ಹನೂರಿನಲ್ಲಿ ಭರ್ಜರಿ ಮಳೆ-ಅಂಗಡಿಗಳಿಗೆ ನುಗ್ಗಿದ ಚರಂಡಿ ನೀರು
ಚಾಮರಾಜನಗರ, ಮೇ, 17: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ಹಾಗೆಯೇ ಇದೀಗ ಇಂದು (ಮೇ 17) ಸಂಜೆ 4:45ರ ವೇಳೆಗೆ ಚಾಮರಾಜನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಸುರಿದು ಅವಾಂತರಗಳೇ ಸೃಷ್ಟಿಯಾಗಿವೆ.
ಹನೂರು ತಾಲೂಕಿನ ಕೌದಳ್ಳಿ, ಬಂಡಳ್ಳಿ, ಅಜ್ಜಿಪುರ ಸುತ್ತಮುತ್ತ ಒಂದೂವರೆ ತಾಸು ಭರ್ಜರಿ ಮಳೆಯಾಗಿದೆ.

ಹನೂರು ತಾಲೂಕಿನಲ್ಲಿ ಕಳೆದ 10 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ, ಕೌದಳ್ಳಿ ಗ್ರಾಮದಲ್ಲಿ ಪ್ರತಿ ಮಳೆಯೂ ಅವಾಂತರ ಸೃಷ್ಟಿಸುತ್ತಿದೆ. ಕೌದಳ್ಳಿಯಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿರದ ಕಾರಣ, ಇಂದು ಸುರಿದ ಭರ್ಜರಿ ಮಳೆಗೆ ಚರಂಡಿ ತುಂಬಿ ಹೊಳೆಯಂತೆ ಅಂಗಡಿ-ಮಳಿಗೆಗಳಿಗೆ ನುಗ್ಗಿ ವ್ಯಾಪಾರಿಗಳನ್ನು ಪರದಾಡುವಂತೆ ಮಾಡಿದೆ.
ವಾಹನ ಸವಾರರ ಪರದಾಟ: ಸಂಜೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಭರ್ಜರಿ ಮಳೆಯಾಗಿದೆ. ಈ ಹಿನ್ನೆಲೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಕೆರೆಯಂತಾಗಿದ್ದು, ಪರಿಣಾಮ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.
ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯು ಬೇಗೂರಿನಲ್ಲಿ ಹಾದು ಹೋಗಲಿದ್ದು, ಗುಂಡ್ಲುಪೇಟೆ, ಕೇರಳ, ತಮಿಳುನಾಡಿಗೆ ತೆರಳುವವರು ಮಳೆಯ ನೀರಿನ ಮಧ್ಯೆ ವಾಹನ ಚಲಾಯಿಸಲು ಹರಸಾಹಸಪಟ್ಟರು.
ಇನ್ನು ಬೇಗೂರು, ಬೆಳಚಲವಾಡಿ ಸುತ್ತಮುತ್ತಲೂ ಕೂಡ ಭರ್ಜರಿ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಅಂತರ್ಜಲ ಮಟ್ಟ ಹೆಚ್ಚಿ ಕೊಳವೆಬಾವಿಗಳಲ್ಲಿ ಮತ್ತೇ ನೀರಿನ ಸಿಂಚನ ಹೊಮ್ಮುವ ನಿರೀಕ್ಷೆ ಮೂಡಿಸಿದೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications