ಸತ್ತ ಆನೆಯ ದಂತ ಕದ್ದ ಚೋರರ ಬಂಧನ
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಗೆ ಬರುವ ಓಂಕಾರ್ ಅರಣ್ಯವಲಯದ ಜೆ.ಡಿ ಗುಂಡಿಹಳ್ಳದ ಬಳಿ ಸತ್ತಿದ್ದ ಕಾಡಾನೆಯ ದಂತ ಕದ್ದೊಯ್ದಿದ್ದ ಐವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಚಾಮರಾಜನಗರ, ಜನವರಿ 26: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯಕ್ಕೆ ಸೇರಿದ ಓಂಕಾರ್ ಅರಣ್ಯವಲಯದ ವ್ಯಾಪ್ತಿಯಲ್ಲಿ ಆನೆದಂತ ಕದ್ದು ತಲೆಮರೆಸಿಕೊಂಡಿದ್ದ ಐದು ಮಂದಿಯನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಯ್ಯನಪುರ ಗ್ರಾಮದ ಸುಬ್ಬಮ್ಮ, ಬೆಳ್ಳಪ್ಪ, ಬಸವಯ್ಯ, ಚಲುವರಾಯನಪುರದ ಸ್ವಾಮಿ, ಬರಗರಹುಂಡಿ ಬೆಳ್ಳಪ್ಪ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಗೆ ಬರುವ ಓಂಕಾರ್ ಅರಣ್ಯವಲಯದ ಜೆ.ಡಿ ಗುಂಡಿಹಳ್ಳದ ಬಳಿ ಸತ್ತಿದ್ದ ಕಾಡಾನೆಯ ದಂತ ಕದ್ದೊಯ್ದಿದ್ದರು.[ಮತ್ತೆ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದವು ಮೂರು ಹುಲಿ]

ಕಾಡಾನೆ ಸತ್ತಿದ್ದ ಸಂದರ್ಭ ಸ್ಥಳಕ್ಕೆ ತೆರಳಿದ ಅಧಿಕಾರಿಗಳಿಗೆ ಆನೆಯ ದಂತ ಅಪಹರಿಸಿದ್ದು ಬೆಳಕಿಗೆ ಬಂದಿತ್ತು. ಹೀಗಾಗಿ ಪ್ರಕರಣ ದಾಖಲಿಸಿಕೊಂಡು ಪರಿಶೀಲಿಸತೊಡಗಿದ್ದರು. ಆಗ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ಓಂಕಾರ್ ಅರಣ್ಯವಲಯ ಅಧಿಕಾರಿಗಳ ತಂಡ ಈ ಹಿಂದೆ ಹಲವು ಪ್ರಕರಣಗಳಲ್ಲಿ ಬಂಧಿಸಿದ್ದ ಕನ್ನಯ್ಯನಪುರ ಗ್ರಾಮದ ಸುಬ್ಬಮ್ಮ ಎಂಬುವವರನ್ನು ಅನುಮಾನದ ಮೇರೆಗೆ ವಿಚಾರಣೆಗೊಳಪಡಿಸಿದಾಗ ಆನೆ ದಂತಗಳು ಸುಬ್ಬಮ್ಮನ ಮನೆಯಲ್ಲಿ ದೊರೆತಿತ್ತು.[ಬಂಡೀಪುರದಲ್ಲಿ ಹುಲಿಗಳ ದರ್ಶನ, ಪ್ರವಾಸಿಗರಿಗೆ ರೋಮಾಂಚನ]
ಈ ಸಂಬಂಧ ವಿಚಾರಣೆ ನಡೆಸಿದಾಗ ಇದರಲ್ಲಿ ಗ್ರಾಮದ ಬೆಳ್ಳಪ್ಪ, ಬಸವಯ್ಯ, ಚಲುವರಾಯನಪುರದ ಸ್ವಾಮಿ, ಬರಗರಹುಂಡಿ ಬೆಳ್ಳಪ್ಪ ಎಂಬುವವರ ಕೈವಾಡವಿರುವುದಾಗಿ ಬಾಯಿಬಿಟ್ಟಿದ್ದರು. ಅದರಂತೆ ಐವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸುಮಾರು 30 ಕೆಜಿ ತೂಕವುಳ್ಳ 2 ದಂತಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ದಂತಗಳನ್ನು ಆರೋಪಿಗಳು ಕೇರಳಕ್ಕೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. ಈ ತಂಡ ಇನ್ನೆಷ್ಟು ಅಕ್ರಮದಲ್ಲಿ ಭಾಗಿಯಾಗಿದೆ ಎಂಬುದು ವಿಚಾರಣೆಯಿಂದ ಹೊರಬರಬೇಕಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications