Get Updates
Get notified of breaking news, exclusive insights, and must-see stories!

ಹನೂರು: ಮಾದಪ್ಪನ ದರ್ಶನ ಪಡೆದು ಜನರೆದುರೇ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಆಘಾತಕಾರಿ ಆತ್ಮಹತ್ಯೆ ಯತ್ನ ಪ್ರಕರಣ ನಡೆದಿದೆ. ಇದನ್ನು ನೋಡಿದ ಭಕ್ತಾದಿಗಳು ಬೆಚ್ಚಿ ಬಿದ್ದಿದ್ದಾರೆ.

ಚಾಮರಾಜನಗರ, ಫೆಬ್ರವರಿ, 20: ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಆಘಾತಕಾರಿ ಆತ್ಮಹತ್ಯೆ ಯತ್ನ ಪ್ರಕರಣ ನಡೆದಿದ್ದು, ಇದನ್ನು ನೋಡಿದ ಭಕ್ತಾದಿಗಳು ಬೆಚ್ಚಿ ಬಿದ್ದಿದ್ದಾರೆ.

ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ನಾಗಮಲೆ ಎಂಬಲ್ಲಿ ಬಂಡೆ ಮೇಲಿಂದ ಹಾರಿ ಬೆಂಗಳೂರಿನ ಕೆಂಗೇರಿಯ ಶ್ರೀನಿಧಿ ಎಂಬ ಯುವಕ ಆತ್ಮಹತ್ಯೆ ಯತ್ನ ಮಾಡಿಕೊಂಡಿದ್ದಾನೆ. ನಾಗಮಲೆಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಭಕ್ತರೊಟ್ಟಿಗೆ ಸೇರಿಕೊಂಡ ಶ್ರೀನಿಧಿ ತನ್ನ ತಾಯಿಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿದ್ದಾನೆ. ನಂತರ ಹರಕೆ ಘಂಟೆಯನ್ನು ದೇವರಿಗೆ ಅರ್ಪಿಸಿದ್ದಾರೆ. ಇನ್ನೇನು ಪೂಜೆ ಸಲ್ಲಿಸಿ ಹಿಂತಿರುಗುವಾಗ ಬಂಡೆಯೊಂದರ ಮೇಲೆ ಹತ್ತಿ ಜಿಗಿದಿದ್ದಾನೆ ಎಂದು ಪ್ರತ್ಯೇಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡ ಆತನನ್ನು ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹಾಗೆಯೇ ಹೆಚ್ಚಿನ ಚಿಕಿತ್ಸೆಗಾಗಿ ಸಂಬಧಿಕರು ಬೇರೆಡೆಗೆ ಕರೆದೊಯ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Hanur: Young man jumped from Male Mahadeshwara Hills

ಸಂತಸ ಮೂಡಿಸಿದ ಪ್ರಧಾನಿ ಟ್ವೀಟ್‌

ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಟ್ವೀಟ್‌ವೊಂದು ಬಂಡೀಪುರ ಅರಣ್ಯ ಇಲಾಖೆಯ ಅಧಿಕಾರಿಗಳ ಮುಖದಲ್ಲಿ ಸಂತಸ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿದ್ದು ಯಾವ ಕಾರಣಕ್ಕೆ ಅನ್ನುವುದನ್ನು ಇಲ್ಲಿ ತಿಳಿಸಲಾಗಿದೆ ನೀವೆ ನೋಡಿ.

ಆನೆಯನ್ನು ಬದುಕಿಸಿದ ಅರಣ್ಯ ಇಲಾಖೆ

ಕಳೆದ ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಖಾಸಗಿ ಜಮೀನಿನಲ್ಲಿ ಅಕ್ರಮ ವಿದ್ಯುತ್ ಪ್ರವಹಿಸಿ ಅಂದಾಜು 25 ವರ್ಷದ ಹೆಣ್ಣಾನೆ ನರಳುತ್ತಿತ್ತು. ಇದನ್ನು ಗಮನಿಸಿದ ಬಂಡೀಪುರ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶು ವೈದ್ಯರು ಚಿಕಿತ್ಸೆ ಕೊಟ್ಟು ಆನೆಯನ್ನು ಬದುಕಿಸಿದ್ದಾರೆ. ಇದಕ್ಕೆ ಶನಿವಾರ (ಫೆಬ್ರವರಿ 18) ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದರು.‌ ಜೊತೆಗೆ, ಅರಣ್ಯ ಇಲಾಖೆಯ ಕಾರ್ಯವನ್ನು ಪ್ರಶಂಸಿದ್ದಾರೆ. ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರೂ ಕೂಡ ಅರಣ್ಯ ಇಲಾಖೆಯ ಮಹತ್ವದ ಕಾರ್ಯವನ್ನು ಶ್ಲಾಘಿಸಿದರು.‌

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+