Wayanad landslide: ವಯನಾಡಿನ ಗುಡ್ಡಕುಸಿತ ಸ್ಥಳಕ್ಕೆ ಗುಂಡ್ಲುಪೇಟೆ ಶಾಸಕ ಭೇಟಿ
ಚಾಮರಾಜನಗರ, ಆಗಸ್ಟ್, 08: ಕೇರಳದ ವಯನಾಡಿನ ಗುಡ್ಡಕುಸಿತ ಸ್ಥಳಕ್ಕೆ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಭೇಟಿ ನೀಡಿ, ಪರಿಶೀಲನೆ ನಡೆಸುವ ಜೊತೆಗೆ ಸಂತ್ರಸ್ಥ ಕನ್ನಡಿಗರಿಂದ ಮಾಹಿತಿ ಪಡೆದರು.
ವಯನಾಡಿನ ಮುಂಡಕ್ಕೈ, ಚುರಾಲ್ ಮಲೆ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ನೈಜತೆ ಅರಿಯುವ ಜೊತೆಗೆ ಅಲ್ಲಿನ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ವೇಳೆ ಗುಡ್ಡ ಕುಸಿತದಲ್ಲಿ ನಿರಾಶ್ರಿತರಾಗಿರುವ ಚಾಮರಾಜನಗರ ಜಿಲ್ಲೆಯ ಕೆಲ ಮಂದಿಯನ್ನು ಭೇಟಿ ಮಾಡಿ ವೈಯಕ್ತಿಕ ನೆರವಿನ ಚೆಕ್, ವಿವಿಧ ಪರಿಕರಗಳನ್ನು ನೀಡುವ ಜೊತೆಗೆ ಸಾಂತ್ವನ ಹೇಳಿದರು.

ಸಮಸ್ಯೆ ಇದ್ದರೇ ದೂರವಾಣಿ ಮೂಲಕ ತಿಳಿಸಿ, ಕರ್ನಾಟಕ ಸರ್ಕಾರ ಕನ್ನಡಿಗರ ರಕ್ಷಣೆಗೆ ಇರಲಿದ್ದು 100 ಮನೆಗಳನ್ನು ನಿರ್ಮಿಸಿ ಕೊಡಲಿದೆ. ನಿಮ್ಮ ಸಮಸ್ಯೆಗಳನ್ನು ಸಿಎಂ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು.
ಕನ್ನಡತಿ ಮೇಘಶ್ರೀ ಕಾರ್ಯಕ್ಕೆ ಭಾರೀ ಮೆಚ್ಚುಗೆ: ದೇವರ ನಾಡು ಕೇರಳದ ವಯನಾಡಿನಲ್ಲಿ ಭೂಕುಸಿತ ಸಂಭವಿಸಿ ರಾಜ್ಯದ ಬಹುತೇಕ ಮಂದಿ ಅಸುನೀಗಿದ ಘಟನೆ ನಡೆದಿದೆ. ಹಾಗೆಯೇ ಪರಿಹಾರ ಕಾರ್ಯವು ಕೂಡ ನಡೆಯುತ್ತಿದ್ದು, ಇನ್ನು ಈ ಭೀಕರ ಭೂ ಕುಸಿತ ದುರಂತದ ಪರಿಹಾರ ಕಾರ್ಯದಲ್ಲಿ ತೊಡಗಿದವರಲ್ಲಿ ವಯನಾಡಿನ ಜಿಲ್ಲಾಧಿಕಾರಿ ಮೇಘಶ್ರೀಯವರೂ ಒಬ್ಬರು.
ಹಗಲು ಇರುಳೆನ್ನದೆ, ಪರಿಹಾರ ಕಾರ್ಯದಲ್ಲಿ ತೊಡಗಿರುವ ಜಿಲ್ಲಾಧಿಕಾರಿ ಮೇಘಶ್ರೀಯವರು ಕನ್ನಡಿಗರು ಮತ್ತು ಚಿತ್ರದುರ್ಗ ಜಿಲ್ಲೆಯವರು ಎನ್ನುವುದು ಹೆಮ್ಮೆಯ ವಿಷಯವಾಗಿದೆ.
ಸರಣಿ ಭೂಕುಸಿತ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದು, ನೂರಾರು ಮಂದಿ ಮಣ್ಣಿನಡಿ ಸಿಲುಕಿ ಪ್ರಾಣ ಬಿಟ್ಟಂತಹ ದುರ್ಘಟನೆ ನಡೆದಿದೆ. ಇನ್ನು ಮಣ್ಣಿನಲ್ಲಿ ಸಿಲುಕಿದ ಹಲವು ಜನರ ರಕ್ಷಣಾ ಕಾರ್ಯಾಚರಣೆಗೆಂದು ಘಟನೆ ನಡೆದ ನಡು ರಾತ್ರಿಯಲ್ಲಿಯೇ ಜಿಲ್ಲಾಧಿಕಾರಿ ಮೇಘಶ್ರೀ ಧಾವಿಸಿ ಪರಿಹಾರ ಕಾರ್ಯದಲ್ಲಿ ತೊಡಗಿರುವುದು ಕನ್ನಡಿಗರಿಗೆಲ್ಲಾ ಹೆಮ್ಮೆಯ ಸಂಗತಿಯಾಗಿದೆ.
ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದ ಎಸ್ಬಿಐ ಬ್ಯಾಂಕ್ನ ನಿವೃತ್ತ ವ್ಯವಸ್ಥಾಪಕ ರುದ್ರಮುನಿ ಮತ್ತು ದಿ.ರುಕ್ಮಿಣಿದೇವಿಯವರ ಪುತ್ರಿಯಾದ ಮೇಘಶ್ರೀಯವರು ಇಂಜಿನಿಯರಿಂಗ್ ಪಧವೀಧರೆ. ಆರಂಭದ ವಿದ್ಯಾಭ್ಯಾಸವನ್ನು ದೊಡ್ಡೇರಿ, ಚಳ್ಳಕೆರೆ, ಚಿತ್ರದುರ್ಗದಲ್ಲಿ ಮುಗಿಸಿ, ಉನ್ನತ ವ್ಯಾಸಂಗವನ್ನು ಬೆಂಗಳೂರಿನಲ್ಲಿ ಮುಗಿಸುತ್ತಾರೆ. ನಂತರ ಒಂದೆರಡು ವರ್ಷ ಖಾಸಗಿ ಉದ್ಯೋಗ ಮಾಡಿ ನಂತರ ಐಎಎಸ್ ಪರೀಕ್ಷೆ ಉತ್ತೀರ್ಣರಾಗಿದ್ದಾರೆ.
ಪ್ರಾರಂಭದಲ್ಲಿ ತಿರುವನಂತಪುರ ಮುಂತಾದ ಕಡೆ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿ ಈಗ್ಗೆ 20 ದಿನಗಳ ಹಿಂದೆ ವಯನಾಡಿಗೆ ಜಿಲ್ಲಾಧಿಕಾರಿಯಾಗಿ ನಿಯುಕ್ತಿಯಾಗುತ್ತಾರೆ. ಸೇವೆಗೆ ಹಾಜರಾದ ಆರಂಭದಲ್ಲೇ ದೊಡ್ಡ ದುರ್ಘಟನೆಯ ಪರಿಹಾರ ಕಾರ್ಯದ ಜವಾಬ್ದಾರಿ ಹೊತ್ತಿರುವ ಮೇಘಶ್ರೀಯವರು ಪ್ರತಿ ನಿಮಿಷವನ್ನು ಭೂ ಕುಸಿತದಡಿ ಸಿಲುಕಿರುವವರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಈಗಾಗಲೇ ಭೂ ಕುಸಿತಕ್ಕೆ ಬಲಿಯಾದ ದುರ್ದೈವಿಗಳ ಸಾಮೂಹಿಕ ಅಂತ್ಯ ಸಂಸ್ಕಾರದಲ್ಲೂ ನಿಂತು ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ.
ಜಿಲ್ಲಾಧಿಕಾರಿ ಮೇಘಶ್ರೀಯವರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಸೊಸೆ ಎಂಬುದು ಮತ್ತೊಂದು ವಿಶೇಷತೆಯಾಗಿದೆ. ಪರಪ್ಪನ ಅಗ್ರಹಾರ ಕಾರಾಗೃಹದ ಚೀಫ್ ಸೂಪರಿಂಟೆಡೆಂಟ್ ಆಗಿ ನಿವೃತ್ತರಾಗಿರುವ ತಾಲೂಕಿನ ಹರ್ತಿಕೋಟೆ ಗ್ರಾಮದ ವೀರೇಂದ್ರ ಸಿಂಹರ ಮಗ ಡಾ.ವಿಕ್ರಮಸಿಂಹರ ಪತ್ನಿ ಆಗಿದ್ದಾರೆ. ಇವರಿಗೆ ಧೃತಿ ಮತ್ತು ವಿಸ್ಮಯ ಎಂಬ ಇಬ್ಬರು ಮಕ್ಕಳಿದ್ದಾರೆ.
ಘಟನೆಯ ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಮೇಘಶ್ರೀಯವರು ಜುಲೈ 10ರಂದು ವಯನಾಡು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಕ್ಷಣಾ ಕಾರ್ಯ, ಶವಗಳ ಗುರುತು ಪತ್ತೆ, ಸತ್ತವರ ಅಂತ್ಯ ಸಂಸ್ಕಾರ, ಉಳಿದವರಿಗೆ ಪುನರ್ವಸತಿಯಂತಹ ಹತ್ತಾರು ಕಾರ್ಯಗಳಲ್ಲಿ ತೊಡಗಿರುವ ಡಿಸಿ ಮೇಘಶ್ರೀಯವರಿಗೆ ಅಭಿನಂದನೆಗಳ ಸರಮಾಲೆಯೇ ಹರಿದುಬರುತ್ತಿದೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications