ಅಂಬೇಡ್ಕರ್ ಗೆ ಅವಮಾನ, ಕೊಳ್ಳೇಗಾಲ ಉದ್ವಿಗ್ನ, ಸೆಕ್ಷನ್ 144 ಜಾರಿ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ದಲಿತರೇ ಹೆಚ್ಚಿನ ಸಂಖ್ಯೆಯಲ್ಲಿರುವ ಭೀಮ್ ನಗರ್ ನಲ್ಲಿ ಅಂಬೇಡ್ಕರ್ ಗೆ ಅವಮಾನ ಮಾಡಲಾಗಿದೆ ಎಂದು ಆಕ್ರೋಶಗೊಂಡ ಸ್ಥಳೀಯರು ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಳ್ಳೇಗಾಲ, ಜನವರಿ 14: ಚಾಮರಾಜನಗರ ಜಿಲ್ಲೆ ಕೊಳೇಗಾಲದಲ್ಲಿ ಶನಿವಾರ ಅಂಬೇಡ್ಕರ್ ಗೆ ಅವಮಾನ ಮಾಡಿದ್ದರಿಂದ ಆಕ್ರೋಶಗೊಂಡ ಜನರು, ವಾಹನಗಳನ್ನು ಜಖಂಗೊಳಿಸಿದ್ದಾರೆ ಮತ್ತು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪರಿಶಿಷ್ಟ ಜಾತಿಯ ಸಂಘಟನೆಗಳಿಂದ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆದವು.
ಜಿಲ್ಲೆ ಪೊಲೀಸರು ಕೊಳ್ಳೇಗಾಲದಲ್ಲಿ ಜನವರಿ 22ರವರೆಗೆ ನಿಷೇಧಾಜ್ಞೆ ಆದೇಶಿಸಿದ್ದಾರೆ. ಕೆಲವು ಅಪರಿಚಿತರು ದಲಿತರೇ ಹೆಚ್ಚಾಗಿ ವಾಸಿಸುವ ಭೀಮ್ ನಗರ್ ನಲ್ಲಿ ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆ. ಕಮಾನಿನ ಮಧ್ಯೆ ಅಂಬೇಡ್ಕರ್ ಚಿತ್ರವಿತ್ತು. ಅದಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ.[ನೋಟು ಬದಲಿಸಲು ಶೇ 30 ಕಮಿಷನ್: ಬ್ಯಾಂಕ್ ನೌಕರ ಅಮಾನತು]

ಈ ವಿಚಾರ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಸ್ಥಳೀಯರು ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಪ್ರಮುಖ ರಸ್ತೆಗಳನ್ನು ತಡೆದರು. "ಒಂದು ಕೆ ಎಸ್ ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಲಾಗಿದೆ. ಖಾಸಗಿ ವಾಹನವೊಂದು ಜಖಂ ಆಗಿದೆ. ಪಟ್ಟಣದಲ್ಲಿ ಪೊಲಿಸರನ್ನು ನಿಯೋಜಿಸಿದ್ದೇವೆ. ಪರಿಸ್ಥಿತಿ ಹತೋಟಿಯಲ್ಲಿದೆ" ಎಂದು ಜಿಲ್ಲೆಯ ಎಸ್ ಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.
ತಪ್ಪಿತಸ್ಥರನ್ನು ಬಂಧಿಸುವಂತೆ ವಿವಿಧ ಸಂಘಟನೆ ಸದಸ್ಯರು ಆಗ್ರಹಿಸಿದ್ದಾರೆ. ಪೊಲೀಸರು ತಿಳಿಸಿರುವ ಪ್ರಕಾರ ಈವರೆಗೆ ಯಾರನ್ನೂ ಬಂಧಿಸಿಲ್ಲ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications