ಚಾಮರಾಜನಗರ: ಕಾಡಂಚಿನ ಗ್ರಾಮಗಳಿಗೆ ರೋಟರಿ ಸಂಸ್ಥೆಯಿಂದ ಮೂಲಭೂತ ಸೌಲಭ್ಯ
ಚಾಮರಾಜನಗರ, ನವೆಂಬರ್ 25: ಕಾಡಂಚಿನ ಗ್ರಾಮಗಳ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ಬೆಂಗಳೂರಿನ 56 ರೋಟರಿ ಕ್ಲಬ್ ಗಳ ಜಂಟಿ ಸಹಯೋಗದಲ್ಲಿ ವೈಲ್ಡ್ ಲೈಫ್ ಕನ್ಸರ್ವೇಷನ್ ಫೌಂಡೇಷನ್ ಮುಂದಾಗಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನದ ಅಂಚಿನಲ್ಲಿರುವ ಮಂಗಳ ಗ್ರಾಮಗಳಲ್ಲಿ 25 ಶೌಚಾಲಯಗಳನ್ನು ನಿರ್ಮಾಣ ಮಾಡುವ ಯೋಜನೆಯನ್ನು ಬೆಂಗಳೂರಿನ ರೋಟರಿ-3190 ಸಂಸ್ಥೆಯು ಅನುಷ್ಠಾನಗೊಳಿಸುತ್ತಿದೆ. ಈ ಕಾಮಗಾರಿಗೆ ರೋಟರಿ ಕ್ಲಬ್ ಸಮೂಹ ಸಂಸ್ಥೆ ಅಧ್ಯಕ್ಷ ನಾಗೇಂದ್ರ ಪ್ರಸಾದ್, ಕಾರ್ಯುದರ್ಶಿ ಬಿ.ಆರ್.ಶ್ರೀಧರ್ ಚಾಲನೆ ನೀಡಿದರು.
ಕಾಡನಂಚಿನ ಗ್ರಾಮಗಳಲ್ಲಿ ವನ್ಯಪ್ರಾಣಿ-ಮಾನವ ಸಂಘರ್ಷ ತಡೆಯಲು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕಾಡಂಚಿನ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಕಾರ್ಯವನ್ನು ಆರಂಭಿಸಲಾಗಿದೆ. ಆದ್ಯತೆ ಮೇಲೆ ಯಾರಿಗೆ ಶೌಚಾಲಯವಿಲ್ಲವೋ ಅವರಿಗೆ ಶೌಚಾಲಯ ನಿರ್ಮಿಸುವ ಕಾರ್ಯ ಮಾಡಲಿದೆ.

ಡಬ್ಲ್ಯೂಸಿಎಫ್ ಸಂಸ್ಥೆಯ ರಾಜ ಕುಮಾರ್ ಅವರು ಮಾತನಾಡಿ, ಕಾಡಿನಂಚಿನ ಗ್ರಾಮಗಳಲ್ಲಿ ಬಯಲು ಶೌಚ ಕಷ್ಟಕರ. ಬಯಲು ಶೌಚದ ಸಮಯದಲ್ಲಿ ವನ್ಯಪ್ರಾಣಿಗಳ ದಾಳಿ ಮಾಡಿರುವ ಉದಾಹರಣೆಗಳಿವೆ. ಹೀಗಾಗಿ ಕಾಡಂಚಿನ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಮಾಡಲು ಬೆಂಗಳೂರಿನ ರೋಟರಿ ಸಂಸ್ಥೆ ಮುಂದೆ ಬಂದಿದೆ. ಇದು ಈ ಭಾಗದ ಜನರಿಗೆ ಅನುಕೂಲವಾಗುವ ಜತೆಗೆ ರೋಟರಿ ಸಂಸ್ಥೆ ಕಾರ್ಯ ಶಾಶ್ವತವಾಗಿ ಉಳಿಯಲಿದೆ,''ಎಂದು ಹೇಳಿದರು.
ಈ ಸಂಸ್ಥೆಯು ಮೊದಲು ನಗರ ಪ್ರದೇಶದಲ್ಲಿ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿತ್ತು. ಕಾಡಂಚಿನ ಗ್ರಾಮಗಳ ಸ್ಥಿತಿಗತಿ ತಿಳಿಸಿ, ಡಬ್ಲ್ಯೂಸಿಎಫ್ ಈ ಯೋಜನೆಯನ್ನು ಮಂಗಳ ಗ್ರಾಮಕ್ಕೆ ತಂದಿದೆ. ಶೌಚಾಲಯ ಅಲ್ಲದೆ ಹಲವು ಸೌಲಭ್ಯಗಳನ್ನು ಒದಗಿಸಲು ರೋಟರಿ ಸಂಸ್ಥೆಯು ಯೋಜಿಸಿದೆ ಎಂದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications