Get Updates
Get notified of breaking news, exclusive insights, and must-see stories!

ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದೂ ಸಂಘಟನೆಯಿಂದ ಕಾರ್ಯಾಚರಣೆ-ಏನದು?

ಚಾಮರಾಜನಗರ, ನವೆಂಬರ್, 25: ತಮಿಳುನಾಡಿನ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ 25ಕ್ಕೂ ಅಧಿಕ‌ ಜಾನುವಾರುಗಳನ್ನು ರಕ್ಷಣೆ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹಿಂದೂ ರಾಷ್ಟ್ರ ರಕ್ಷಣಾ ಪಡೆ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ತಾಲೂಕಿನ ಅಂಕಶೆಟ್ಟಿಪುರ ಬಳಿ ಈ ಕಾರ್ಯಾಚರಣೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಟಿ.ನರಸೀಪುರ ಕಡೆಯಿಂದ ತಮಿಳುನಾಡಿನ ಕಸಾಯಿಖಾನೆಗೆ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಯಿಂದ ಹಿಂದೂ ಸಂಘಟನೆ ಕಾರ್ಯಕರ್ತರು 5 ವಾಹನಗಳನ್ನು ತಡೆದು 25ಕ್ಕೂ ಅಧಿಕ ಎಮ್ಮೆ, ಹಸುಗಳನ್ನು ರಕ್ಷಣೆ ಮಾಡಿದ್ದಾರೆ. ಇನ್ನು ಹಿಂದೂ ಕಾರ್ಯಕರ್ತರು ಜಾನುವಾರು ಸಾಗಾಟ ತಡೆದಿರುವ ಮಾಹಿತಿ ಪಡೆದ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು 5 ಗೂಡ್ಸ್ ವಾಹನ ಮತ್ತು 8 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

Hindu Organization Rescues Over 25 Cattle on Bengaluru-Dindigul National Highway

ಹಿಂದೂ ಸಂಘಟನೆಯ ರಾಮಕೃಷ್ಣ ಕಾರ್ಯಾಚರಣೆ ಬಗ್ಗೆ ಮಾತನಾಡಿ, ವಾಹನಗಳಲ್ಲಿ ಜಾನುವಾರುಗಳ ಕೊಂಬುಗಳನ್ನು ಕತ್ತರಿಸಿ ಇಟ್ಟುಕೊಂಡಿದ್ದು, ವಾಹನಗಳನ್ನು ತಡೆಯಲು ಮುಂದಾದ ವೇಳೆ ಕೊಂಬಿನಲ್ಲೇ ದಾಳಿ ಮಾಡಲು ಮುಂದಾದರು. ಒಟ್ಟು 7 ವಾಹನಗಳಲ್ಲಿ 2 ವಾಹನ ಪರಾರಿಯಾಗಿದೆ, ರೈತರ ಸೋಗಿನಲ್ಲಿ ಕಸಾಯಿಖಾನೆಗೆ ಗೋ ಸಾಗಾಟ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಗಾಯತ್ರಿ ಎಂಬವರು ಮಾತನಾಡಿ, ಚಾಮರಾಜನಗರ ಎಸ್ಪಿ, ಐಜಿ ಹಾಗೂ ಡಿಐಜಿ ಅವರಿಗೂ ಅಕ್ರಮ ಗೋ ಸಾಗಾಟದ ಮಾಹಿತಿ ಕೊಟ್ಟಿದ್ದೆವು. 20 ದಿನವಾದರೂ ಕನಿಷ್ಠ ಪ್ರತ್ಯುತ್ತರ ಬರಲಿಲ್ಲ. ಚಾಮರಾಜನಗರ ಎಸ್ಪಿಗೆ ಅಕ್ರಮ ಗೋ ಸಾಗಾಟದ ಬಗ್ಗೆ ಮಾಹಿತಿ ಕೊಟ್ಟರೂ ಕ್ರಮ ಆಗದ ಹಿನ್ನೆಲೆ ನಾವೇ ಜಾನುವರುಗಳನ್ನು ರಕ್ಷಿಸಿದ್ದೇವೆ ಎಂದರು. ಇದೀಗ ದೂರು ದಾಖಲಾಗಿದ್ದು, ಚಾಮರಾಜನಗರ ಪೂರ್ವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ವಾಹನ ಸವಾರರ ಪರದಾಟ: ಇದೀಗ ಚಳಿಗಾಳ ಆರಂಭವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿಯ ಜೊತೆಗೆ ಮಂಜಿನ ವಾತಾವರಣ ನಿರ್ಮಾಣವಾಗುತ್ತಿದೆ. ಅದರಲ್ಲೂ ಕೆಲವು ಕಡೆಯಂತೂ ಬೆಳಗ್ಗೆ 11 ಗಂಟೆಯಾದರೂ ಮಂಜು ಕವಿದಿರುತ್ತದೆ. ಹಾಗೆಯೇ ಇದೀಗ ಗಡಿಜಿಲ್ಲೆ ಚಾಮರಾಜನಗರದಲ್ಲಿ ದಟ್ಟ ಮಂಜು ಆವರಿಸಿದ ಹಿನ್ನೆಲೆ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.

ಶುಕ್ರವಾರ ಬೆಳಗ್ಗೆ ಗಂಟೆ 7:40 ಆದರೂ ಮಂಜು ಕವಿದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸವಾರರು ವಾಹನ ಚಲಾಯಿಸಲು ಪರದಾಡಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಚಳಿಗೆ ಜನರು ಹೈರಣಾಗಿದ್ದಾರೆ. ಇದರ ನಡುವೆ ಒಬ್ಬರ ಮುಖ ಮತ್ತೊಬ್ಬರಿಗೆ ಕಾಣದಷ್ಟು ದಟ್ಟ ಮಂಜು ಆವರಿಸಿತ್ತಿರುವ ಕಾರಣ ವಾಹನ ಸವಾರರು ಪರದಾಡಿದರೆ, ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಚಾಮರಾಜನಗರದಲ್ಲಿ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗಿದ್ದು, ಇಲ್ಲಿ ವಾಹನ ಸವಾರರು ದಟ್ಟ ಮಂಜಿನ ನಡುವೆ ವಾಹನ ಚಲಾಯಿಸಲು ಪ್ರಯಾಸ ಪಟ್ಟರು.

ವಾಹನ ಸವಾರರ ಪರದಾಟ: ಚಾಮರಾಜನಗರ ಒಂದಲ್ಲ ಒಂದು ರೀತಿಯಲ್ಲಿ ರಸ್ತೆ, ಅಪಘಾತಗಳು, ಪ್ರಾಣಿಗಳ ವಿಡಿಯೋ ವೈರಲ್‌ ವಿಚಾರದಲ್ಲಿ ಸುದ್ದಿಯಾಗುತ್ತಲೇ ಇದೆ. ಹಾಗೆಯೇ ಇದೀಗ ಈ ಜಿಲ್ಲೆ ಮತ್ತು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಂದಾಗಿದ್ದು, ಸುಮಾರು ಎರಡು ಗಂಟೆಗಳ ಕಾಲ ವಾಹನ ಸವಾರರು ಪರದಾಡಿದ ಘಟನೆ ಇತ್ತೀಚೆಗಷ್ಟೇ ನಡೆದಿತ್ತು.

2 ತಾಸು ಟ್ರಾಫಿಕ್ ಜಾಂ: ಅತಿಭಾರ ಹೊತ್ತ ವಾಹನಗಳು ಕಳೆದ ಕೆಲವು ದಿನಗಳಿಂದ ಮತ್ತೇ ಸಂಚರಿಸುತ್ತಿರುವ ಹಿನ್ನೆಲೆ ಕರ್ನಾಟಕ ಮತ್ತು ತಮಿಳು‌ನಾಡು ಬೆಸೆಯುವ ಚಾಮರಾಜನಗರ ಗಡಿಭಾಗವಾದ ದಿಂಬಂನಲ್ಲಿ 2 ತಾಸು ಟ್ರಾಫಿಕ್ ಜಾಂ ಆದ ಘಟನೆ ಗುರುವಾರ (ಸೆಪ್ಟೆಂಬರ್‌ 19) ಮಧ್ಯಾಹ್ನ ನಡೆದಿದೆ. ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಂ ಉಂಟಾಗಿ ವಾಹನ ಸವಾರರು ಪರದಾಡಿದರು.

ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿರುವ ಅಸನೂರು, ದಿಂಬಂನಲ್ಲಿ ಅತಿಭಾರ ಹೊತ್ತ ವಾಹನಗಳು ಸಂಚಾರ ಮಾಡಿವೆ. ಈ ಹಿನ್ನೆಲೆ ಉಳಿದ ವಾಹನಗಳಾದ ಬಸ್, ಕಾರು, ಬೈಕ್ ಸವಾರರು ಗಂಟೆಗಟ್ಟಲೇ ಟ್ರಾಫಿಕ್ ಜಾಂನಲ್ಲಿ ಸಿಲುಕಿ ಪರದಾಡಿದರು. ಆ್ಯಂಬುಲೆನ್ಸ್‌ಗಳು ಸೇರಿದಂತೆ ಹಲವು ವಾಹನಗಳು ಕಿಲೋ ಮೀಟರ್‌ಗಟ್ಟಲೇ ನಿಂತು ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಫಜೀತಿ ಅನುಭವಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+