ಬೀದಿನಾಯಿಗಳ ದಾಳಿಗೆ ಕುರಿಗಳು ಬಲಿ!
ಬೀದಿ ನಾಯಿಗಗಳು ದಾಳಿ ಮಾಡಿ 4 ಕುರಿಗಳನ್ನು ಕೊಂದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ, ಜನವರಿ 26: ಬೀದಿನಾಯಿಗಳು ದಾಳಿ ನಡೆಸಿ ನಾಲ್ಕು ಕುರಿಗಳನ್ನು ಸಾಯಿಸಿ, ಎಂಟು ಕುರಿಗಳನ್ನು ಗಾಯಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ.
ಬೆಳಚಲವಾಡಿ ಗ್ರಾಮದ ಪುಟ್ಟಮ್ಮ ಹಾಗೂ ಸಣ್ಣಮ್ಮ ಎಂಬುವವರು ತಮ್ಮ ಕುಟುಂಬದ ನಿರ್ವಹಣೆಗಾಗಿ ಕುರಿ ಸಾಕಾಣಿಕೆಯನ್ನೇ ಅವಲಂಬಿಸಿದ್ದಾರೆ. ಇದೀಗ ಬೀದಿ ನಾಯಿಗಳು ಕೃತ್ಯದಿಂದ ಅವರೆಲ್ಲಾ ತಮ್ಮ ಕುರಿಗಳನ್ನು ಕಳೆದುಕೊಂಡು ಆತಂಕಕ್ಕೀಡಾಗಿದ್ದಾರೆ.[ಬೀದಿ ನಾಯಿ ದತ್ತು ಪಡೆವ ಅಭಿಯಾನಕ್ಕೆ ಭಾರೀ ಸ್ಪಂದನೆ]

ಎಂದಿನಂತೆ ಪುಟ್ಟಮ್ಮ ಮತ್ತು ಸಣ್ಣಮ್ಮ ಗ್ರಾಮದ ಸಮೀಪದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಎಂಟು ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ ವೇಳೆಗೆ ನಾಯಿಗಳು ಓಡಿ ಹೋಗಿವೆ. ಆದರೆ ಅಷ್ಟರಲ್ಲಾಗಲೇ ನಾಯಿಗಳು 4 ಕುರಿಗಳ ಕುತ್ತಿಗೆಗೆ ಕಚ್ಚಿ ರಕ್ತ ಕುಡಿದು ಸಾಯಿಸಿವೆ. 8 ಕುರಿಗಳು ನಾಯಿಗಳ ದಾಳಿಗೆ ಗಂಭೀರ ಗಾಯಗೊಂಡಿವೆ.
ಪುಟ್ಟಮ್ಮ ಮತ್ತು ಸಣ್ಣಮ್ಮ ಅವರಿಗೆ ಸೇರಿದ ತಲಾ 2 ಕುರಿಗಳು ಸತ್ತಿವೆ. ನಾಯಿಯ ದಾಳಿಯಿಂದ ಬೆಚ್ಚಿರುವ ಗ್ರಾಮಸ್ಥರು 'ರಕ್ತದ ರುಚಿಕಂಡಿರುವ ಈ ನಾಯಿಗಳು ಮಕ್ಕಳ ಮತ್ತು ಜಾನುವಾರುಗಳ ಮೇಲೂ ದಾಳಿ ನಡೆಸಬಹುದೆಂದು ಆತಂಕ ವ್ಯಕ್ತಪಡಿಸಿದ್ದಾರೆ.[ಡಿಕೆ ಶಿವಕುಮಾರ್ ಗೆ ಕಚ್ಚಿದ ಕನಕಪುರ ಬೀದಿ ನಾಯಿ]
ಬೇಗೂರು ಗ್ರಾ.ಪಂ ವ್ಯಾಪ್ತಿಗೆ ಬರುವ ಬೆಳಚಲವಾಡಿ ಗ್ರಾಮದಲ್ಲಿ ಕಳೆದ ತಿಂಗಳಷ್ಟೇ ನಾಯಿಗಳು ದಾಳಿ ನಡೆಸಿ ಸುಮಾರು ಎಂಟು ಕುರಿಗಳನ್ನು ತಿಂದು ಹಾಕಿದ್ದವು. ಈ ಪ್ರಕರಣ ಹಸಿರಿರುವಾಗಲೇ ಇದೀಗ ಮತ್ತೊಂದು ಪ್ರಕರಣ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೀಡು ಮಾಡಿದೆ. ಈ ಕೂಡಲೇ ಗ್ರಾಪಂ ಅಧಿಕಾರಿಗಳು ನಾಯಿಗಳನ್ನು ಓಡಿಸಬೇಕು ಮತ್ತು ಕುರಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಬೇಡಿಕೆ ಕೇಳಿ ಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications