ಮಳೆ ಅಬ್ಬರಕ್ಕೆ ಹೊಗೆನಕಲ್ ಜಲಪಾತವೇ ಮುಳುಗಡೆ!!
ಚಾಮರಾಜನಗರ, ಆಗಸ್ಟ್ 6: ಪ್ರಸಿದ್ಧ ಪ್ರವಾಸಿತಾಣ, ಭಾರತದ ನಯಾಗರ ಎಂದು ಕರೆಯುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ಮಳೆಯ ಆರ್ಭಟಕ್ಕೆ ಹರಿಯುತ್ತಿರುವ ನೀರಿನ ಪ್ರಮಾಣಕ್ಕೆ ಕಣ್ಮರೆಯಾಗಿದೆ. ಜಲಪಾತದ ಮೇಲೆ ನೀರು ಹರಿಯುತ್ತಿರುವುದರಿಂದ ಜಲಪಾತವೇ ಮುಳುಗಡೆಯಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿರುವುದೆ, ಜೊತೆಗೆ ಕಾವೇರಿ ಹೊರಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಲಪಾತವೇ ಸಂಪೂರ್ಣ ಮುಳುಗಡೆಯಾಗಿದೆ. ಹೊಗೆನಕಲ್ನಲ್ಲಿ ಧುಮ್ಮಿಕ್ಕುವ ದೃಶ್ಯ ಬದಲಾಗಿ ಎಲ್ಲಿ ನೋಡಿದರೂ ಕಾವೇರಿ ಹರಿದಾಟವೇ ಕಾಣುತ್ತಿದೆ.
ತಮಿಳುನಾಡು ಭಾಗದಲ್ಲಿ ಜಲಪಾತ ವೀಕ್ಷಣೆ ಮಾಡುವ ಜಾಗ ಹಾಗೂ ನೀರಾಟ ಆಡುವ ಸ್ಥಳವೂ ಜಲಾವೃತವಾಗಿದ್ದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಕರ್ನಾಟಕ ಭಾಗದಲ್ಲೂ ಭಾರೀ ನೀರು ಹರಿಯುತ್ತಿದೆ. ನದಿ ಅಂಚಿನ ಆಲಂಬಾಡಿ, ಜಂಬಲ್ಪಟ್ಟಿ ,ಆತೂರು ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿವೆ. ಹೊಗೆನಕಲ್, ಗೋಪಿನಾಥಂಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ನೀರಿನಿಂದ ಆವೃತಗೊಂಡಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಪ್ರವಾಸಿಗರನ್ನು ವಾಪಾಸ್ ಕಳುಹಿಸಲಾಗುತ್ತಿದೆ.
ಗೋಪಿನಾಥಂಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ನೀರಿನಿಂದ ಆವೃತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮೆಟ್ಟೂರು ಜಲಾಶಯದಲ್ಲಿ ಹಿನ್ನೀರು ಹೆಚ್ಚಳವಾಗಿರುವ ಕಾರಣ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಪರಿಣಾಮ ಆಲಂಬಾಡಿ, ಜಂಬಲ್ ಪಟ್ಟಿ ಮಾರಿಕೊಟ್ಟಾಯಂ ಹಾಗೂ ಹೊಗೆನಕಲ್ ಜಲಪಾತಕ್ಕೆ ತೆರಳುವ ಮಾರ್ಗ ಕಡಿತಗೊಂಡಿದೆ.
ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಅತೀ ಹೆಚ್ಚು ಮಳೆ ಬೀಳುವ ವರದಿ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾದ್ಯಂತ ಎಲ್ಲಾ ಶಾಲೆ ಹಾಗೂ ಅಂಗನವಾಡಿಗಳಿಗೆ ಶನಿವಾರವೂ ರಜೆ ಮುಂದುವರಿದಿದೆ. ಮಕ್ಕಳ ಹಿತದೃಷ್ಟಿಯಿಂದ ಗುರುವಾರವೇ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ ಮುಂದಿನ ನಾಲ್ಕು ದಿನಗಳವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ. ರಾಜಧಾನಿಯಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಶನಿವಾರವೂ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications