ಭಾರೀ ಮಳೆಗೆ ನೆಲಕಚ್ಚಿದ ಬಾಳೆ: ಲಕ್ಷಾಂತರ ರುಪಾಯಿ ನಷ್ಟ
ಚಾಮರಾಜನಗರ, ಆಗಸ್ಟ್ 07: ಕಳೆದ ಸೋಮವಾರದಿಂದ ಸುರಿಯುತ್ತಿರುವ ಭಾರೀ ಮಳೆಯು ರೈತರ ಬದುಕನ್ನು ಸಂಕಷ್ಟಕ್ಕೆ ನೂಕಿದೆ. ಪ್ರವಾಹದಿಂದ ಅನೇಕ ಜನರ ಬದುಕು ಅಸ್ತವ್ಯಸ್ತಗೊಂಡಿದ್ದರೆ, ಮತ್ತೊಂದು ಕಡೆ ರೈತರು ಬೆಳೆದ ಬೆಳೆಗಳು ಕೂಡಾ ನಾಶವಾಗುತ್ತಿವೆ.
Recommended Video
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯತಿ ವ್ಯಾಪ್ತಿಯ ನೆಲ್ಲೂರು ಗ್ರಾಮದಲ್ಲಿ ಗುರುವಾರ ಗಾಳಿ ಸಹಿತ ಜೋರು ಮಳೆ ಆಗಿದ್ದರಿಂದ ಜಮೀನೊಂದರಲ್ಲಿ ಕೊಯ್ಲಿಗೆ ಸಿದ್ದವಾಗಿದ್ದ ಬಾಳೆ ತೋಟ ಸಂಪೂರ್ಣ ನೆಲಕಚ್ಚಿದೆ.
ನೆಲ್ಲೂರು ಗ್ರಾಮದ ಮುನಿಸ್ವಾಮಿ ಎಂಬುವವರು ಲಕ್ಷಾಂತರ ರೂ. ಖರ್ಚು ಮಾಡಿ 1.80 ಎಕರೆಯಲ್ಲಿ ಬಾಳೆ ಫಸಲನ್ನು ಬೆಳೆದಿದ್ದರು. ಆದರೆ ಭೀಕರ ಗಾಳಿ ಮಳೆಯಿಂದ ಮುನಿಸ್ವಾಮಿ ಅವರ 700 ಕ್ಕೂ ಹೆಚ್ಚು ಬಾಳೆ ಗಿಡಗಳು ನೆಲಕ್ಕುರುಳಿವೆ.

ಇದರಿಂದ ಒಂದೂವರೆ ಲಕ್ಷ ರುಪಾಯಿಗಳಿಗೂ ಹೆಚ್ಚು ಹಣ ನಷ್ಟವಾಗಿದೆ ಎಂದು ಮುನಿಸ್ವಾಮಿ ಅಳಲನ್ನು ತೋಡಿಕೊಂಡರು. ಇದಲ್ಲದೆ ಇದೇ ಗ್ರಾಮದ ಯಲ್ಲಪ್ಪ ಅವರು 2 ಎಕರೆ ಹಾಗೂ ಮಾರ ಎಂಬುವವರು ಸಹ 2 ಎಕರೆಯಲ್ಲಿ ಬೆಳೆದಿದ್ದ ಬಾಳೆ ಫಸಲು ಗೊನೆ ಬಿಟ್ಟು ಕಟಾವಿನ ಹಂತಕ್ಕೆ ಬಂದಿದ್ದವು.
ಸುಮಾರು 700 ಕ್ಕೂ ಹೆಚ್ಚು ಬಾಳೆ ಗಿಡ, ಯಲ್ಲಪ್ಪ ಅವರಿಗೆ ಸೇರಿದ 300 ಹಾಗೂ ಮಾರ ಎಂಬುವವರ ಜಮೀನಿನಲ್ಲಿ 400 ಕ್ಕೂ ಹೆಚ್ಚು ಬಾಳೆ ಗಿಡಗಳು ನೆಲಕ್ಕುರುಳಿವೆ. ಕೊಯ್ಲಿಗೆ ಸಿದ್ದವಾಗಿದ್ದ ಬಾಳೆ ಫಸಲು ನೆಲಕಚ್ಚಿರುವುದಕ್ಕೆ ರೈತರು ಕಣ್ಣೀರಿಡುತ್ತಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಬೇಕು, ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ರೈತರು ಒತ್ತಾಯಿಸಿದ್ದಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications