ಕಾವೇರಿ ನದಿಯಲ್ಲಿ ಸಿಲುಕಿಕೊಂಡಿದ್ದ ತಮಿಳುನಾಡು ಪ್ರವಾಸಿಗರ ರಕ್ಷಣೆ
ಚಾಮರಾಜನಗರ, ಜುಲೈ 27: ಕೆಆರ್ ಎಸ್ ನಿಂದ ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟ ಕಾರಣ ಇದರ ಅರಿವಿಲ್ಲದೆ ನದಿಯಲ್ಲಿ ಈಜಾಡುತ್ತಿದ್ದ ಪ್ರವಾಸಿಗರು ಪ್ರವಾಹದಲ್ಲಿ ಸಿಲುಕಿ ದಡ ಸೇರಲು ಪರದಾಡಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಬಳಿಯ ದರ್ಗಾದ ಬಳಿ ಜುಲೈ 26 ರಂದು ನಡೆದಿದೆ.
ಪ್ರವಾಸಕ್ಕೆಂದು ತಮಿಳುನಾಡಿನಿಂದ ಆಗಮಿಸಿದ್ದ ಪಳನಿಯಪ್ಪನ್, ತಂಬ, ದೊರೆಸ್ವಾಮಿ ಹಾಗೂ ಪುಷ್ಪ ಕುಮಾರಿ ಎಂಬುವರೇ ಕಾವೇರಿ ನದಿಯಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರಾದವರಾಗಿದ್ದಾರೆ.

ಇವರು ತಮಿಳುನಾಡಿನಿಂದ ಪ್ರವಾಸಕ್ಕೆಂದು ಆಗಮಿಸಿದ್ದರಲ್ಲದೆ, ಈ ನಾಲ್ಕು ಜನರು ಕೆಲ ಕಾಲ ಸತ್ತೇಗಾಲ ಹಾಗೂ ಶಿವನಸಮುದ್ರದ ನಡುವೆ ಇರುವ ದರ್ಗಾದ ಬಳಿಯ ನೀರಿನಲ್ಲಿ ಈಜಲು ತೆರಳಿದ್ದಾರೆ. ಇವರು ನದಿಯಲ್ಲಿ ಈಜುವ ವೇಳೆ ನದಿಯಲ್ಲಿ ನೀರಿನ ಹರಿವು ಹೆಚ್ಚತೊಡಗಿದೆ.
ಇದರಿಂದ ಭಯಗೊಂಡ ಅವರು ದಡ ಸೇರಲು ಸಾಧ್ಯವಾಗದೆ ನದಿ ಮಧ್ಯೆಯಿದ್ದ ಬಂಡೆಯ ಮೇಲೆ ನಿಂತು ತಮ್ಮನ್ನು ರಕ್ಷಿಸುವಂತೆ ಕೂಗಿಕೊಂಡಿದ್ದಾರೆ. ಇದನ್ನು ಕೇಳಿದ ಸ್ಥಳೀಯರು ಅತ್ತ ತೆರಳಿ ನೋಡಿದಾಗ ನೀರಿನಲ್ಲಿ ಸಿಲುಕಿಕೊಂಡಿರುವುದು ಕಂಡಿದೆ. ತಕ್ಷಣ ಅವರು, ಕೊಳ್ಳೇಗಾಲ ಗ್ರಾಮಾಂತರ ಪೊಲೀಸರಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಈಜು ತಜ್ಞರಿಂದ ಎರಡು ಬಂಡೆಗಳ ನಡುವೆ ಏಣಿಯನ್ನು ಇಟ್ಟು ಅದರ ಮೇಲೆ ಬರುವಂತೆ ಪ್ರವಾಸಿಗರಿಗೆ ಧೈರ್ಯ ತುಂಬಿದ್ದಾರೆ. ನಂತರ ನಾಲ್ಕು ಜನರು ಸ್ಥಳೀಯರ, ಪೊಲೀಸರ ಹಾಗೂ ಈಜುಗಾರರ ಸಹಾಯದಿಂದ ದಡ ತಲುಪಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications