Kartika Masa 2023: ಕಡೇ ಕಾರ್ತಿಕ ಸೋಮವಾರ ಹಿನ್ನೆಲೆ ಮಾದಪ್ಪನ ಬೆಟ್ಟಕ್ಕೆ ಹರಿದುಬಂತು ಭಕ್ತರ ದಂಡು
ಚಾಮರಾಜನಗರ, ಡಿಸೆಂಬರ್, 11: ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಡೆ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಪೂಜೆ ಸಂಪ್ರದಾಯದಂತೆ ನೆರವೇರಿತು.
ಕೊನೆಯ ಕಾರ್ತಿಕ ಸೋಮವಾರದ ಹಾಗೂ ಎಣ್ಣೆ ಮಜ್ಜನ ಪ್ರಯುಕ್ತ ದೇವಾಲಯದಲ್ಲಿ ಮುಂಜಾನೆಯಿಂದ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ಬೆಳಗಲಾಯಿತು. ಕಾರ್ತಿಕ ಮಾಸದ ಕೊನೆಯ ದಿನವಾದ ಸೋಮವಾರ ಮಹಾ ಜ್ಯೋತಿ ದರ್ಶನ ರಾತ್ರಿ 9:30 ಇರಲಿದ್ದು, ಲಕ್ಷಾಂತರ ಮಂದಿ ಭಕ್ತರು ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ.

ಕಾರ್ತಿಕ ಮಾಸದ ದೀಪೋತ್ಸವ ಹಿನ್ನೆಲೆಯಲ್ಲಿ ದೀಪದ ಗಿರಿ ಒಡ್ಡುಗೆ ಬಳಿ ಅಳವಡಿಸಲಾಗಿರುವ ಬೃಹತ್ ಹಣತೆಗೆ ಬಿಳಿ ಬಣ್ಣ ಬಣ್ಣ ಬಳಿದು ಮೇಲ್ಭಾಗ ಚಪ್ಪರವನ್ನು ನಿರ್ಮಿಸಿ ತಳಿರು-ತೋರಣಗಳಿಂದ ಸಿಂಗಾರ ಮಾಡಲಾಗದ್ದು, ಇಂದು ರಾತ್ರಿ ಸಾಲೂರು ಬೃಹನ್ ಮಠದ ಪೀಠಾಧಿಪತಿ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಬೇಡಗಂಪಣ ಅರ್ಚಕರಿಂದ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಹಾ ಜ್ಯೋತಿಯನ್ನು ಬೆಳಗಿಸಲಾಗುತ್ತದೆ.
ಈ ಮಹಾಜ್ಯೋತಿ ಕಾಣಲು ತಮಿಳುನಾಡು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಭೇಟಿ ಕೊಟ್ಟಿದ್ದು, ಪ್ರಾಧಿಕಾರದ ವತಿಯಿಂದ ಭಕ್ತರಿಗೆ ಕುಡಿಯುವ ನೀರು, ದಾಸೋಹ, ನೆರಳಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಇದಲ್ಲದೆ ಕ್ಷೇತ್ರಕ್ಕೆ ನಿರಂತರವಾಗಿ ಬರುತ್ತಿರುವ ಯಾತ್ರಿಕರಿಗೆ ವಿಶೇಷ ಪಾಸ್ಗಳನ್ನು ವಿತರಿಸಲಾಗುತ್ತಿದೆ. ದೀಪಾವಳಿ ಜಾತ್ರಾ ಮಹೋತ್ಸವದಿಂದ ಕಾರ್ತಿಕ ಮಾಸದವರೆಗೆ ಸುಮಾರು 13,000 ಜನ ಯಾತ್ರಿಕರು ಪಾದಯಾತ್ರೆ ಮೂಲಕ ಮಲೆ ಮಾದೇಶ್ವರ ದರ್ಶನ ಪಡೆದಿದ್ದಾರೆ.
ಪ್ರವೇಶ ದ್ವಾರ ದುರಸ್ತಿ
ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ದರ್ಶನ ಪಡೆಯುವ ಭಕ್ತಾದಿಗಳಿಗೆ ಸೂಕ್ತ ಪ್ರವೇಶ ದ್ವಾರ ಇಲ್ಲದೆ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರು ಗೇಟ್ ನಂಬರ್ ಎರಡರಲ್ಲಿ ಉಚಿತ ದರ್ಶನ, ಗೇಟ್ ನಂಬರ್ ಮೂರರಲ್ಲಿ ಸಚಿವರು, ಶಾಸಕರು, ಇನ್ನಿತರರಿಂದ ಶಿಫಾರಸ್ಸು ಪತ್ರ ತರುವವರಿಗೆ ಗೇಟ್ ನಂಬರ್ ನಾಲ್ಕರಲ್ಲಿ ಅಂಗವಿಕಲರು, ಗರ್ಭಿಣಿಯರು, ಬಾಣಂತಿಯರು, ವಯೋ ವೃದ್ಧರಿಗೆ, ಅತಿಥಿ ಗಣ್ಯರಿಗೆ ಸ್ವಾಮಿಯ ದರ್ಶನ ಪಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಿದ್ದಾರೆ.
ಇನ್ನು, ಕಾರ್ತಿಕ ಕಡೇ ಸೋಮವಾರ ಪ್ರಯುಕ್ತ ದೇವಾಲಯಕ್ಕೆ ವಿವಿಧ ಬಗೆಯ ಫಲ-ಪುಷ್ಪಗಳಿಂದ ಅಲಂಕಾರ ಮಾಡಲಾಗಿದ್ದು, ಜೊತೆಗೆ ವಿದ್ಯುತ್ ದೀಪಾಲಂಕಾರ ಕೂಡ ಜಗಮಗಿಸುತ್ತಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications