ಮೂಲಸೌಲಭ್ಯಗಳ ಕೊರತೆ: ಮತದಾನಕ್ಕೆ ಮುಂದೆ ಬಾರದ ಚಿಕ್ಕ ಎಲಚೆಟ್ಟಿ ಗ್ರಾಮಸ್ಥರು
ಚಾಮರಾಜನಗರ, ಮೇ, 10: ರಾಜ್ಯದೆಲ್ಲೆಡೆ ವಿಧಾನಸಭೆ ಚುನಾವಣೆಯ ಮತದಾನ ಬಿರುಸಿನಿಂದ ಸಾಗಿದ್ದು, ಹಲವೆಡೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ ಘಟನೆಯೂ ನಡೆದಿದೆ. ಅದೇ ರೀತಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚಿಕ್ಕ ಎಲಚೆಟ್ಟಿ ಗ್ರಾಮಸ್ಥರು ಮೂಲಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ್ದಾರೆ.
ಯಾವ ಜನಪ್ರತಿನಿಧಿಗಳು ಕೂಡ ನಮಗೆ ಮೂಲಸೌಕರ್ಯಗಳನ್ನು ಒದಗಿಸಿಲ್ಲ ಎಂದು ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕ ಎಲಚೆಟ್ಟಿ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದಾರೆ. ಇದು ಕಾಡಂಚಿನ ಪ್ರದೇಶ ಆಗಿದ್ದು, ಇಲ್ಲಿ ಮೂಲಭೂತ ಸೌಕರ್ಯ ಹಾಗೂ ರಸ್ತೆ ನಿರ್ಮಾಣ ಮಾಡಿಸಿದಿರುವ ಹಿನ್ನೆಲೆ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೂಲಸೌಕರ್ಯಗಳನ್ನು ಒದಗಿಸುವವರೆಗೂ ನಾವು ಮತದಾನಕ್ಕೆ ಬರುವುದಿಲ್ಲ ಎಂದು ಚಿಕ್ಕ ಎಲಚೆಟ್ಟಿ ಗ್ರಾಮದ 101 ಮತದಾರರು ಪಟ್ಟು ಹಿಡಿದಿದ್ದಾರೆ.
ವಿ.ಸೋಮಣ್ಣ ದಂಪತಿ ಮತದಾನ
ಮತ್ತೊಂದೆಡೆ ಚಾಮರಾಜನಗರದಲ್ಲಿ ಮೊದಲ ಬಾರಿ ದಂಪತಿ ಸಮೇತ ಆಗಮಿಸಿ ಸಚಿವ ವಿ.ಸೋಮಣ್ಣ ಅವರು ಮತದಾನ ಮಾಡಿದರು.
ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿ.ಸೋಮಣ್ಣ ಅವರು, ನಗರದ ಪೇಟೆ ಪ್ರೈಮರಿ ಶಾಲೆಯ ಬೂತ್ ನಂ 74ರಲ್ಲಿ ಮತದಾನ ಮಾಡಿದರು. 9:30ಕ್ಕೆ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ವಿ.ಸೋಮಣ್ಣ ಸರದಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿ ಗಮನ ಸೆಳೆದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications