ಮಾನಸಿಕ ಒತ್ತಡ ಧ್ರುವ ಅವರನ್ನು ಬಲಿ ಪಡೆಯಿತು, ದಲಿತ ರಾಜಕಾರಣಿಗಳಲ್ಲಿ ಇದು ಹೆಚ್ಚು: ಕೊಳ್ಳೇಗಾಲ ಶಾಸಕ
ಚಾಮರಾಜನಗರ, ಮಾರ್ಚ್ 11: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಶನಿವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿದ್ದ ಆರ್. ಧ್ರುವನಾರಾಯಣ ಅವರಿಗೆ ಶನಿವಾರ ಬೆಳಗ್ಗೆ ಏಕಾಏಕಿ ಹೃದಯಾಘಾತವಾಗಿದ್ದು,
ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ದಿಂದ ಮೈಸೂರಿನಲ್ಲಿ ನಿಧನರಾದರು. ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇರದ ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಏಕಾಏಕಿ ಸಂಭವಸಿದ ಹೃದಯಾಘಾತದಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯಲ್ಲೇ ವಿಧಿವಶರಾಗಿದ್ದಾರೆ.

ಆರ್.ಧ್ರುವನಾರಾಯಣ ಅವರ ಅಗಲಿಕೆಗೆ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಸಂತಾಪ ಸೂಚಿಸಿದ್ದು, ಮಾನಸಿಕ ಒತ್ತಡ ಆರ್.ಧ್ರುವನಾರಾಯಣ್ ಅವರನ್ನು ಬಲಿ ಪಡೆಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಈ ಕೊಳಕು ರಾಜಕಾರಣದಲ್ಲಿ ಮಾನಸಿಕ ಒತ್ತಡ ರಾಜಕಾರಣಿಗಳಿಗೆ ಭಾದಿಸುತ್ತಿದೆ, ಇದು ದಲಿತ ರಾಜಕಾರಣಿಗಳಲ್ಲಿ ಹೆಚ್ಚು, ಒತ್ತಡ ನಿರ್ವಹಣೆ ಬಗ್ಗೆ ನಾವು ಸೋಲುತ್ತಿದ್ದೇವೆ, ಆ ಒತ್ತಡವೇ ಅವರನ್ನು ಬಲಿ ಪಡೆಯಿತು ಎಂದು ಕಂಬನಿ ಮಿಡಿದಿದ್ದಾರೆ.
ಮತದಾರರು, ಕಾರ್ಯಕರ್ತರು ಹಾಗೂ ರಾಜಕೀಯ ಪಕ್ಷಗಳಲ್ಲಿ ನಾನು ವಿನಂತಿ ಮಾಡಿಕೊಳ್ಳುತ್ತೇನೆ, ಅನಗತ್ಯವಾಗಿ ನಾಯಕರುಗಳ ಮೇಲೆ ಒತ್ತಡ ಹೇರಬೇಡಿ, ವಿಶೇಷವಾಗಿ ದಲಿತ ರಾಜಕಾರಣಿಗಳ ಒತ್ತಡ ಹೇರಬೇಡಿ ಎಂದರು.
ಆರ್.ಧ್ರುವನಾರಾಯಣ ಚುನಾವಣಾ ಸಮಯದಲ್ಲಿ ಮಾತ್ರ ರಾಜಕಾರಣ ಮಾಡುತ್ತಿದ್ದರೇ ಹೊರತು ಉಳಿದ ಸಮಯದಲ್ಲಿ ಅಭಿವೃದ್ಧಿ, ಜನಪರ ಕಾಳಜಿ ಇದ್ದ ವ್ಯಕ್ತಿ. ಯಾವ ಪಕ್ಷವೇ ಆಗಿರಲಿ, ಯಾರೇ ಆಗಲಿ ಅವರ ಕೆಲಸ ಮಾಡಿ ಕೊಡುತ್ತಿದ್ದರು, ಎಲ್ಲರ ಜೊತೆ ಬಾಂಧವ್ಯ ಹೊಂದಿದ್ದರು, ಧ್ರುವನಾರಾಯಣ ಅವರು ಮಾಡಬೇಕೆಂದು ಕೆಲಸವನ್ನು ಅಭಿಮಾನಿಗಳು, ಜನರಾದ ನಾವು ಮಾಡೋಣ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ. ಆರ್.ಧ್ರುವನಾರಾಯಣ ಅವರ ನಿಧನಕ್ಕೆ ಪಕ್ಷ ಬೇಧ ಮರೆತು ರಾಜ್ಯದ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications