ಚಾಮರಾಜನಗರ: ಈ ಊರಲ್ಲಿ ದೇವರಿಗೆ ಕೆಂಡದ ನೈವೇದ್ಯ, ಕೈ, ಬಟ್ಟೆ ಸುಡುವುದಿಲ್ಲವಂತೆ.!
ಚಾಮರಾಜನಗರ, ಮಾರ್ಚ್, 26: ಜಾನಪದ ನಾಡು ಚಾಮರಾಜನಗರವು ವೈವಿಧ್ಯಮಯ ಜಾತ್ರೆ, ಆಚರಣೆಯಿಂದ ಗಮನ ಸೆಳೆಯುವ ಪ್ರದೇಶ ಎಂಬುದರಲ್ಲಿ ಎರಡು ಮಾತಿಲ್ಲ. ಅದರಂತೆಯೇ ನಿಗಿನಿಗಿ ಕೆಂಡ ದೇವರಿಗೆ ನೈವೇದ್ಯವಾಗಿ ಅರ್ಪಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಬಾಣಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಾಣಹಳ್ಳಿ ಗ್ರಾಮದಲ್ಲಿ ಸತ್ಯವತಿ ದೇವರ ದೇಗುಲವಿದ್ದು, ಇಲ್ಲಿ ವರ್ಷಕ್ಕೊಮ್ಮೆ ಜಾತ್ರೆ ನಡೆಯಲಿದೆ. ಸಾಮಾನ್ಯವಾಗಿ ಕೆಂಡವನ್ನು ಹಾಯುವುದು ಎಲ್ಲೆಡೆ ಸಾಮಾನ್ಯ. ಆದರೆ ಇಲ್ಲಿ, ಕೆಂಡವನ್ನು ಬರಿಗೈಯಲ್ಲಿ ಕೊಳಗಕ್ಕೆ ತುಂಬಿ ಬಳಿಕ ಬಿಳಿ ಬಟ್ಟೆಗೆ ಕೆಂಡ ಸುರಿದು ದೇವರಿಗೆ ನೈವೇದ್ಯ ಇಡುವುದು ಇಲ್ಲಿನ ವಿಶೇಷವಾಗಿದೆ.

ರೋಮಾಂಚಕಕಾರಿಯಾದ ಈ ದೃಶ್ಯವನ್ನು ಸಾವಿರಾರು ಮಂದಿ ಕಣ್ತುಂಬಿಕೊಂಡು ಅತೀಂದ್ರಿಯ ಶಕ್ತಿಗೆ ತಲೆ ಬಾಗಿದ್ದಾರೆ. ಬರಿಗೈಯಲ್ಲಿ ಕೆಂಡ ಸುರಿದರೂ ಅರ್ಚಕನ ಕೈ ಸುಡುವುದಿಲ್ಲವಂತೆ, ಬಟ್ಟೆಯ ಜೋಳಿಗೆಗೆ ಏನೂ ಆಗುವುದಿಲ್ಲ. ಈ ಜಾತ್ರೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದ್ದು, ಎಲ್ಲರನ್ನೂ ಅಚ್ಚರಿಗೆ ನೂಕುವ ಈ ಆಚರಣೆ ಸತ್ಯವತಿ ದೇವರ ಪವಾಡ ಎಂಬುದು ಜನರ ನಂಬಿಕೆಯಾಗಿದೆ.
ಭಕ್ತಿ ಶ್ರದ್ಧೆಯಿಂದ ನೆರವೇರಿದ ಕೊಂಡೊತ್ಸವ: ಈ ದೇವಾಲಯಕ್ಕೆ ಮಹಿಳೆಯರು ತೆರಳಿದರೇ ಕಲ್ಲಾಗುತ್ತಾರೆ ಎಂಬ ನಂಬಿಕೆ ಇರುವುದರಿಂದ ಹಾಗೂ ಮಹಿಳೆಯರಿಂದ ಅಂತರ ಕಾಯ್ದುಕೊಂಡು ದೇವರು ತಪಸ್ಸಿಗೆ ಕುಳಿತಿರುವ ಐತಿಹ್ಯ ಇರುವ ಈ ದೇವಾಲಯದಲ್ಲಿ ಸಡಗರದಿಂದ ಜಾತ್ರೆ ನಡೆಯುತ್ತಿದೆ.
ಚಾಮರಾಜನಗರ ಗಡಿಭಾಗದಲ್ಲಿರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಶ್ರೀ ಕೊಂಗಳ್ಳಿ ಮಲ್ಲಿಕಾರ್ಜುನಸ್ವಾಮಿ ದೇವಾಲಯದಲ್ಲಿ ಸೋಮವಾರದಿಂದ ಜಾತ್ರೆ ಆರಂಭಗೊಂಡಿದ್ದು, ಮಂಗಳವಾರ ಬೆಳಗ್ಗೆ ಭಕ್ತಿ ಶ್ರದ್ಧೆಯಿಂದ ಕೊಂಡೊತ್ಸವ ನೆರವೇರಿದೆ.
ಒಂದು ರೀತಿ ಪುರುಷ ಭಕ್ತರ ಜಾತ್ರೆ ಇದಾಗಿದ್ದು, ಜಾತ್ರೆಗೆ, ದೇವರ ದರ್ಶನಕ್ಕೆ ಮಹಿಳೆಯರ ಪ್ರವೇಶ ಇರುವುದಿಲ್ಲ. ಎರಡು ರಾಜ್ಯಗಳಿಂದ ಕೊಂಗಳ್ಳಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನಸ್ವಾಮಿಯ ಮಹಾನ್ ತಪಸ್ಸು ಮಾಡಲು ಈ ಪ್ರದೇಶ ಆರಿಸಿಕೊಂಡಿದ್ದರಿಂದ ದೇಗುಲಕ್ಕೆ ಮಹಿಳೆಯರ ಪ್ರವೇಶ ಇಲ್ಲ. ವರ್ಷಕ್ಕೆಮ್ಮೆ ಮಾತ್ರ ಊರಿನಲ್ಲಿ ಉತ್ಸವ ನಡೆಯಲಿದ್ದು, ಗ್ರಾಮಕ್ಕೆ ದೇವರ ಉತ್ಸವ ಮೂರ್ತಿ ತೆರಳಿದ ವೇಳೆ ಮಾತ್ರ ಮಹಿಳೆಯರು ದೇವರಿಗೆ ಪೂಜೆ ಸಲ್ಲಿಸುವ ವಿಶಿಷ್ಠ ಸಂಪ್ರದಾಯ ಇಲ್ಲಿನದ್ದಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications