ಚಾಮರಾಜನಗರ: ಕಾಡಂಚಿನ ಗ್ರಾಮಗಳಿಗೆ ರೋಟರಿ ಸಂಸ್ಥೆಯಿಂದ ಮೂಲಭೂತ ಸೌಲಭ್ಯ
ಚಾಮರಾಜನಗರ, ನವೆಂಬರ್ 25: ಕಾಡಂಚಿನ ಗ್ರಾಮಗಳ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ಬೆಂಗಳೂರಿನ 56 ರೋಟರಿ ಕ್ಲಬ್ ಗಳ ಜಂಟಿ ಸಹಯೋಗದಲ್ಲಿ ವೈಲ್ಡ್ ಲೈಫ್ ಕನ್ಸರ್ವೇಷನ್ ಫೌಂಡೇಷನ್ ಮುಂದಾಗಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನದ ಅಂಚಿನಲ್ಲಿರುವ ಮಂಗಳ ಗ್ರಾಮಗಳಲ್ಲಿ 25 ಶೌಚಾಲಯಗಳನ್ನು ನಿರ್ಮಾಣ ಮಾಡುವ ಯೋಜನೆಯನ್ನು ಬೆಂಗಳೂರಿನ ರೋಟರಿ-3190 ಸಂಸ್ಥೆಯು ಅನುಷ್ಠಾನಗೊಳಿಸುತ್ತಿದೆ. ಈ ಕಾಮಗಾರಿಗೆ ರೋಟರಿ ಕ್ಲಬ್ ಸಮೂಹ ಸಂಸ್ಥೆ ಅಧ್ಯಕ್ಷ ನಾಗೇಂದ್ರ ಪ್ರಸಾದ್, ಕಾರ್ಯುದರ್ಶಿ ಬಿ.ಆರ್.ಶ್ರೀಧರ್ ಚಾಲನೆ ನೀಡಿದರು.
ಕಾಡನಂಚಿನ ಗ್ರಾಮಗಳಲ್ಲಿ ವನ್ಯಪ್ರಾಣಿ-ಮಾನವ ಸಂಘರ್ಷ ತಡೆಯಲು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗಿದೆ. ಆದ್ಯತೆ ಮೇಲೆ ಯಾರಿಗೆ ಶೌಚಾಲಯವಿಲ್ಲವೋ ಅವರಿಗೆ ಶೌಚಾಲಯ ನಿರ್ಮಿಸುವ ಕಾರ್ಯ ಮಾಡಲಿದೆ.

ಡಬ್ಲ್ಯೂಸಿಎಫ್ ಸಂಸ್ಥೆಯ ರಾಜ ಕುಮಾರ್ ಅವರು ಮಾತನಾಡಿ, ಕಾಡಿನಂಚಿನ ಗ್ರಾಮಗಳಲ್ಲಿ ಬಯಲು ಶೌಚ ಕಷ್ಟಕರ. ಬಯಲು ಶೌಚದ ಸಮಯದಲ್ಲಿ ವನ್ಯಪ್ರಾಣಿಗಳ ದಾಳಿ ಮಾಡಿರುವ ಉದಾಹರಣೆಗಳಿವೆ. ಹೀಗಾಗಿ ಕಾಡಂಚಿನ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಮಾಡಲು ಬೆಂಗಳೂರಿನ ರೋಟರಿ ಸಂಸ್ಥೆ ಮುಂದೆ ಬಂದಿದೆ. ಇದು ಈ ಭಾಗದ ಜನರಿಗೆ ಅನುಕೂಲವಾಗುವ ಜತೆಗೆ ರೋಟರಿ ಸಂಸ್ಥೆ ಕಾರ್ಯ ಶಾಶ್ವತವಾಗಿ ಉಳಿಯಲಿದೆ,''ಎಂದು ಹೇಳಿದರು.
ಈ ಸಂಸ್ಥೆಯು ಮೊದಲು ನಗರ ಪ್ರದೇಶದಲ್ಲಿ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿತ್ತು. ಕಾಡಂಚಿನ ಗ್ರಾಮಗಳ ಸ್ಥಿತಿಗತಿ ತಿಳಿಸಿ, ಡಬ್ಲ್ಯೂಸಿಎಫ್ ಈ ಯೋಜನೆಯನ್ನು ಮಂಗಳ ಗ್ರಾಮಕ್ಕೆ ತಂದಿದೆ. ಶೌಚಾಲಯ ಅಲ್ಲದೆ ಹಲವು ಸೌಲಭ್ಯಗಳನ್ನು ಒದಗಿಸಲು ರೋಟರಿ ಸಂಸ್ಥೆಯು ಯೋಜಿಸಿದೆ ಎಂದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications