ಚಾಮರಾಜನಗರದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: ಕಾಡಂಚಿನ ಗ್ರಾಮಗಳಿಗೆ ವಾಹನ ವ್ಯವಸ್ಥೆ
ಚಾಮರಾಜನಗರ, ಮೇ 09: ಪ್ರಜಾಪ್ರಭುತ್ವದ ಹಬ್ಬ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದ್ದು ಜಿಲ್ಲೆಯಲ್ಲಿ ಮಸ್ಟರಿಂಗ್ ಕೇಂದ್ರಗಳಿಂದ ಚುನಾವಣಾ ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದ್ದಾರೆ.
ಚಾಮರಾಜನಗರದ ಪದವಿ ಕಾಲೇಜು ಹಾಗೂ ಕೊಳ್ಳೆಗಾಲದ ಎಂ.ಜಿ.ಎಸ್.ವಿ. ಪದವಿಪೂರ್ವ ಕಾಲೇಜಿನ ಮಸ್ಟರಿಂಗ್ ಕೇಂದ್ರಗಳಿಂದ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರಿನ ವಿವಿಧ ಮತಗಟ್ಟೆಗಳಿಗೆ ಇವಿಎಂ ಹಿಡಿದು ಸಿಬ್ಬಂದಿ ತೆರಳಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಮತದಾನ ಹೊಂದಿರುವ ಸಿಬ್ಬಂದಿಗಳಿಗೆ ಮಸ್ಟರಿಂಗ್ ಕೇಂದ್ರದ ಅವರಣದಲ್ಲೇ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅಂಚೆ ಮತದಾನ ಮಾಡಿದ ಬಳಿಕ ಚುನಾವಣೆಗೆ ಸಿಬ್ಬಂದಿಗಳು ತೆರಳಿದರು. ಶಿಕ್ಷಕರು, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು ಅಂಚೆ ಮತ ಪತ್ರಗಳನ್ನು ಬ್ಯಾಲೆಟ್ ಬಾಕ್ಸ್ಗಳಲ್ಲಿ ಹಾಕಿ ತಮ್ಮ ಹಕ್ಕು ಚಲಾಯಿಸಿದರು.
ಕಾಡಂಚಿನ ಗ್ರಾಮಗಳಿಗೆ ಜೀಪ್ ವ್ಯವಸ್ಥೆ
ವಿವಿಧ ಮತಗಟ್ಟೆಗಳಿಗೆ ತೆರಳಲು ಬಸ್ ಜೊತೆಗೆ 4×4 ಜೀಪ್ ವ್ಯವಸ್ಥೆಯನ್ನು ಚುನಾವಣಾಧಿಕಾರಿಗಳು ಈ ಬಾರಿ ಕಲ್ಪಿಸಿದ್ದರು. ಹನೂರು, ಚಾಮರಾಜನಗರ ತಾಲೂಕಿನ ವಿವಿಧ ಕಾಡಂಚಿನ ಗ್ರಾಮಗಳಿಗೆ, ರಸ್ತೆ ಇಲ್ಲದ ಊರುಗಳಿಗೆ, ಪ್ರಾಣಿ ಭೀತಿ ಇರುವ ಗ್ರಾಮಗಳಿಗೆ ಚುನಾವಣಾ ಸಿಬ್ಬಂದಿ ಜೀಪ್ ಮೂಲಕ ತೆರಳಿದರು.
ಚಾಮರಾಜನಗರ ಜಿಲ್ಲೆಯ ಹನೂರು ಮಸ್ಟರಿಂಗ್ ಕೇಂದ್ರದಲ್ಲಿ ಮತಗಟ್ಟೆ ಸಿಬ್ಬಂದಿಗೆ ಭೂರಿ ಭೋಜನ ವ್ಯವಸ್ಥೆ ಕಲ್ಪಿಸಲಾಗಿತ್ತು. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಾದ್ದರಿಂದ ಲಾಡು, ಕೀರು, ಮೈಸೂರು ಪಾಕ್, 4 ಪಲ್ಯ , ಚಪಾತಿ, ಮುದ್ದೆ ಸೇರಿದಂತೆ ಭರ್ಜರಿ ಭೋಜನವನ್ನು ಮತಗಟ್ಟೆ ಸಿಬ್ಬಂದಿಗಗೆ ಉಣಬಡಿಸಲಾಯಿತು.
ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯು ಹದ್ದಿನ ಕಣ್ಣಿಟ್ಟಿದ್ದು 2,000ಕ್ಕೂ ಅಧಿಕ ಪೊಲೀಸರು ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದಾರೆ. ಜೊತೆಗೆ, ಸಿಆರ್ ಪಿಎಫ್, ಬೇರೆ ರಾಜ್ಯದ ಪೊಲೀಸರು ಕೂಡ ಜಿಲ್ಲೆಯ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications