ಮಲೆ ಮಾದಪ್ಪನ ಬೆಟ್ಟದಲ್ಲಿ ತಗ್ಲಾಕೊಂಡ ಅಂತಾರಾಜ್ಯ ಕಳ್ಳರು; ಪೊಲೀಸರು ವಶಕ್ಕೆ ಪಡೆದ ಚಿನ್ನ ಎಷ್ಟು ಗೊತ್ತಾ.?
ಚಾಮರಾಜನಗರ, ನವೆಂಬರ್, 20: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ದೇವಸ್ಥಾನ ಕೂಡ ಒಂದಾಗಿದೆ. ಇನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಅಂತಾರಾಜ್ಯ ಕಳ್ಳರು ತಗ್ಲಾಕೊಂಡಿದ್ದು, ಒಟ್ಟು 14 ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ ಎನ್ನವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಎಷ್ಟು ಜನ ಬಂಧಿತರಾಗಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ತಮಿಳುನಾಡು ಮೂಲದ ಕೊಡಂಗು ಸ್ವಾಮಿ (58), ಇಂದಿರರಾಜ್ ಅಲಿಯಾಸ್ ಇಂದ್ರರಾಜ್ (35), ಕೇರಳ ಮೂಲದ ಅಜಿತ್ (23), ಜೇಸುದಾಸ್ ಅಲಿಯಾಸ್ ಯೇಸುದಾಸ್ (39) ಬಂಧಿತರು. ಹನೂರು, ಗುಂಡ್ಲುಪೇಟೆ, ಕೊಳ್ಳೇಗಾಲ, ಬೇಗೂರು ಹಾಗೂ ಚಾಮರಾಜನಗರ ಮತ್ತು ಕೋಲಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 14 ಕಳವು ಪ್ರಕರಣ ಎಸಗಿದ್ದ ಇವರುಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಒಂದು ಕೇಸ್ನಿಂದ 14 ಪ್ರಕರಣ ಬೆಳಕಿಗೆ: ಹನೂರಿನ ಆಶ್ರಯ ಬಡಾವಣೆ ನಿವಾಸಿ ಸಾಬೀರ್ ಅಹಮದ್ ಮನೆಯಲ್ಲಿ 11 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಈ ಪ್ರಕಣರದ ಬೆನ್ನತ್ತಿದ್ದ ಪೊಲೀಸರು ಮಲೆ ಮಹದೇಶ್ವರ ಬೆಟ್ಟ ಸುತ್ತಮುತ್ತಲೂ ಖದೀಮರ ಗ್ಯಾಂಗ್ ಇರುವ ಮಾಹಿತಿ ಅರಿತು ಬಂಧಿಸಿದ್ದಾರೆ.
ವಿಚಾರಣೆಗೆ ಒಳಪಡಿಸಲಾಗಿ ಹನೂರು, ದೊಡ್ಡಿಂದುವಾಡಿ, ಗುಂಡೇಗಾಲ, ಕೊಳ್ಳೇಗಾಲ ಪಟ್ಟಣ, ಚಾಮರಾಜನಗರ ಪಟ್ಟಣ, ಗುಂಡ್ಲುಪೇಟೆ ಮತ್ತು ಬೇಗೂರು ಮತ್ತು ಕೋಲಾರದಲ್ಲಿ ಒಟ್ಟು 14 ಕಡೆ ಕಳ್ಳತನ ಮಾಡಿರುವುದನ್ನು ಬಾಯಿಬಿಟ್ಟಿದ್ದಾರೆ. ಬಂಧಿತರಿಂದ 41,69,000 ರೂಪಾಯಿ ಬೆಲೆ ಬಾಳುವ 514.16 ಗ್ರಾಂ ಚಿನ್ನಾಭರಣಗಳು, ಮೂರು ಕೆ.ಜಿ.ಬೆಳ್ಳಿ ಆಭರಣಗಳು, 4,400 ನಗದು ಹಣ, ಕೃತಕ್ಕೆ ಬಳಸಿದ್ದ ಮಹೇಂದ್ರ ಕಾರು, ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
13 ಮಂದಿ ಬಂಧನ: ಗುಂಡ್ಲುಪೇಟೆ ತಾಲೂಕಿನ ದೇವರಹಳ್ಳಿ ಕೆರೆ ಬಳಿಯಲ್ಲಿ ಜೂಜಾಡುತ್ತಿದ್ದ 13 ಮಂದಿಯನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಈ ವೇಳೆ ಅವರ ಬಳಿಯಿದ್ದ ಬರೋಬ್ಬರಿ 1,65,000 ರೂಪಾಯಿ ಹಣ ಮತ್ತು 7 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗುಂಡ್ಲುಪೇಟೆ ಪಟ್ಟಣದ ಶಿವಕುಮಾರ್, ರಂಗಸ್ವಾಮಿ, ರವಿ ಎಸ್, ಗುರುರಾಜ್, ಆನಂದ, ದೇವರಹಳ್ಳಿ ಗ್ರಾಮದ ಸುರೇಶ್, ಬಸವೇಶ, ಮಾದಪ್ಪ, ಮಲ್ಲಪ್ಪ, ಮಾದಪ್ಪ ಹಂಗಳ ಗ್ರಾಮದ ನಾಗೇಶ, ಶ್ರೀಕಾಂತ್, ಎಚ್.ಎನ್.ಶಿವಪ್ಪ ಬಂಧಿತರು.
ಗುಂಡ್ಲುಪೇಟೆ ಪೊಲೀಸ್ ಠಾಣೆ ಸರಹದ್ದಿಗೆ ಸೇರಿದ ದೇವರಹಳ್ಳಿ ಗ್ರಾಮದ ಮಲ್ಲೇಶ್ವರ ದೇವಾಲಯದ ಪಕ್ಕದ ದೇವರಹಳ್ಳಿ ಕೆರೆಯ ಏರಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಚಾರ್ಜಬಲ್ ಲೈಟ್ ಅನ್ನು ಕಬ್ಬಿಣದ ಸರಳಿಗೆ ಅಳವಡಿಸಿ ಅದೇ ಬೆಳಕಿನಲ್ಲಿ ಅಂದರ್-ಬಾಹರ್ ಜೂಜಾಟ ಆಡುತ್ತಿದ್ದರು. ಇನ್ನು ಈ ಬಗ್ಗೆ ಮಾಹಿತಿ ದೊರೆತ ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸುತ್ತುವರೆದು ಆರೋಪಿಗಳನ್ನು ಬಂಧಿಸಿ, ನಗದು, ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications