IAF Plane Crash: ಚಾಮರಾಜನಗರ ಜಿಲ್ಲೆಯ ಭೋಗಾಪುರ ಬಳಿ ಭಾರತದ ವಾಯು ಸೇನೆ ಲಘು ವಿಮಾನ ಪತನ, ಪೈಲಟ್ಗಳು ಸೇಫ್ ಆಗಿದ್ದು ಹೇಗೆ?
IAF Plane Crash: ಚಾಮರಾಜನಗರ, ಜೂನ್, 01: ಚಾಮರಾಜನಗರ ಜಿಲ್ಲೆಯ ಭೋಗಪುರದ ಬಳಿ ಭಾರತದ ವಾಯು ಸೇನೆಯ ಲಘು ವಿಮಾನ ಪತನವಾಗಿದೆ. ಸದ್ಯ ಈ ಘಟನೆಯಲ್ಲಿ ಪೈಲಟ್ಗಳಿಬ್ಬರೂ ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
News coming in of a trainer aircraft crashed in #Chamrajnagar. More details awaited. #Karnataka pic.twitter.com/uGn8tUtwa1
— Imran Khan (@KeypadGuerilla) June 1, 2023
ಚಾಮರಾಜನಗರ ಜಿಲ್ಲೆಯ ಭೋಗಪುರದ ಬಳಿ ಜಮೀನುವೊಂದರಲ್ಲಿ ಲಘು ವಿಮಾಣ ಪತನವಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸರು ದೌಡಾಯಿಸಿದ್ದಾರೆ. ಇದೀಗ ಘಟನಾ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇನ್ನು ವಿಮಾನದಲ್ಲಿದ್ದ ಪೈಲಟ್ಗಳಿಬ್ಬರೂ ಪ್ಯಾರಾಚೋಟ್ ಮೂಲಕ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪೈಲಟ್ಗಳು ಪಾರಾಗಿದ್ದು ಹೇಗೆ?
ಪ್ರತಿಕೂಲ ವಾತಾವರಣದಿಂದಾಗಿ ವಾಯುಸೇನೆಯ ಕಿರಣ್ ಏರ್ ಪಥ್ U692 ವಿಮಾನ ಚಾಮರಾಜನಗರ ತಾಲೂಕಿನ ಭೋಗಾಪುರ ಗ್ರಾಮದಲ್ಲಿ ಪತನಗೊಂಡಿದೆ. ಇದೊಂದು ತರಬೇತಿ ವಿಮಾನ ಆಗಿದ್ದು, ಭೂಮಿಕಾ ಹಾಗೂ ತೇಜ್ ಪಾಲ್ ಎಂಬವರು ಈ ವಿಮಾನವನ್ನು ಚಲಾಯಿಸುತ್ತಿದ್ದರು.
ಪ್ಯಾರಚೂಟ್ ಮೂಲಕ ಇಬ್ಬರೂ ತಮ್ಮನ್ನು ಬಚಾವ್ ಮಾಡಿಕೊಂಡಿದ್ದು ವಿಮಾನ ಪತನಗೊಂಡ 2 ಕಿಲೋ ಮಿಟರ್ ದೂರದಲ್ಲಿ ಇಬ್ಬರು ಬಿದ್ದಿದ್ದರು. ಸದ್ಯ, ಇಬ್ಬರನ್ನು ವಾಯುಸೇನೆಯವರು ಪತ್ತೆಹಚ್ಚಿ ರಕ್ಷಣೆ ಮಾಡಿದ್ದು, ಅವರನ್ನು ಬೆಂಗಳೂರಿಗೆ ವಿಶೇಷ ಹೆಲಿಕಾಪ್ಟರ್ನಲ್ಲಿ ಕರೆದೊಯ್ದಿದ್ದಾರೆ. ಇನ್ನು ಇಬ್ಬರಿಗೂ ಕುತ್ತಿಗೆ ಬಳಿ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications