೆಯ ದಂತ ಕದ್ದ ಚೋರರ ಬಂಧನ]
ಗ್ರಾಮದಲ್ಲಿ ಬಡವರು, ಕೂಲಿಕಾರ್ಮಿಕರು, ಹಿಂದುಳಿದ ವರ್ಗದ ಜನರೇ ಹೆಚ್ಚಾಗಿದ್ದಾರೆ. ಹೀಗಾಗಿ ಇವರಿಗೆಲ್ಲ ದೂರದ ಕಗ್ಗಳದಹುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗವುದು ಕಷ್ಟವಾಗಿದೆ. ಆದ್ದರಿಂದ ಆದಷ್ಟು ಬೇಗ ಮಹಿಳಾ ಆರೋಗ್ಯ ಸಹಾಯಕಿಯನ್ನು ನೇಮಕ ಮಾಡಿ, ಕೇಂದ್ರ ತೆರೆಯಿರಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಗ್ಗಳದಹುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿವೇಕ್ ಅವರು ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆಯಿಂದಾಗಿ ನೇಮಕಾತಿ ನೆನೆಗುದಿಗೆ ಬಿದ್ದಿತ್ತು. ಇತ್ತೀಚೆಗೆ ಗ್ರಾಮಕ್ಕೆ ನೇಮಕ ಮಾಡಿದ್ದ ಕಿರಿಯ ಆರೋಗ್ಯ ಸಹಾಯಕಿ ಹೆರಿಗೆ ರಜೆಗೆ ತೆರಳಿದ್ದಾರೆ. ಹೀಗಾಗಿ ತೊಂದರೆಯಾಗಿದೆ ವಾರಕ್ಕೊಮೆ ತಾವೇ ಗ್ರಾಮಕ್ಕೆ ತೆರಳಿ ಆರೋಗ್ಯ ಸೇವೆ ನೀಡುವುದಾಗಿ ತಿಳಿಸಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications