ಚಾಮರಾಜನಗರ: ದೇವಾಲಯ, ಮಸೀದಿ, ಚರ್ಚ್ಗಳ ಬಗ್ಗೆ ಹರವೆ ವಿರಕ್ತ ಮಠಾಧ್ಯಕ್ಷರು ಹೇಳಿದ್ದೇನು ಗೊತ್ತಾ?
ಚಾಮರಾಜನಗರ, ಸೆಪ್ಟೆಂಬರ್, 16: ನಗರದ ಮದೀನಾ ಮಸ್ಜಿದ್ಯಲ್ಲಿ ಜಮಾತೆ ಇಸ್ಲಾಮೀ ಹಿಂದ್ ಹಾಗೂ ಮದೀನಾ ಮಸ್ಜಿದ್ ಆಶ್ರಯದಲ್ಲಿ ಸೀರತ್ ಪ್ರಯುಕ್ತ ಸಾರ್ವಜನಿಕ ಮಸೀದಿ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಸ್ವಾಮೀಜಿಯೊಬ್ಬರು ಭಾವೈಕ್ಯತೆ ಸಾರುವ ಪ್ರಮುಖ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ.
ಸಾರ್ವಜನಿಕ ಮಸೀದಿ ದರ್ಶನದಿಂದ ಹಿಂದೂ & ಮುಸ್ಲಿಂರ ಭಾವೈಕ್ಯತೆ ಹಿಮ್ಮಡಿಗೊಳಿಸುತ್ತದೆ ಎಂದು ಹರವೆ ವಿರಕ್ತ ಮಠಾಧ್ಯಕ್ಷರಾದ ಶ್ರೀ ಸರ್ಪಭೂಷಣಸ್ವಾಮೀಜಿ ತಿಳಿಸಿದರು. ನಗರದ ಡಿವಿಯೇಷನ್ ರಸ್ತೆಯಲ್ಲಿರುವ ಮದೀನಾ ಮಸ್ಜಿದ್ಯಲ್ಲಿ ಜಮಾತೆ ಇಸ್ಲಾಮೀ ಹಿಂದ್ ಹಾಗೂ ಮದೀನಾ ಮಸ್ಜಿದ್ ಆಶ್ರಯದಲ್ಲಿ ಸೀರತ್ ಪ್ರಯುಕ್ತ ಸಾರ್ವಜನಿಕ ಮಸೀದಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇವಸ್ಥಾನಗಳು, ಚರ್ಚ್ಗಳಲ್ಲಿ ದೇವರು ಇದ್ದಾನೆ ಎಂದು ಪ್ರಾರ್ಥನೆ ಮಾಡುವಂತೆ ಮುಸ್ಲಿಂ ಸಮುದಾಯವರಿಗೆ ಮಸೀದಿಗಳಲ್ಲಿ ದೇವರು ಕಾಣುತ್ತದೆ. ಆದ್ದರಿಂದ ಅವರು ಮಸೀದಿಗಳಲ್ಲಿ ಪ್ರಾರ್ಥನೆ ಮಾಡುವ ಮೂಲಕ ತಮ್ಮ ಇಷ್ಟಾರ್ಥ ಸಿದ್ದಿಸಿಕೊಳ್ಳುತ್ತಾರೆ. ಆದೇ, ರೀತಿ ಹಿಂದೂಗಳು ದೇವಸ್ಥಾನಗಳಲ್ಲಿ, ಕ್ರೈಸ್ತರು ದೇವಾಲಯಗಳಲ್ಲಿ ಪ್ರಾರ್ಥಿಸುತ್ತಾರೆ.
ಹೀಗಾಗಿ ಮಸೀದಿಗಳು ಸಹ ಪುಣ್ಯ ಕ್ಷೇತ್ರಗಳಾಗಿದ್ದು, ಈ ನಿಟ್ಟಿನಲ್ಲಿ ಮಸೀದಿಗಳಿಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ದೊರೆತಾಗ ಇತರೇ ಧರ್ಮದವರಲ್ಲಿ ಇರುವ ತಪ್ಪು ಗ್ರಹಿಕೆ ಹಾಗೂ ಅಂತರ ದೂರ ಆಗುತ್ತದೆ. ಇದರಿಂದ ಪರಸ್ಪರ ಭಾವೈಕ್ಯತೆ, ಸಾಮರಸ್ಯ ಮೂಡುತ್ತದೆ ಎಂದು ತಿಳಿಸಿದರು.
ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಜನಾಬ್ ಮಹಮ್ಮದ್ ಕುಂಞ ಮಾತನಾಡಿ, ಮಸೀದಿ ದರ್ಶನ ಎನ್ನುವುದು ಪ್ರತಿಯೊಬ್ಬ ಮನುಷ್ಯನಿಗೂ ತಿಳುವಳಿಕೆ ಮೂಡಿಸುವ ಕಾರ್ಯಕ್ರಮ ಆಗಿದೆ. ಯಾವುದೇ ಮನುಷ್ಯ ಆ ಧರ್ಮದ ಬಗ್ಗೆ ಅರಿವಿಲ್ಲದೇ ಅದರ ಪೂರ್ವ ಪರ ಚಿಂತನೆ ಇಲ್ಲದೇ ದ್ವೇಷ ಮಾಡುವ ಮನೋಭಾವನ್ನು ಬೆಳೆಸಿಕೊಳ್ಳುತ್ತಾನೆ. ಹೀಗಾಗಿ ಇದರ ತಿಳುವಳಿಕೆ ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದರು.
ಈ ವೇಳೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮುರ್ತಿ, ಎಚ್.ಎಂ.ಗಣೇಶ್ ಪ್ರಸಾದ್ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.
ಇನ್ನು ಮಸೀದಿ ಸಮಿತಿ ಅವರಿಂದ ಬಾಳೆ ಎಲೆಯಲ್ಲಿ ಹೋಳಿಗೆ ಊಟದ ಸಹ ಪಂಕ್ತಿ ಭೋಜನಾ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆಯಿಂದ ಸಾಯಂಕಾಲದವರೆಗೂ ಸಾರ್ವಜನಿರಕರಿಗೆ ಮಸೀದಿ ದರ್ಶನ ನಡೆದಿರುವುದು ವಿಶೇಷ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications