ಅರಣ್ಯ ಇಲಾಖೆಯಿಂದ ದೇಶದಲ್ಲೇ ಮೊದಲ ಹಳ್ಳಿಕಾರ್ ತಳಿಯ ಹಾಲಿನ ಡೈರಿ ಸ್ಥಾಪನೆ
ಚಾಮರಾಜನಗರ, ಜುಲೈ 29: ಅರಣ್ಯ ಇಲಾಖೆಯ ಮಲೆ ಮಹದೇಶ್ವರ ವನ್ಯಜೀವಿ ವಿಭಾಗವು ರೈತರ ಅನುಕೂಲಕ್ಕಾಗಿ ದೇಸಿ ತಳಿಯ ಹಳ್ಳಿಕಾರ್ ಗೋವಿನ ಉತ್ಪನ್ನಗಳ ಮಾರುಕಟ್ಟೆಗಾಗಿ ಹಾಲಿನ ಡೈರಿಯೊಂದನ್ನು ಸ್ಥಾಪಿಸಲು ಮುಂದಾಗಿದೆ.
ಈ ಯೋಜನೆಯು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ. ಏಡುಕೊಂಡಲು ಕಲ್ಪನೆಯ ಕೂಸು ಆಗಿದೆ. ಗುರುವಾರ ಈ ವಿಚಾರವಾಗಿ ವರದಿಗಾರರೊಂದಿಗೆ ಮಾತನಾಡಿದ ಅವರು, "ದೇಸಿ ಜಾನುವಾರು ತಳಿ ಹಳ್ಳಿಕಾರ್ ಗೋವಿನ ಹಾಲು ಮತ್ತು ತುಪ್ಪವನ್ನು ಬ್ರಾಂಡ್ ಅಡಿಯಲ್ಲಿ ಮಾರಾಟ ಮಾಡುತ್ತಿರುವುದು ದೇಶದಲ್ಲೇ ಮೊದಲನೆಯದಾಗಿದೆ,'' ಎಂದರು.
"ಈಗಾಗಲೇ ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ನಡುವೆ ಮಾತುಕತೆ ನಡೆದಿದ್ದು, ಪೊನ್ನಾಚಿಯಲ್ಲಿ ಡೈರಿ ಸ್ಥಾಪಿಸಲಾಗುವುದು, ಇದನ್ನು ಹಾಲು ಉತ್ಪಾದಕರು ಸಹಕಾರಿ ತತ್ವದ ಆಧಾರದ ಮೇಲೆ ನಡೆಸುತ್ತಾರೆ. ಪ್ಯಾಕಿಂಗ್ ಯಂತ್ರೋಪಕರಣಗಳು ಮತ್ತು ಕಟ್ಟಡಕ್ಕಾಗಿ ಡೈರಿ ಸ್ಥಾಪಿಸಲು 20 ಲಕ್ಷ ರೂ. ಹೂಡಿಕೆಯ ಅಗತ್ಯವಿದೆ, ಅದನ್ನು ದಾನಿಗಳಿಂದ ಸಂಗ್ರಹಿಸಲಾಗುವುದು,'' ಎಂದು ಹೇಳಿದರು.

"ಎಲ್ಲಾ ಸದಸ್ಯರು ಡೈರಿಯ ಮಾಲೀಕರಾಗಿರುತ್ತಾರೆ. ಅರಣ್ಯ ಇಲಾಖೆ ಹಳ್ಳಿಕಾರ್ ತಳಿ ದನಗಳನ್ನು ಸಾಕಲು ಸಹಾಯ ಮಾಡುತ್ತದೆ. ದೇಶದಲ್ಲಿ ಸಾವಯವ ಉತ್ಪನ್ನಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈಗ ಮಾರುಕಟ್ಟೆಯಲ್ಲಿ ಉತ್ಪಾದನೆಗಳ ಲಭ್ಯತೆಯಿಲ್ಲ. ಈಗಿನ ಬಿಗಿ ನಿಯಮಾವಳಿಗಳ ಕಾರಣದಿಂದ ವನ್ಯಜೀವಿ ಅಭಯಾರಣ್ಯದೊಳಗೆ ದನಕರುಗಳನ್ನು ಬಿಡಲು ಸಾದ್ಯವಿಲ್ಲ.
"ಇದೇ ಕಾರಣಕ್ಕೆ ಇಲಾಖೆ ಮತ್ತು ರೈತರ ನಡುವೆ ಸಂಘರ್ಷವೂ ಉಂಟಾಗಿತ್ತು. ಇದನ್ನು ನಿವಾರಿಸಲು ಈಗ ಇಲಾಖೆಯೇ ಡೈರಿ ಸ್ಥಾಪನೆಗೆ ಮುಂದಾಗುವ ಮೂಲಕ ರೈತರು ಅರಣ್ಯಕ್ಕೆ ಕಡಿಮೆ ಅವಲಂಬಿತರಾಗುವಂತೆ ಮಾಡಲಾಗುತ್ತಿದೆ. ಅರಣ್ಯ ಇಲಾಖೆಯು 3- 4 ರೈತರಿಗೆ ಒಂದರಂತೆ ಬೋರ್ವೆಲ್ ಸೌಲಭ್ಯವನ್ನು ಒದಗಿಸುವ ಮೂಲಕ ರೈತರು ತಮ್ಮ ಹೊಲಗಳಲ್ಲಿ ಹುಲ್ಲು ಬೆಳೆಸಿಕೊಂಡು ಹಸು ಸಾಕಲು ಯೋಜಿಸಲಾಗಿದೆ,'' ಎಂದು ಹೇಳಿದರು.
Recommended Video
"ಮುಂದಿನ ಆಗಸ್ಟ್ ತಿಂಗಳ ಅಂತ್ಯದಲ್ಲಿ ಡೈರಿಯ ಕಾಮಗಾರಿ ಆರಂಭಗೊಳ್ಳಲಿದ್ದು, ಹಳ್ಳಿಕಾರ್ ಸಾವಯವ ತುಪ್ಪದ ಬ್ರಾಂಡ್ ಹೆಸರಿನಲ್ಲಿ ಉತ್ಪನ್ನಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತದೆ. ಪೊನ್ನಾಚಿ ಗ್ರಾಮದಲ್ಲಿ 1500ಕ್ಕೂ ಹೆಚ್ಚು ಹಳ್ಳಿಕಾರ್ ತಳಿ ದನಗಳಿದ್ದು, ಈಗ ಇವರು ಹಾಲನ್ನು ಕೆಎಂಎಫ್ಗೆ ನೀಡುತ್ತಿದ್ದು, ಅಲ್ಲಿ ಯಾವುದೇ ಬ್ರಾಂಡ್ ಇಲ್ಲ.''
"ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾದ ಚಾಮರಾಜನಗರ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಸಣ್ಣ ರೈತರನ್ನು ಹೊಂದಿದೆ. ಡೈರಿ ಕೃಷಿ ಉತ್ತಮ ಆದಾಯವನ್ನು ನೀಡುತ್ತದೆ ಮತ್ತು ರೈತ ಮಹಿಳೆಯರಿಗೆ ಉದ್ಯೋಗವನ್ನು ನೀಡುತ್ತದೆ. ಜೀವನೋಪಾಯಕ್ಕಾಗಿ ಡೈರಿಯನ್ನು ಅವಲಂಬಿಸಿ ಸಾವಿರಾರು ಕುಟುಂಬಗಳಿವೆ. ಆದರೆ ಇಲ್ಲಿಯವರೆಗೆ ಯಾವುದೇ ಬ್ರಾಂಡ್ ಇಲ್ಲ.''
ಅರಣ್ಯ ಇಲಾಖೆಯ ಈ ಯೋಜನೆ ಜಿಲ್ಲೆಯಲ್ಲಿ ಹೈನುಗಾರಿಕೆ ಮತ್ತು ರೈತರ ಆರ್ಥಿಕತೆಯನ್ನು ಬಲಪಡಿಸಲಿದೆ. ಈ ಕುರಿತು ಮಾತನಾಡಿದ ಪೊನ್ನಾಚಿಯ ರೈತ ತಂಗವೇಲು, "ನಮಗೆ ಇಲ್ಲಿಯೇ ಹಾಲನ್ನು ಡೈರಿಗೆ ಹಾಕುವುದರಿಂದ ಮತ್ತು ಹುಲ್ಲು ಬೆಳೆಸಲೂ ಸಹಾಯ ನೀಡಲು ಇಲಾಖೆ ಮುಂದಾಗಿರುವುದರಿಂದ ಹೆಚ್ಚು ಅನುಕೂಲವಾಗಲಿದೆ'' ಎಂದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications