ಚರಂಡಿ ನೀರನ್ನೇ ಹೊತ್ತೊಯ್ದ ಹಂಗಳ ಗ್ರಾಮಸ್ಥರು!
ಚಾಮರಾಜನಗರ: ಕುಡಿಯುವ ನೀರಿಗೆ ಹಾಹಾಕಾರ ಎದ್ದಿರುವ ಕಾರಣ ನೀರು ಬಾರದೆ ಕಂಗಾಲಾದ ಗ್ರಾಮಸ್ಥರು ಪೈಪ್ ಒಡೆದು ಚರಂಡಿ ಸೇರುತ್ತಿದ್ದ ನೀರನ್ನೇ ಬಳಕೆಗೆ ಕೊಂಡೊಯ್ದ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನಲ್ಲಿಯೇ ಹೆಸರುವಾಸಿಯಾಗಿರುವ ಹಂಗಳ ಗ್ರಾಮಕ್ಕೆ ಇಂತಹ ದುಸ್ಥಿತಿ ಬಂದಿರುವುದು ನಿಜಕ್ಕೂ ವಿಷಾದದ ಸಂಗತಿಯಾಗಿದೆ. ಈಗಾಗಲೇ ಈ ಗ್ರಾಮಕ್ಕೆ ಅತೀ ಹೆಚ್ಚು ಜನಸಂಖ್ಯೆಯುಳ್ಳ ಹಾಗೂ ಎರಡು ಬಾರಿ ಗಾಂಧಿಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದ ಹೆಗ್ಗಳಿಕೆಯಿದೆ. ಆದರೆ ಇದೀಗ ಹನಿ ನೀರಿಗಾಗಿ ಪರದಾಡುವ ಪರಿಸ್ಥಿತಿ ಬಂದೊದಗಿರುವುದು ಗ್ರಾಮಸ್ಥರು ಆತಂಕ ಪಡುವಂತಾಗಿದೆ.

ಗ್ರಾಮದ ಹಲವು ಬೀದಿಗಳಲ್ಲಿ ನೀರಿನ ಸಮಸ್ಯೆ ಆರಂಭವಾಗಿದ್ದು ಪ್ರತಿನಿತ್ಯ ಗ್ರಾಮಸ್ಥರು ಖಾಲಿ ಕೊಡಹಿಡಿದು ನೀರಿಗಾಗಿ ಪರಿತಪಿಸುವಂತಾಗಿದೆ. ಇನ್ನು ಗ್ರಾಮದ ವಾಲ್ಮೀಕಿ ಬಡಾವಣೆಯಿದ್ದು ಇಲ್ಲಿ ಕುಡಿಯುವ ನೀರು ಸಿಕ್ಕಿ ಬರೋಬ್ಬರಿ 15 ದಿನಗಳಾಗಿದೆಯಂತೆ.
ಜನ ಬೆಳಗಿನ ಜಾವವೇ ಎದ್ದು ಬಂದು ನೀರಿಗಾಗಿ ಕಾಯುವ ದೃಶ್ಯ ಸಾಮಾನ್ಯವಾಗಿದೆ. ಈ ನಡುವೆ ನೀರಿಗಾಗಿ ಕೊಡ ಹಿಡಿದು ಬಂದ ಜನ ನಲ್ಲಿ ಮುಂದೆ ಸಾಲಾಗಿ ನಿಂತರೆ ಇನ್ನೊಂದೆಡೆ ಪೈಪ್ ಒಡೆದು ನೀರು ಚರಂಡಿ ಪಾಲಾಗಿದೆ. ಆದರೆ ನೀರಿಲ್ಲದೆ ಬವಣೆ ಪಟ್ಟ ಮಂದಿ ಅದನ್ನೇ ಕೊಡಗಳಲ್ಲಿ ತುಂಬಿಸಿ ಮನೆಗೆ ಹೊತ್ತೊಯ್ಯುತ್ತಿದ್ದ ದೃಶ್ಯ ಹೃದಯ ಹಿಂಡಿತ್ತು.

ಈ ಬಗ್ಗೆ ವಿಚಾರಿಸಿದರೆ, ಕಳೆದ 15 ದಿನದಿಂದ ನೀರಿಗಾಗಿ ಕಾದು ಸುಸ್ತಾಗಿದ್ದು ನೀರಿಲ್ಲದೆ ಪರದಾಡುವಂತಾಗಿದೆ. ಹೀಗಾಗಿ ಬೇರೆ ದಾರಿ ಕಾಣದೆ ಚರಂಡಿ ನೀರನ್ನೆ ತುಂಬಿಸಿಕೊಂಡು ಹೋಗುತ್ತಿರುವುದಾಗಿ ಹೇಳುತ್ತಿದ್ದಾರೆ. ವಿಷಾದದ ಸಂಗತಿ ಎಂದರೆ ತಾ.ಪಂ.ಅಧ್ಯಕ್ಷರು ಇದೇ ಗ್ರಾಮದವರಾದರೂ ನೀರಿನ ವ್ಯವಸ್ಥೆ ಮಾಡುವಲ್ಲಿ ವಿಫಲರಾಗಿರುವುದು ದುರಂತವೇ ಸರಿ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications