ಕಾವೇರಿ ಹೊರಹರಿವು ಹೆಚ್ಚಳ: ಮುಳುಗಿದ ಕೊಳ್ಳೇಗಾಲ ತಾಲ್ಲೂಕಿನ ಈ ಗ್ರಾಮಗಳು
ಚಾಮರಾಜನಗರ, ಆಗಸ್ಟ್, 01: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಅವಾಂತರಗಲೇ ಸೃಷ್ಟಿಯಾಗಿವೆ. ಹಾಗೆಯೇ ಕಾವೇರಿ ಆರ್ಭಟದಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ನದಿಪಾತ್ರದ ಗ್ರಾಮಗಳು ತತ್ತರಿಸುತ್ತಿದ್ದು, 5 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, 2 ಗ್ರಾಮಗಳು ಸಂಪೂರ್ಣ ಜಲಾವೃತವಾಗಿದೆ.
ಕೊಳ್ಳೇಗಾಲದ ನದಿಪಾತ್ರದ ಗ್ರಾಮಗಳಾದ ಅಣಗಳ್ಳಿ, ದಾಸನಪುರ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು, ಗ್ರಾಮಸ್ಥರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ಕಾವೇರಿ ನದಿ ಭಾರೀ ಪ್ರಮಾಣದಲ್ಲಿ ಉಕ್ಕಿ ಹರಿಯುತ್ತಿದ್ದು, ದಾಸನಪುರ, ಅಣಗಳ್ಳಿ, ಹಂಪಾಪುರ, ಹರಳೆ, ಮುಳ್ಳೂರು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು ಸ್ಥಳಕ್ಕೆ ಡಿಸಿ ಶಿಲ್ಪಾನಾಗ್ ಭೇಟಿ ಕೊಟ್ಟು ಪ್ರವಾಹ ನಿರ್ವಹಣೆ ಮಾಡುತ್ತಿದ್ದಾರೆ. ಕೊಳ್ಳೇಗಾಲದ ಶಿವನಸಮುದ್ರ ಸಮೀಪವಿರುವ ಐತಿಹಾಸಿಕ ವೆಸ್ಲಿ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ. 2019ರಲ್ಲೂ ಭೀಕರ ಮಳೆಗೆ ವೆಸ್ಲಿ ಸೇತುವೆ ಒಂದು ಭಾಗ ಕೊಚ್ಚಿ ಹೋಗಿತ್ತು. ಬಳಿಕ, ದುರಸ್ತಿ ಮಾಡಲಾಗಿತ್ತು. ಈಗ, ಸೇತುವೆಯ ಮತ್ತೊಂದು ಭಾಗ ನೀರುಪಾಲಾಗಿದೆ.
ದುರಂತದಲ್ಲಿ ಪಾರಾಗಿ ಬಂದ ಕನ್ನಡತಿ ರಾಧಾ: ಕೇರಳ ಮಹಾ ದುರಂತದಲ್ಲಿ ಪಾರಾಗಿ ಬಂದ ಮಳವಳ್ಳಿ ಮೂಲದ ರಾಧಾ ಈಗಲೂ ಆ ಘಟನೆಯನ್ನು ನೆನೆದು ಬೆಚ್ಚಿ ಬೀಳುತ್ತಾರೆ, ಬಿಕ್ಕಳಿಸುತ್ತಾರೆ.
ಮಗಳ ಶಾಲಾ ದಾಖಲಾತಿಗೆ ಸಮಸ್ಯೆ ಉಂಟಾದ್ದರಿಂದ ಮೂಲತಃ ಕೇರಳದವರಾದ ರಾಧಾ ಚೂರಲ್ ಮಲೆಗೆ ತೆರಳಿ ಮಹಾ ಪ್ರಳಯಕ್ಕೆ ಸಿಲುಕಿ ಬಚಾವ್ ಆಗಿ ಬಂದಿದ್ದಾರೆ. ಕತ್ತಿನ ತನಕ ಬಂದಿದ್ದ ನೀರಿನ ನಡುವೆ ಹಗ್ಗ ಹಿಡಿದು ಬೆಟ್ಟ ಏರಿ ಪಾರಾಗಿ ಬಂದಿದ್ದಾರೆ.
ಕಣ್ಣೆದುರೇ ಮಹಾ ಪ್ರಳಯ ಕಂಡ ಇವರು ಅಕ್ಷರಶಃ 2 ದಿನ ನರಕ ನೋಡಿ ಬಂದಿದ್ದಾರೆ. ರಾತ್ರಿ ಶುರುವಾದ ಜೋರು ಮಳೆಯಿಂದ ಬಚಾವ್ ಆಗಲು ಬೆಟ್ಟ ಏರಿದೆವು. 10 ನಿಮಿಷದಲ್ಲೇ ಎಲ್ಲವೂ ನಾಶವಾಯಿತು. ಆಸ್ಪತ್ರೆ ಕಟ್ಟಡವೊಂದು ಬಿಟ್ಟರೇ ಏನೂ ಉಳಿದಿರಲಿಲ್ಲ. ನನ್ನ ಮಗಳ ಶಾಲಾ ದಾಖಲಾತಿಗಾಗಿ ಕೆಲವು ದಾಖಲೆಗಳನ್ನು ತರಲು ಬಂದಿದ್ದೆ. ಸಂಜೆ ಭೇಟಿ ಕೊಟ್ಟಿದ್ದ ಶಾಲೆ ಬೆಳಗ್ಗೆ ಹೊತ್ತಿಗೇ ಅದರ ಅವಶೇಷವೇ ಇರಲಿಲ್ಲ ಎಂದು ಕಣ್ಣೀರಾದರು.
ಗುಡ್ಡದ ಮೇಲೆ ಇದ್ದರೂ, ಅದೊಂದು ರೀತಿ ನರಕವೇ ಆಗಿತ್ತು. ಒಬ್ಬರಿಗೆ ಕೈ ಇಲ್ಲ, ತಲೆ ಇರಲಿಲ್ಲ. ಮನೆಯಲ್ಲಿ ಉಳಿದಿದ್ದ ಒಂದೇ ಗೋಡೆಯನ್ನು ಹಿಡಿದು ತಾಯಿ-ಮಗು ಬದುಕಿದ್ದರು. ಆ ದೃಶ್ಯ ನೋಡುವುದು ಯಾರಿಗೂ ಬೇಡ ಎಂದರು.
ಜಾತಿ ಪ್ರಮಾಣಪತ್ರದಲ್ಲಿ ಉಂಟಾಗಿರುವ ದೋಷ ಸರಿಪಡಿಸಿ, ನನ್ನ ಮಗಳಿಗೆ ಶಾಲಾ ದಾಖಲಾತಿ ಕೊಡಿಸಬೇಕು ಎಂದು ರಾಧಾ ಮನವಿ ಮಾಡಿದ್ದಾರೆ. ಎರಡು ದಿನ ತಾವು ಕಂಡ ನರಕದ ದೃಶ್ಯದಿಂದ ಇನ್ನೂ ಚೇತರಿಸಿಕೊಳ್ಳದ ರಾಧಾ ಸದ್ಯ ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯ ಸಂಬಂಧಿ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications