ತುಂಬಿ ಹರಿಯುತ್ತಿರುವ ಮೂಲೆಹೊಳೆ ಹಳ್ಳ; ಕೇರಳ-ಕರ್ನಾಟಕ ಸಂಚಾರ ಬಂದ್
ಚಾಮರಾಜನಗರ, ಆಗಸ್ಟ್ 08: ಕೇರಳದ ವೈನಾಡಿನಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಕಾರಣ ಚಾಮರಾಜನಗರ ಜಿಲ್ಲೆಯ ಮೂಲೆಹೊಳೆ ಹಳ್ಳ ಉಕ್ಕಿ ಹರಿಯುತ್ತಿದೆ.
Recommended Video
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಮೂಲೆಹೊಳೆಯು ನಿರಂತರ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದು, ತಾತ್ಕಾಲಿಕವಾಗಿ ಕರ್ನಾಟಕ-ಕೇರಳ ಸಂಚಾರವನ್ನು ಬಂದ್ ಮಾಡಿದ್ದಾರೆ.
ಕಬಿನಿಯಿಂದ ನೀರು ಬಿಡುಗಡೆ; ಹೆದ್ದಾರಿಗೇ ಹರಿದ ನೀರು
ಕೇರಳ-ಕರ್ನಾಟಕದ ಗಡಿ ಮೂಲೆಹೊಳೆ ಸಮೀಪದ ರಸ್ತೆಯಲ್ಲೆಲ್ಲಾ ನೀರು ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅನಾಹುತ ಸಂಭವಿಸದಂತೆ ತಡೆಯುವ ಉದ್ದೇಶದಿಂದ ಅರಣ್ಯಾಧಿಕಾರಿಗಳು ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಿದ್ದಾರೆ. ಈ ಕಾರಣ ನಿನ್ನೆ ಕೇರಳ ಕರ್ನಾಟಕ ಸಂಚರಿಸುವ ಸರಕು ಸಾಗಣೆ ಮಾಡುವ ವಾಹನಗಳು ಮದ್ದೂರು ಚೆಕ್ ಪೋಸ್ಟ್ ನಲ್ಲೇ ಸಾಲುಗಟ್ಟಿ ನಿಂತಿದ್ದವು.
ಮಳೆ ಕಡಿಮೆಯಾಗುವವರೆಗೂ ಯಾವುದೇ ವಾಹನಗಳನ್ನು ಈ ಮಾರ್ಗದಲ್ಲಿ ಸಂಚರಿಸಲು ಬಿಡದಂತೆ ಅರಣ್ಯಾಧಿಕಾರಿಗಳು ನಿರ್ಧಾರ ಮಾಡಿದ್ದಾರೆ. ಜಿಲ್ಲೆಯ ಪಕ್ಕದ ಮೈಸೂರಿನ ಗ್ರಾಮಾಂತರ ಪ್ರದೇಶಗಳಲ್ಲೂ ನದಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಹ ಉಂಟಾಗಿದೆ. ಹುಣಸೂರಿನಲ್ಲಿ ಜಮೀನುಗಳಿಗೆ ನೀರು ನುಗ್ಗಿದ್ದು, ರೈತರು ತಾವು ಬೆಳೆದ ಶುಂಠಿ ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.