ಕರ್ನಾಟಕದ ಈ ಜಿಲ್ಲೆಗೆ ಕೇರಳದ ಕಸ ತಂದು ಸುರಿದ ಲಾರಿ ಚಾಲಕನಿಗೆ ₹5,000 ದಂಡ
ಚಾಮರಾಜನಗರ, ಸೆಪ್ಟೆಂಬರ್, 11: ಜಾಸ್ತಿ ಮೈಮೇಲೆ ಬಿಟ್ಟುಕೊಂಡ್ರೆ ತಲೆ ಮೇಲೆ ಕುಳಿತುಕೊಂಡುಬಿಡ್ತಾರೆನ್ನುವ ಮಾತಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಹೊರ ರಾಜ್ಯದವರದ್ದೇ ದರ್ಬಾರ್ ಆಗ್ಬಿಟ್ಟಿದೆ. ಆದ್ರೆ ಕನ್ನಡಿಗರು ಒಮ್ಮೆ ತಾಳ್ಮೆ ಕಳೆದುಕೊಂಡರೆ, ಮೆರೆಯುವವರ ಬುಡಕ್ಕೆ ಬೆಂಕಿ ಇಡುತ್ತಾರೆನ್ನುವುದು ತಿಳಿದಿರಬೇಕಾಗುತ್ತದೆ. ಇದೀಗ ಕೇರಳದಿಂದ ಕಸ ತಂದು ರಾಜ್ಯದಲ್ಲಿ ಸುರಿದ ಲಾರಿ ಚಾಲಕನಿಗೆ ಗುಂಡ್ಲುಪೇಟೆ ಪುರಸಭೆ ದಂಡ ವಿಧಿಸಿ, ಛೀಮಾರಿ ಹಾಕಿದೆ.
ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಕೇರಳ ರಸ್ತೆಯಲ್ಲಿ ಪುರಸಭೆ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕೇರಳದಿಂದ ತಂದ ತ್ಯಾಜ್ಯ ಸುರಿಯುತ್ತಿದ್ದ ವೇಳೆ ಸಿಕ್ಕಿಬಿದ್ದ ವಾಹನ ಚಾಲಕನಿಗೆ ಪುರಸಭೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಈಚರ್ ವಾಹನ ಚಾಲಕ ಕೇರಳದಿಂದ ವಾಪಸ್ ಬರುವಾಗ ಬಾಳೆ ಸೇರಿದಂತೆ ಇನ್ನಿತರ ತ್ಯಾಜ್ಯವನ್ನು ತಂದು ಪುರಸಭೆ ತ್ಯಾಜ್ಯ ವಿಲೇವಾರಿ ಘಟಕದ ಬಳಿಯಲ್ಲಿ ಸುರಿಯುತ್ತಿದ್ದನು. ಈ ವೇಳೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕೈಗೆ ಸಿಕ್ಕಿಬಿದ್ದು 5,000 ದಂಡ ವಿಧಿಸಿ, ಎಚ್ಚರಿಕೆ ಕೊಡಿಸಿಕೊಂಡು ಹೋಗಿದ್ದಾರೆ.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ, ಆರೋಗ್ಯಾಧಿಕಾರಿ ಗೋಪಿ, ಪರಿಸರ ಅಧಿಕಾರಿ ಮಹೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಕೇರಳ ಮತ್ತು ಕರ್ನಾಟಕ ಗಡಿಯಲ್ಲಿ ಚೆಕ್ ಪೋಸ್ಟ್ ಇದ್ದರೂ ಕೂಡ ಅವರ ಕಣ್ತಪ್ಪಿಸಿ ಕಟ್ಟಡ ತ್ಯಾಜ್ಯ, ಬಾಳೆ ತ್ಯಾಜ್ಯ ತಂದು ಸುರಿಯುವಾಗ ಸಿಕ್ಕಿಬಿದ್ದು ದಂಡ ಪೀಕಿದ್ದಾನೆ ಎಂದು ತಿಳಿದುಬಂದಿದೆ.
ಕಸದರಾಶಿಯಲ್ಲಿ ಪೊಲೀಸ್ ಟೋಪಿಗಳು ಪತ್ತೆ: ಕಸದರಾಶಿಯಲ್ಲಿ ಪೊಲೀಸ್ ಟೋಪಿಗಳು ಪತ್ತೆಯಾಗಿ ಸಾರ್ವಜನಿಕ ವಲಯದಲ್ಲಿ ಟೀಕೆಗಳು ವ್ಯಕ್ತವಾಗಿದೆ.
ಖಾಕಿ ಖದರ್ಗೆ ಹೆಸರಾದ ಟೋಪಿ ಕಸದರಾಶಿಯಲ್ಲಿ ಬಿದ್ದಿರುವುದಕ್ಕೆ ಟೀಕೆ ವ್ಯಕ್ತವಾಗಿದ್ದು, ಗೌರಯುತವಾದ ವಿಲೇವಾರಿ ಮಾಡಬೇಕಿತ್ತು ಎಂದು ಜನರು ಅಸಮಾಧಾನ ಹೊರಹಾಕಿದ್ದಾರೆ.
ಚಾಮರಾಜನಗರದ ಬುದ್ಧ ನಗರ ಬಡವಾಣೆಯ ರಸ್ತೆಬದಿ ಕಸದರಾಶಿಯಲ್ಲಿ ಮೂರು ಟೋಪಿಗಳು ಪತ್ತೆಯಾಗಿದ್ದು, ಕಾನ್ಸ್ಟೇಬಲ್ಗಳು ಧರಿಸುವ ಟೋಪಿಗಳು ಇವಾಗಿವೆ. ಟೋಪಿಗಳಲ್ಲಿ ನಂ ಹಾಗೂ ಕರ್ನಾಟಕ ಪೊಲೀಸ್ ಚಿಹ್ನೆಯನ್ನು ತೆಗೆದು ಎಸೆಯಲಾಗಿದ್ದರೂ ಗೌರವಯುತವಾದ ವಿಲೇವಾರಿ ಮಾಡಬೇಕಾಗಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಇನ್ನು ಈ ಕುರಿತು ಎಸ್ಪಿ ಡಾ.ಬಿ.ಟಿ.ಕವಿತಾ ಪ್ರತಿಕ್ರಿಯಿಸಿದ್ದು, ಪೊಲೀಸ್ ಚಿಹ್ನೆಯ ಜೊತೆ ಟೋಪಿಗಳನ್ನು ಎಸೆದಿದ್ದರೇ ತಪ್ಪಾಗುತ್ತಿತ್ತು. ಪರಿಶೀಲನೆ ನಡೆಸುತ್ತೇನೆ, ಗೌರವಯುತ ವಿಲೇವಾರಿ ಅಗತ್ಯವಿತ್ತು ಎಂದು ಹೇಳಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications