ಆಂಗ್ಲಮಯವಾದ ಬಂಡೀಪುರ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೆಗೆದುಕೊಂಡ ದೃಢ ನಿರ್ಧಾರ ಏನು ಗೊತ್ತಾ?
ಚಾಮರಾಜನಗರ, ಅಕ್ಟೋಬರ್, 27: ಜನಪ್ರಿಯ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕನ್ನಡ ಮಾಯವಾಗಿದೆ ಎಂದು ಸಫಾರಿಗರೊಬ್ಬರು ದೂರಿದ ಹಿನ್ನೆಲೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅರಣ್ಯ ಇಲಾಖೆಗೆ ಪತ್ರ ಬರೆದು ಕನ್ನಡ ಬಳಸುವಂತೆ ಸೂಚಿಸಿದೆ.
ಬಂಡೀಪುರ ಸಫಾರಿ ವಾಹನ ನಿಲುಗಡೆ, ಹಲವು ಫಲಕಗಳಲ್ಲಿ ಕನ್ನಡವನ್ನು ಬಳಸುತ್ತಿಲ್ಲ. ಕನ್ನಡ ಬಳಸಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಇ-ಮೇಲ್ ಕಳುಹಿಸಿ ಹಾಗೂ ಟ್ವೀಟ್ನಲ್ಲಿ ಟ್ಯಾಗ್ ಮಾಡಿದ್ದರು. ಅರವಿಂದಶರ್ಮಾ ಅವರ ದೂರಿಗೆ ಸ್ಪಂದಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಈಗ ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದು ಕನ್ನಡ ಬಳಸುವಂತೆ ತಿಳಿಸಿದೆ.

1963 ರಾಜಭಾಷಾ ಅನ್ವಯ ಕರ್ನಾಟಕದ ಎಲ್ಲಾ ಇಲಾಖೆಗಳು ಆಡಳಿತವಾಗಿ, ವ್ಯವಹಾರಿಕವಾಗಿ ಕನ್ನಡ ಬಳಸಬೇಕು. ಸಂಪೂರ್ಣ ಕನ್ನಡ ಬಳಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಪ್ರಾಧಿಕಾರ ತಿಳಿಸಿದೆ.
ಬಾಯಿಗೆ ಬೀಗ ಹಾಕಿಕೊಂಡು ಆಕ್ರೋಶ
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು ಇಂದು 45ನೇ ದಿನದ ಪ್ರತಿಭಟನೆ ನಡೆಸಿದರು.
ನಿತ್ಯವೂ ವಿನೂತನವಾಗಿ ಪ್ರತಿಭಟಿಸುತ್ತಿರುವ ಕನ್ನಡಪರ ಹೋರಾಟಗಾರರು ಇಂದು ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಚಾಮರಾಜೇಶ್ವರ ದೇವಾಲಯದಿಂದ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದ ತನಕ ಬಾಯಿಗೆ ಬೀಗ ಹಾಕಿಕೊಂಡು ಪ್ರತಿಭಟನೆ ನಡೆಸಿದರು.
ಬಾಯಿಗೆ ಬೀಗ ಹಾಕಿಕೊಂಡ ಪ್ರತಿಭಟನಾಕಾರರು ರಸ್ತೆ ತಡೆದು ಆಕ್ರೋಶ ಹೊರಹಾಕಿದರು. ರೈತರ ಹಿತ ಕಾಯುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಬಾಯಿಗೆ ಬೀಗ ಹಾಕಿಕೊಂಡಿದೆ, ಮಧ್ಯಸ್ಥಿಕೆ ವಹಿಸಬೇಕಾದ ಕೇಂದ್ರ ಸರ್ಕಾರ ಬಾಯಿಗೆ ಬೀಗ ಹಾಕಿಕೊಂಡಿದೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಬಾಯಿಗೆ ಬೀಗ ಹಾಕಿಕೊಂಡಿದೆ ಎಂದು ಧಿಕ್ಕಾರದ ಘೋಷಣೆ ಕೂಗಿದರು.
ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವ ತನಕ ಪ್ರತಿಭಟನೆ ಮುಂದುವರೆಸುತ್ತೇವೆ,ಹೋರಾಟ ಉಗ್ರರೂಪಕ್ಕೆ ಹೋಗಲಿದೆ ಎಂದು ಎಚ್ಚರಿಕೆ ಕೊಟ್ಟರು.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications