Get Updates
Get notified of breaking news, exclusive insights, and must-see stories!

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತನ ಮೇಲೆ ಬಿತ್ತು ಐಟಿ ಕಣ್ಣು

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಮತ್ತು ಆಪ್ತರಾಗಿರುವ ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಉಮೇಶ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶನಿವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.'

ಚಾಮರಾಜನಗರದ ನ್ಯಾಯಾಲಯ ರಸ್ತೆಯಲ್ಲಿರುವ ಉಮೇಶ್ ಅವರ ನಿವಾಸದ ಮೇಲೆ ದಾಳಿ ನಡೆಸಿದ 14 ಐಟಿ ಅಧಿಕಾರಿಗಳ ತಂಡ ವಿವಿಧ ದಾಖಲಾತಿಗಳನ್ನು ಪರಿಶೀಲಿಸಿತು.

ಉಮೇಶ್ ಅವರು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಗೂ ಆಪ್ತರಾಗಿದ್ದಾರೆ. ಈ ಹಿಂದೆ ಎಂ. ಚಿನ್ನಸ್ವಾಮಿ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾಗಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರಿಂದ ಅವರನ್ನು ವಜಾಗೊಳಿಸಿ ಸಿದ್ದರಾಮಯ್ಯ ಅವರು ಉಮೇಶ್ ಅವರನ್ನು ನೇಮಿಸಿದ್ದರು.

IT raid on CM Siddaramaiahs relatives house

ಜೆಡಿಎಸ್ ಅಭ್ಯರ್ಥಿಗೆ ಶಾಕ್
ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜ್ಯದ ವಿವಿಧ ರಾಜಕೀಯ ಮುಖಂಡರ ಮನೆಗಳ ಮೇಲೆ ಐಟಿ ದಾಳಿ ನಡೆಯುತ್ತಿದೆ. ಶನಿವಾರ ಬೆಳಿಗ್ಗೆ ಖಾನಾಪುರದ ಜೆಡಿಎಸ್ ಅಭ್ಯರ್ಥಿ ನಾಸೀರ್ ಭಗವಾನ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

IT raid on CM Siddaramaiahs relatives house

ನಾಸೀರ್ ಭಗವಾನ್ ಅವರು ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಬಳಿ 191 ಕೋಟಿ ಮೌಲ್ಯದ ಆಸ್ತಿ ಇರುವುದಾಗಿ ಮಾಹಿತಿ ನೀಡಿದ್ದರು.

ಮೂರು ಕಾರಿನಲ್ಲಿ ಬಂದ 13 ಅಧಿಕಾರಿಗಳ ತಂಡ ಖಾನಾಪುರದ ಗಂದಿಗವಾಡ ಗ್ರಾಮದಲ್ಲಿರುವ ನಾಸೀರ್ ಅವರ ಮನೆಯಲ್ಲಿ ಪರಿಶೀಲನೆ ನಡೆಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+