ಕಿಚ್ಚುಗತ್ತಿ ಮಾರಮ್ಮನ 'ಅನ್ನ ಪ್ರಸಾದ' ತಿಂದ ಭಕ್ತರು ದುರ್ಮರಣ
ಹನೂರು(ಚಾಮರಾಜನಗರ), ಡಿಸೆಂಬರ್ 14: ಹನೂರು ತಾಲೂಕಿನ ಸಾಲ್ವಡಿ ಗ್ರಾಮದ ಕಿಚ್ಚುಗತ್ತಿ ಮಾರಮ್ಮನ ದೇಗುಲದ ಸಮಾರಂಭದ ಸಂಭ್ರಮಕ್ಕೆ ಸೂತಕದ ಛಾಯೆ ಬಡಿದಿದೆ.
ದೇಗುಲದ ಗೋಪುರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಕ್ತದಿಂದ ಪಾಲ್ಗೊಂಡಿದ್ದವರಿಗೆ ಅನ್ನ ಪ್ರಸಾದವನ್ನು ನೀಡಲಾಗಿತ್ತು. ಆದರೆ, ಪ್ರಸಾದ ಸೇವಿಸಿದ 40ಕ್ಕೂ ಅಧಿಕ ಭಕ್ತರ ಪೈಕಿ ಐವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಗೋಪಿಯಣ್ಣ, ಶಾಂತ, ಪಾಪಣ್ಣ, ಅಣ್ಣಯಪ್ಪ, ಅಡುಗೆ ಭಟ್ಟರ ಮಗಳು ಅನಿತಾ ಎಂದು ಗುರುತಿಸಲಾಗಿದೆ. ಪ್ರಸಾದವನ್ನು ಸೇವಿಸಿದ 20ಕ್ಕೂ ಅಧಿಕ ಕಾಗೆಗಳು ಕೂಡಾ ಅಸ್ವಸ್ಥಗೊಂಡು ಜೀವನ್ಮರಣ ಹೋರಾಟ ನಡೆಸಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಅನ್ನ ಪ್ರಸಾದವನ್ನು ತಿಂದು ಒದ್ದಾಡುತ್ತಿದ್ದ ಅನೇಕ ಭಕ್ತರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಹನೂರಿನ ಶಾಸಕ ನಾಗೇಂದ್ರ ಅವರು, ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ, ಅನ್ನ ಪ್ರಸಾದದ ಸ್ಯಾಂಪಲ್ ಪಡೆದು ಲ್ಯಾಬ್ ಗೆ ಕಳಿಸಲಾಗುತ್ತಿದೆ. ಮೃತಪಟ್ಟವರ ಕುಟುಂಬಕ್ಕೆ ನನ್ನ ಸಾಂತ್ವನವನ್ನು ತಿಳಿಸುತ್ತಿದ್ದೇನೆ. ಸದ್ಯ ಬೆಳಗಾವಿಯಲ್ಲಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದೇನೆ. ಆದಷ್ಟು ಬೇಗ ಹನೂರಿಗೆ ತೆರಳುತ್ತೇನೆ ಎಂದರು.

-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications