ಅಪ್ಪ ಹೋದರು..ಅಮ್ಮನನ್ನಾದರೂ ಉಳಿಸಿಕೊಡಿ...ಮಕ್ಕಳ ಗೋಳು
Recommended Video

ಚಾಮರಾಜನಗರ, ಡಿಸೆಂಬರ್ 15: ಪತ್ನಿಯನ್ನು ಬದುಕಿಸಿಕೊಳ್ಳುವ ಆತುರದಲ್ಲಿ ತನ್ನ ಜೀವದ ಹಂಗನ್ನೂ ತೊರೆದು ರಕ್ಷಣೆ ಮುಂದಾಗಿದ್ದ ಪತಿ ಮಾರ್ಗಮಧ್ಯೆಯೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಪ್ರಸಾದ ತಿಂದು ನರಳಾಡುತ್ತಿದ್ದ ಪತ್ನಿಯನ್ನು ಬದುಕಿಸಿಕೊಳ್ಳಲು ಅಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಬರುತ್ತಿದ್ದ ಪತಿ ದಾರಿ ಮಧ್ಯೆ ತೀವ್ರವಾಗಿ ವಾಂತಿ ಮಾಡಿಕೊಂಡು ಮೃತಪಟ್ಟಿದ್ದಾರೆ.
ಘಟನೆ ಏನು? ಸುಳವಾಡಿ ಗ್ರಾಮದ ಮಾರಮ್ಮನ ದೇವಸ್ಥಾನಕ್ಕೆ ಕೃಷ್ಣನಾಯ್ಕ ದಂಪತಿ ಹೋಗಿದ್ದರು, ದೇವರ ಪೂಜೆ ಮುಗಿಸಿ ಸ್ವಲ್ಪ ಪ್ರಸಾದ ಸೇವಿಸಿ ಮನೆಗೆ ಬಂದಿದ್ದಾರೆ, ಮನೆಯಲ್ಲಿರುವ ಮಕ್ಕಳಿಗೂ ಪ್ರಸಾದ್ ನೀಡಿದ್ದಾರೆ ಆದರೆ ಮಕ್ಕಳು ತಕ್ಷಣಕ್ಕೆ ಪ್ರಸಾದವನ್ನು ತಿಂದಿರಲಿಲ್ಲ.

ಮಹಿಳೆ ಮೋನಿ ಬಾಯಿಗೆ ಸ್ವಲ್ಪ ಹೊತ್ತಲ್ಲೇ ವಾಂತಿ ಆರಂಭವಾಗಿದೆ.ಮೊದಲು ಕಾರಣವೇನು ಎಂದು ಗೊತ್ತಾಗಲಿಲ್ಲ. ಬಳಿಕ ಆಸ್ಪತ್ರೆಗೆ ತೆರಳಿದ ಮೇಲೆ ಕಾರಣ ತಿಳಿದಿತ್ತು. ಆದರೆ ಪತ್ನಿಯನ್ನು ಬದುಕಿಸಿಕೊಳ್ಳುವ ಆತುರದಲ್ಲಿ ತನಗಾಗುತ್ತಿದ್ದ ನೋವನ್ನು ಪತಿ ಹೇಳಿಕೊಳ್ಳಲೇ ಇಲ್ಲ. ಅಂಬ್ಯುಲೆನ್ಸ್ನಲ್ಲಿ ತೆರಳುವಾಗ ಮಾರ್ಗ ಮಧ್ಯೆಯೇ ವಾಂತಿ ಹೆಚ್ಚಾಗಿ ಅಲ್ಲಿಯೇ ಮೃತಪಟ್ಟಿದ್ದಾರೆ. ಮಕ್ಕಳ, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಕೊಳ್ಳೇಗಾಲದ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದ್ದರೂ ಕೂಡ ಮೈಸೂರಿಗೆ ಕರೆತರುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
ಅಪ್ಪ ಅಮ್ಮ ಊರು ಬಿಟ್ಟು ಬೇರೆ ಊರಲ್ಲಿ ಕೆಲಸ ಮಾಡಿ ನಮ್ಮ ವಿದ್ಯಾಭ್ಯಾಸವನ್ನು ನೋಡಿಕೊಳ್ಳುತ್ತಿದ್ದರು. ಅಮ್ಮನ ಸ್ಥಿತಿ ಗಂಭೀರವಾಗಿದೆ, ಅಮ್ಮನನ್ನು ಹೇಗಾದರೂ ಮಾಡಿ ಉಳಿಸಿಕೊಡಿ ಎಂದು ಮಕ್ಕಳು ಕಣ್ಣೀರಿಡುತ್ತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications