ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದೂ ಸಂಘಟನೆಯಿಂದ ಕಾರ್ಯಾಚರಣೆ-ಏನದು?
ಚಾಮರಾಜನಗರ, ನವೆಂಬರ್, 25: ತಮಿಳುನಾಡಿನ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ 25ಕ್ಕೂ ಅಧಿಕ ಜಾನುವಾರುಗಳನ್ನು ರಕ್ಷಣೆ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹಿಂದೂ ರಾಷ್ಟ್ರ ರಕ್ಷಣಾ ಪಡೆ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ತಾಲೂಕಿನ ಅಂಕಶೆಟ್ಟಿಪುರ ಬಳಿ ಈ ಕಾರ್ಯಾಚರಣೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಟಿ.ನರಸೀಪುರ ಕಡೆಯಿಂದ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯಿಂದ ಹಿಂದೂ ಸಂಘಟನೆ ಕಾರ್ಯಕರ್ತರು 5 ವಾಹನಗಳನ್ನು ತಡೆದು 25ಕ್ಕೂ ಅಧಿಕ ಎಮ್ಮೆ, ಹಸುಗಳನ್ನು ರಕ್ಷಣೆ ಮಾಡಿದ್ದಾರೆ. ಇನ್ನು ಹಿಂದೂ ಕಾರ್ಯಕರ್ತರು ಜಾನುವಾರು ಸಾಗಾಟ ತಡೆದಿರುವ ಮಾಹಿತಿ ಪಡೆದ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು 5 ಗೂಡ್ಸ್ ವಾಹನ ಮತ್ತು 8 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

ಹಿಂದೂ ಸಂಘಟನೆಯ ರಾಮಕೃಷ್ಣ ಕಾರ್ಯಾಚರಣೆ ಬಗ್ಗೆ ಮಾತನಾಡಿ, ವಾಹನಗಳಲ್ಲಿ ಜಾನುವಾರುಗಳ ಕೊಂಬುಗಳನ್ನು ಕತ್ತರಿಸಿ ಇಟ್ಟುಕೊಂಡಿದ್ದು, ವಾಹನಗಳನ್ನು ತಡೆಯಲು ಮುಂದಾದ ವೇಳೆ ಕೊಂಬಿನಲ್ಲೇ ದಾಳಿ ಮಾಡಲು ಮುಂದಾದರು. ಒಟ್ಟು 7 ವಾಹನಗಳಲ್ಲಿ 2 ವಾಹನ ಪರಾರಿಯಾಗಿದೆ, ರೈತರ ಸೋಗಿನಲ್ಲಿ ಕಸಾಯಿಖಾನೆಗೆ ಗೋ ಸಾಗಾಟ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಗಾಯತ್ರಿ ಎಂಬವರು ಮಾತನಾಡಿ, ಚಾಮರಾಜನಗರ ಎಸ್ಪಿ, ಐಜಿ ಹಾಗೂ ಡಿಐಜಿ ಅವರಿಗೂ ಅಕ್ರಮ ಗೋ ಸಾಗಾಟದ ಮಾಹಿತಿ ಕೊಟ್ಟಿದ್ದೆವು. 20 ದಿನವಾದರೂ ಕನಿಷ್ಠ ಪ್ರತ್ಯುತ್ತರ ಬರಲಿಲ್ಲ. ಚಾಮರಾಜನಗರ ಎಸ್ಪಿಗೆ ಅಕ್ರಮ ಗೋ ಸಾಗಾಟದ ಬಗ್ಗೆ ಮಾಹಿತಿ ಕೊಟ್ಟರೂ ಕ್ರಮ ಆಗದ ಹಿನ್ನೆಲೆ ನಾವೇ ಜಾನುವರುಗಳನ್ನು ರಕ್ಷಿಸಿದ್ದೇವೆ ಎಂದರು. ಇದೀಗ ದೂರು ದಾಖಲಾಗಿದ್ದು, ಚಾಮರಾಜನಗರ ಪೂರ್ವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.
ವಾಹನ ಸವಾರರ ಪರದಾಟ: ಇದೀಗ ಚಳಿಗಾಳ ಆರಂಭವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿಯ ಜೊತೆಗೆ ಮಂಜಿನ ವಾತಾವರಣ ನಿರ್ಮಾಣವಾಗುತ್ತಿದೆ. ಅದರಲ್ಲೂ ಕೆಲವು ಕಡೆಯಂತೂ ಬೆಳಗ್ಗೆ 11 ಗಂಟೆಯಾದರೂ ಮಂಜು ಕವಿದಿರುತ್ತದೆ. ಹಾಗೆಯೇ ಇದೀಗ ಗಡಿಜಿಲ್ಲೆ ಚಾಮರಾಜನಗರದಲ್ಲಿ ದಟ್ಟ ಮಂಜು ಆವರಿಸಿದ ಹಿನ್ನೆಲೆ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.
ಶುಕ್ರವಾರ ಬೆಳಗ್ಗೆ ಗಂಟೆ 7:40 ಆದರೂ ಮಂಜು ಕವಿದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸವಾರರು ವಾಹನ ಚಲಾಯಿಸಲು ಪರದಾಡಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಚಳಿಗೆ ಜನರು ಹೈರಣಾಗಿದ್ದಾರೆ. ಇದರ ನಡುವೆ ಒಬ್ಬರ ಮುಖ ಮತ್ತೊಬ್ಬರಿಗೆ ಕಾಣದಷ್ಟು ದಟ್ಟ ಮಂಜು ಆವರಿಸಿತ್ತಿರುವ ಕಾರಣ ವಾಹನ ಸವಾರರು ಪರದಾಡಿದರೆ, ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಾಮರಾಜನಗರದಲ್ಲಿ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗಿದ್ದು, ಇಲ್ಲಿ ವಾಹನ ಸವಾರರು ದಟ್ಟ ಮಂಜಿನ ನಡುವೆ ವಾಹನ ಚಲಾಯಿಸಲು ಪ್ರಯಾಸ ಪಟ್ಟರು.
ವಾಹನ ಸವಾರರ ಪರದಾಟ: ಚಾಮರಾಜನಗರ ಒಂದಲ್ಲ ಒಂದು ರೀತಿಯಲ್ಲಿ ರಸ್ತೆ, ಅಪಘಾತಗಳು, ಪ್ರಾಣಿಗಳ ವಿಡಿಯೋ ವೈರಲ್ ವಿಚಾರದಲ್ಲಿ ಸುದ್ದಿಯಾಗುತ್ತಲೇ ಇದೆ. ಹಾಗೆಯೇ ಇದೀಗ ಈ ಜಿಲ್ಲೆ ಮತ್ತು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಂದಾಗಿದ್ದು, ಸುಮಾರು ಎರಡು ಗಂಟೆಗಳ ಕಾಲ ವಾಹನ ಸವಾರರು ಪರದಾಡಿದ ಘಟನೆ ಇತ್ತೀಚೆಗಷ್ಟೇ ನಡೆದಿತ್ತು.
2 ತಾಸು ಟ್ರಾಫಿಕ್ ಜಾಂ: ಅತಿಭಾರ ಹೊತ್ತ ವಾಹನಗಳು ಕಳೆದ ಕೆಲವು ದಿನಗಳಿಂದ ಮತ್ತೇ ಸಂಚರಿಸುತ್ತಿರುವ ಹಿನ್ನೆಲೆ ಕರ್ನಾಟಕ ಮತ್ತು ತಮಿಳುನಾಡು ಬೆಸೆಯುವ ಚಾಮರಾಜನಗರ ಗಡಿಭಾಗವಾದ ದಿಂಬಂನಲ್ಲಿ 2 ತಾಸು ಟ್ರಾಫಿಕ್ ಜಾಂ ಆದ ಘಟನೆ ಗುರುವಾರ (ಸೆಪ್ಟೆಂಬರ್ 19) ಮಧ್ಯಾಹ್ನ ನಡೆದಿದೆ. ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ ಜಾಂ ಉಂಟಾಗಿ ವಾಹನ ಸವಾರರು ಪರದಾಡಿದರು.
ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿರುವ ಅಸನೂರು, ದಿಂಬಂನಲ್ಲಿ ಅತಿಭಾರ ಹೊತ್ತ ವಾಹನಗಳು ಸಂಚಾರ ಮಾಡಿವೆ. ಈ ಹಿನ್ನೆಲೆ ಉಳಿದ ವಾಹನಗಳಾದ ಬಸ್, ಕಾರು, ಬೈಕ್ ಸವಾರರು ಗಂಟೆಗಟ್ಟಲೇ ಟ್ರಾಫಿಕ್ ಜಾಂನಲ್ಲಿ ಸಿಲುಕಿ ಪರದಾಡಿದರು. ಆ್ಯಂಬುಲೆನ್ಸ್ಗಳು ಸೇರಿದಂತೆ ಹಲವು ವಾಹನಗಳು ಕಿಲೋ ಮೀಟರ್ಗಟ್ಟಲೇ ನಿಂತು ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಫಜೀತಿ ಅನುಭವಿಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications