ಚಾಮರಾಜನಗರ: ಹೈಫೈ ಶೋಕಿ ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ
ಚಾಮರಾಜನಗರ, ಮಾರ್ಚ್, 17: ಈಗಿನ ಕಾಲದಲ್ಲಿ ಮದುವೆ ಅನ್ನೋದು ಶೋಕಿ ಆಗಿಬಿಟ್ಟಿದೆ. ಅದರ ಅರ್ಥನೇ ಗೊತ್ತಿಲ್ಲದೆ, ಅದೆಷ್ಟೋ ಜನ ತಪ್ಪುದಾರಿಗಿಳಿಯುತ್ತಿದ್ದಾರೆ. ಕೆಲವರು ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡಿ ವಿಚ್ಛೇದನ, ಆತ್ಮಹತ್ಯೆ ದಾರಿ ಹಿಡಿದಿರುವ ಉದಾಹರಣೆಗಳಿವೆ. ಈ ನಡುವೆಯೇ ಇದೀಗ ಶೋಕಿ ಪತ್ನಿಯ ಕಿರುಕುಳಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಮೊದಲು ತಲೆಯಲ್ಲಿ ಕೋದಲಿಲ್ಲದಿದ್ದರೂ ಕೂಡ ಸಂಬಳ ಚೆನ್ನಾಗಿದ್ದರೆ ಸಾಕು ಆತನನ್ನೇ ವರಿಸುವವರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ. ಇಂತಹವರು ಕೆಲ ದಿನಗಳ ಬಳಿಕ ತಮ್ಮಿಷ್ಟದಂತೆ ಜೀವನ ಸಾಗಿಸಿ ಕೊನೆಗೆ ಕಟ್ಟಿಕೊಂಡ ಗಂಡನನ್ನೆ ಧಿಕ್ಕರಿಸುವ ಮಟ್ಟಕ್ಕೂ ಇಳಿಯಿತ್ತಿದ್ದಾರೆ ಎನ್ನುವುದಕ್ಕೆ ಚಾಮರಾಜನಗರದಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿಯಾಗಿದೆ.

ನಿನ್ನ ತಲೆಯಲ್ಲಿ ಕೂದಲು ಇಲ್ಲ ಎಂದು ಪತ್ನಿ ಕೊಡುತ್ತಿದ್ದ ಟಾರ್ಚರ್ಗೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ನೀನು ಚನ್ನಾಗಿಲ್ಲ, ನನಗೆ ಸರಿಯಾದ ಜೋಡಿ ಅಲ್ಲ ಎಂದು ಪತ್ನಿ ಎಲ್ಲರೆದುರೇ ಅವಮಾನ ಮಾಡುತ್ತಿದ್ದಳು. ಈ ಶೋಕಿ ಪತ್ನಿ ಹೈಫೈ ಜೀವನ ನಡೆಸಲು ಬಯಸಿದ್ದಳು. ಅಲ್ಲದೇ ರೀಲ್ಸ್ ಗೀಳು ಕೂಡ ಈಕೆಗೆ ಇತ್ತು ಎಂದು ತಿಳಿದುಬಂದಿದೆ.
ಬ್ರಾಂಡೆಟ್ ಬಟ್ಟೆ, ಆಭರಣ, ಬೇರೆಮನೆ ಮಾಡು ಎಂದು ಪತ್ನಿ ಪತಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಳು. ಅಷ್ಟೇ ಅಲ್ಲದೆ, ಸುಳ್ಳು ವರದಕ್ಷಿಣೆ ಪ್ರಕರಣ ದಾಖಲಿಸಿ ಪತಿಯನ್ನು ಒಂದೂವರೆ ತಿಂಗಳು ಜೈಲಿಗೂ ಕಳುಸಿದ್ದಳಂತೆ.
ಇನ್ನು ಪತ್ನಿಯ ಕಿರುಕುಳಕ್ಕೆ ಬೇಸತ್ತ ಪತಿ ಪರಶಿವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಇದನ್ನು ಗಮನಿಸುತ್ತಿದ್ದರೆ, ಇಷ್ಟು ದಿನ ಗಂಡನ ಮನೆ ಕಡೆಯವರು ಹೆಣ್ಣಿನ ಕಡೆಯಿಂದ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎನ್ನುವ ಆರೋಪಗಳು ಕೇಳಿಬರುತ್ತಿದ್ದರು.
ಈಗಲೂ ಕೆಲವೆಡೆ ವರಸಕ್ಷಿಣೆ ಕೇಳುವ ಪದ್ಧತಿ ನಡೆಯುತ್ತಿದೆ. ಮದುವೆಯಾಗಿ ಗಂಡನ ಮನೆಗೆ ಬಂದಿರುವ ಪತ್ನಿಗೂ ವರದಕ್ಷಿಣ ಕಿರುಕುಳ ನೀಡುತ್ತಿರುವ ಪ್ರಕರಗಳು ನಡೆದಿರುವ ಉದಾಹರಣೆಗಳಿವೆ. ಇದೀಗ ಇದು ಉಲ್ಟಾ ಆಗಿದ್ದು, ಕೆಲ ಪತ್ನಿಯರು ಪತಿಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎನ್ನುವುದಕ್ಕೆ ಚಾಮರಾಜನಗರದಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿ.
ಆತ್ಮಹತ್ಯೆ ತಡೆ ಸಹಾಯವಾಣಿ. ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ ಇಂತಿದೆ 080 - 25497777.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications