ಪ್ರಧಾನಿ ಮೋದಿ ಅವರು ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡ್ತಿರುವುದು ಸರಿನಾ?: ಎಚ್.ಡಿ.ಕೆ ಪ್ರಶ್ನೆ
ಚಾಮರಾಜನಗರ, ಮೇ, 06: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಜೆ.ಡಿ.ಎಸ್ ಅಭ್ಯರ್ಥಿಗಳ ಪರ ಹನೂರಿನಲ್ಲಿ ಇಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಚಾರ ನಡೆಸಿದರು. ಈ ವೇಳೆ ಬೆಂಗಳೂರಿನ ಮೋದಿ ರೋಡ್ ಶೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ಮೋದಿ ಅವರು ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡುತ್ತಿದ್ದಾರೆ. ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡುತ್ತಿದ್ದಾರೆ. ಇದರಿಂದ ದುಡಿಯುವ ಜನ ಬೀದಿ ಪಾಲಾಗುತ್ತಿದ್ದಾರೆ ಎಂದು ಗುಡುಗಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡುತ್ತಿದ್ದಾರೆ. ಇದರಿಂದ ದುಡಿಯುವ ಜನ ಬೀದಿ ಪಾಲಾಗುತ್ತಿದ್ದಾರೆ.
— oneindiakannada (@OneindiaKannada) May 6, 2023
ಎಚ್.ಡಿ.ಕುಮಾರಸ್ವಾಮಿ#hdkumaraswamy #modiroadshow #karnatakaelections2023 #bengaluru pic.twitter.com/9GnY40M5eA
ಅಲ್ಲದೆ ನಾಳೆ ನೀಟ್ ಪರೀಕ್ಷೆ ಬರೆಯುವ ಮಕ್ಕಳ ಮೇಲೆ ಪ್ರಧಾನಿ ಅವರ ರೋಡ್ ಶೋ ಪರಿಣಾಮ ಬೀರುತ್ತದೆ. ಮನೆ ಬಾಗಿಲು ತೆಗೆಯಬೇಡಿ, ಓಣಿಯಲ್ಲಿ ಓಡಾಡಬೇಡಿ ಅಂತಾರೆ. ಹಾಗಿದರೆ ರೋಡ್ ಶೋ ಯಾಕೆ ಮಾಡುತ್ತೀರಾ? ಯಾರೋ ಕೆಲವರನ್ನು ತುಂಬಿಕೊಬಂದು ನಿಲ್ಲಿಸಿ ಮೋದಿ ಮೋದಿ ಎಂದು ಕೂಗಿಸಿಕೊಂಡು ಹೋಗುತ್ತಾರೆ. ಇದರಿಂದ ಜನರಿಗೆ ತೊಂದರೆಯೇ ಹೊರತು ಬಿಜೆಪಿಗೆ ಲಾಭ ಇಲ್ಲ ಎಂದರು.

ಇನ್ನು ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಬರುತ್ತಿರುವ ಸಮೀಕ್ಷೆಗಳು ಕೃತಕವಾಗಿವೆ. ರಾಷ್ಟ್ರೀಯ ಪಕ್ಷಗಳು ಹಣ ಕೊಟ್ಟು ಜನರ ಭಾವನೆಗಳನ್ನು ಕದಡುವ ಕೆಲಸವನ್ನು ಮಾಡುತ್ತಿವೆ. ಈ ಸಮೀಕ್ಷೆಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಇವು ರಾಷ್ಟ್ರೀಯ ಪಕ್ಷಗಳ ಹಣಕ್ಕೋಸ್ಕರ ಮಾಡಿರುವ ಸಮೀಕ್ಷೆಗಳಾಗಿವೆ. ಇವೆಲ್ಲ ಈ ಬಾರಿ ಉಲ್ಟಾ ಹೊಡೆಯುತ್ತವೆ. ಯಾವುದೇ ರಾಷ್ಟ್ರೀಯ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗುವುದಿಲ್ಲ. ಹಾಗೆಯೇ ಸಮೀಕ್ಷೆಗಳಲ್ಲಿ ಜೆಡಿಎಸ್ಗೆ ಕಡಿಮೆ ಸ್ಥಾನ ಕೊಟ್ಟಿರುವವರು ಆನಂದಪಡಲಿ.
ಇನ್ನು ಸಿದ್ದರಾಮಯ್ಯನವರಿಗೆ ಯಾವ ಸಿದ್ಧಾಂತವಿದೆ. ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ ಕಾಂಗ್ರೆಸ್ ಅನ್ನೇ ಮುಗಿಸಿ ಎನ್ನುತ್ತಾರೆ.ಹೃದಯದಲ್ಲಿರುವುದನ್ನು ಅವರು ಹೇಳುತ್ತಾರೆ. ಆಮೇಲೆ ಇಲ್ಲ.. ಇಲ್ಲ.. ಬಿಜೆಪಿ ಮುಗಿಸಿ ಅಂತಾರೆ. ಇದು ಅವರ ಸಿದ್ಧಾಂತವಾಗಿದೆ. ನಾವು ಅವರಿಂದ ಸಿದ್ಧಾಂತವನ್ನು ಕಲಿಯಬೇಕಾಗಿಲ್ಲ ಎಂದರು.
ಅಧಿಕಾರದಲ್ಲಿದ್ದಾಗ ಲಿಂಗಾಯತರ ಬಗ್ಗೆ ಮಾತನಾಡಿ ಈಗ ಲಿಂಗಾಯತರೇ ಕ್ಷಮಿಸಿ ಎಂದು ಹೇಳುತ್ತಿದ್ದಾರೆ. ಇವರು ಜಾತ್ಯಾತೀತವಾದೀನಾ? ಪ್ರತಿ ಸಮಾಜಕ್ಕೆ ದೇವೇಗೌಡರು ಕೊಟ್ಟ ರಾಜಕೀಯ ಶಕ್ತಿಯನ್ನು ಇವರ ಕೈಯಲ್ಲಿ ಕೊಡುವುದಕ್ಕೆ ಆಗುತ್ತದೆಯಾ? ಎಲ್ಲರಿಗಿಂತ ಹೆಚ್ಚಿನ ಹೊಂದಾಣಿಕೆ ರಾಜಕಾರಣ ಸಿದ್ದರಾಮಯ್ಯ ಅವರದ್ದು. ಮೊನ್ನೆ ನಾಗಮಂಗಲದಲ್ಲಿ ಭಾಷಣ ಮಾಡಿ ಪಶ್ಚಾತ್ತಾಪ ಪಡಲಿಲ್ಲವಾ. ಯಾರನ್ನೋ ಗೆಲ್ಲಿಸಿ ತಪ್ಪು ಮಾಡಿದ್ದೀವಿ ಅಂತಾ ಹೇಳಿಲ್ವಾ, ಅದಕ್ಕಿಂತ ಸಾಕ್ಷಿ ಬೇಕಾ? ಎಂದರು.
ಹಾಗೆಯೆ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಎಂ.ಆರ್.ಮಂಜುನಾಥ್ ಪರ ಎಚ್.ಡಿ.ಕುಮಾರಸ್ವಾಮಿ ಅವರು ಮತಬೇಟೆ ಮಾಡಿದರು. ಈ ಮೂಲಕ ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋತಿದ್ದ ಮಂಜುನಾಥ್ಗೆ ಬೂಸ್ಟರ್ ಡೋಸ್ ನೀಡಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications