ಚಾಮರಾಜನಗರದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: ಕಾಡಂಚಿನ ಗ್ರಾಮಗಳಿಗೆ ವಾಹನ ವ್ಯವಸ್ಥೆ
ಚಾಮರಾಜನಗರ, ಮೇ 09: ಪ್ರಜಾಪ್ರಭುತ್ವದ ಹಬ್ಬ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದ್ದು ಜಿಲ್ಲೆಯಲ್ಲಿ ಮಸ್ಟರಿಂಗ್ ಕೇಂದ್ರಗಳಿಂದ ಚುನಾವಣಾ ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದ್ದಾರೆ.
ಚಾಮರಾಜನಗರದ ಪದವಿ ಕಾಲೇಜು ಹಾಗೂ ಕೊಳ್ಳೆಗಾಲದ ಎಂ.ಜಿ.ಎಸ್.ವಿ. ಪದವಿಪೂರ್ವ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಿಂದ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರಿನ ವಿವಿಧ ಮತಗಟ್ಟೆಗಳಿಗೆ ಇವಿಎಂ ಹಿಡಿದು ಸಿಬ್ಬಂದಿ ತೆರಳಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಮತದಾನ ಹೊಂದಿರುವ ಸಿಬ್ಬಂದಿಗಳಿಗೆ ಮಸ್ಟರಿಂಗ್ ಕೇಂದ್ರದ ಅವರಣದಲ್ಲೇ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅಂಚೆ ಮತದಾನ ಮಾಡಿದ ಬಳಿಕ ಚುನಾವಣೆಗೆ ಸಿಬ್ಬಂದಿಗಳು ತೆರಳಿದರು. ಶಿಕ್ಷಕರು, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು ಅಂಚೆ ಮತ ಪತ್ರಗಳನ್ನು ಬ್ಯಾಲೆಟ್ ಬಾಕ್ಸ್ಗಳಲ್ಲಿ ಹಾಕಿ ತಮ್ಮ ಹಕ್ಕು ಚಲಾಯಿಸಿದರು.
ಕಾಡಂಚಿನ ಗ್ರಾಮಗಳಿಗೆ ಜೀಪ್ ವ್ಯವಸ್ಥೆ
ವಿವಿಧ ಮತಗಟ್ಟೆಗಳಿಗೆ ತೆರಳಲು ಬಸ್ ಜೊತೆಗೆ 4×4 ಜೀಪ್ ವ್ಯವಸ್ಥೆಯನ್ನು ಚುನಾವಣಾಧಿಕಾರಿಗಳು ಈ ಬಾರಿ ಕಲ್ಪಿಸಿದ್ದರು. ಹನೂರು, ಚಾಮರಾಜನಗರ ತಾಲೂಕಿನ ವಿವಿಧ ಕಾಡಂಚಿನ ಗ್ರಾಮಗಳಿಗೆ, ರಸ್ತೆ ಇಲ್ಲದ ಊರುಗಳಿಗೆ, ಪ್ರಾಣಿ ಭೀತಿ ಇರುವ ಗ್ರಾಮಗಳಿಗೆ ಚುನಾವಣಾ ಸಿಬ್ಬಂದಿ ಜೀಪ್ ಮೂಲಕ ತೆರಳಿದರು.
ಚಾಮರಾಜನಗರ ಜಿಲ್ಲೆಯ ಹನೂರು ಮಸ್ಟರಿಂಗ್ ಕೇಂದ್ರದಲ್ಲಿ ಮತಗಟ್ಟೆ ಸಿಬ್ಬಂದಿಗೆ ಭೂರಿ ಭೋಜನ ವ್ಯವಸ್ಥೆ ಕಲ್ಪಿಸಲಾಗಿತ್ತು. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾದ್ದರಿಂದ ಲಾಡು, ಕೀರು, ಮೈಸೂರು ಪಾಕ್, 4 ಪಲ್ಯ , ಚಪಾತಿ, ಮುದ್ದೆ ಸೇರಿದಂತೆ ಭರ್ಜರಿ ಭೋಜನವನ್ನು ಮತಗಟ್ಟೆ ಸಿಬ್ಬಂದಿಗಗೆ ಉಣಬಡಿಸಲಾಯಿತು.
ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯು ಹದ್ದಿನ ಕಣ್ಣಿಟ್ಟಿದ್ದು 2,000ಕ್ಕೂ ಅಧಿಕ ಪೊಲೀಸರು ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದಾರೆ. ಜೊತೆಗೆ, ಸಿಆರ್ ಪಿಎಫ್, ಬೇರೆ ರಾಜ್ಯದ ಪೊಲೀಸರು ಕೂಡ ಜಿಲ್ಲೆಯ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications