ಗುಂಡ್ಲುಪೇಟೆ: ಮನೆ ಗೋಡೆಯೊಳಗಡೆ ಅಕ್ರಮ ಮದ್ಯ ಸಂಗ್ರಹಿಸಿದ್ದ ಭೂಪ.!-ಮುಂದೇನಾಯ್ತು?
ಚಾಮರಾಜನಗರ, ಸೆಪ್ಟೆಂಬರ್, 18: ಸಾಮಾನ್ಯವಾಗಿ ಅಕ್ರಮ ಮದ್ಯ ಸಾಗಾಟದ ವೇಳೆ ಚೆಕ್ಪೋಸ್ಟ್ಗಳಲ್ಲಿ ಸಿಗಿಬಿದ್ದಂತಹ ಉದಾಹರಣೆಗಳಿವೆ. ಆದರೆ ಇದೀಗ ಮನೆಯ ಗೋಡೆಯಲ್ಲಿಯೇ ಅಕ್ರಮವಾಗಿ ಮದ್ಯ ಸಂಗ್ರಹ ಮಾಡಿ ಆರೋಪಿ ತಗ್ಲಾಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದಲ್ಲಿ ನಡೆದಿದೆ. ಮುಂದೇನಾಯ್ತು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನಿಟ್ರೆ ಗ್ರಾಮದ ಮಂಜು ಎಂಬಾತ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ. ಅಕ್ರಮವಾಗಿ ಈತ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ ವೇಳೆ ಮನೆಯಲ್ಲೇ ಈತ ಮದ್ಯ ಶೇಕರಣೆ ಮಾಡಲು ಗೋಡೆ ಕೊರೆದು ರಹಸ್ಯ ಚೇಂಬರ್ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ.

8 ಲೀಟರ್ ಮದ್ಯ, 5 ಲೀಟರ್ ಬಿಯರ್ ವಶಪಡಿಸಿಕೊಂಡು ಆರೋಪಿ ಮಂಜು ಎಂಬಾತನನ್ನು ಅಬಕಾರಿ ಸಿಬ್ಬಂದಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಕ್ರಮ ಮದ್ಯ ಮಾರಾಟ: ಪ್ರಸಿದ್ಧ ಯಾತ್ರಸ್ಥಳ, ಪುಣ್ಯ ಕ್ಷೇತ್ರವಾದ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಡ್ಡೆಗಳ ಮೇಲೆ ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ ಘಟನೆ ಸೆಪ್ಟೆಂಬರ್ 2ರಂದು ನಡೆದಿತ್ತು.
ಬಾಬು ಪೂಜಾರಿ, ಎನ್.ಕುಮಾರ್, ಮಹೇಶ್, ಮಹಾದೇವಿ ಬಂಧಿತ ಆರೋಪಿಗಳು. ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮಧ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದ ಮಾಹಿತಿ ಮೇರೆಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಹಾಗೂ ಅಬಕಾರಿ ಡಿಸಿ ನಾಗಶಯನ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ 5 ಪ್ರಕರಣ ದಾಖಲಿಸಿದ್ದಾರೆ. ಮೂವರು ಪರಾರಿ ಆಗಿದ್ದಾರೆ ಎಂದು ತಿಳಿದುಬಂದಿದೆ.
ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ರಸ್ತೆಯಲ್ಲಿ ಬರುವ ಸಿದ್ದಪ್ಪ ಹಾಗೂ ರಾಜಪ್ಪ ಎಂಬುವರ ಮನೆಯಲ್ಲಿ ವಿವಿಧ ಕಂಪನಿಯ ಅಕ್ರಮ ಮಧ್ಯ 13 ಬಾಕ್ಸ್ , ಕುಮಾರ್ ಮನೆಯಲ್ಲಿ ಒಂದು ಬಾಕ್ಸ್ ಮತ್ತು 30 ಪೌಚ್, ಮೂರನೇ ಪ್ರಕರಣವಾದ ಬಾಬು ಪೂಜಾರಿ ಅಡ್ಡೆ ಮೇಲೆ ದಾಳಿ ಮಾಡಿ ಎರಡು ಬಾಕ್ಸ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
ನಾಲ್ಕನೇ ಪ್ರಕರಣದಲ್ಲಿ ಮಹದೇವಿ ತಂಬಡಗೇರಿ ಮನೆಯಲ್ಲಿ ದಾಸ್ತಾನಿಟ್ಟಿದ್ದ ಒಂದು ಬಾಕ್ಸ್, 5ನೇ ಪ್ರಕರಣವಾದ ಪುಟ್ಟಮ್ಮ ಎಂಬವರ ಮನೆಯಲ್ಲಿ ಒಂದು ಬಾಕ್ಸ್ ಸೇರಿದಂತೆ ಒಟ್ಟು 193 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ. ಒಟ್ಟಿನಲ್ಲಿ ತಪೋಭೂಮಿಯಲ್ಲಿ ಕುಡಿತಕ್ಕೆ ಬ್ರೇಕ್ ಹಾಕುವ ಕೆಲಸ ನಿರಂತರವಾಗಿರಲಿ ಎಂಬುದು ಭಕ್ತರ ಒತ್ತಾಸೆಯಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications