Get Updates
Get notified of breaking news, exclusive insights, and must-see stories!

ಅಂಬೇಡ್ಕರ್ ಗೆ ಅವಮಾನ, ಕೊಳ್ಳೇಗಾಲ ಉದ್ವಿಗ್ನ, ಸೆಕ್ಷನ್ 144 ಜಾರಿ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ದಲಿತರೇ ಹೆಚ್ಚಿನ ಸಂಖ್ಯೆಯಲ್ಲಿರುವ ಭೀಮ್ ನಗರ್ ನಲ್ಲಿ ಅಂಬೇಡ್ಕರ್ ಗೆ ಅವಮಾನ ಮಾಡಲಾಗಿದೆ ಎಂದು ಆಕ್ರೋಶಗೊಂಡ ಸ್ಥಳೀಯರು ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಳ್ಳೇಗಾಲ, ಜನವರಿ 14: ಚಾಮರಾಜನಗರ ಜಿಲ್ಲೆ ಕೊಳೇಗಾಲದಲ್ಲಿ ಶನಿವಾರ ಅಂಬೇಡ್ಕರ್ ಗೆ ಅವಮಾನ ಮಾಡಿದ್ದರಿಂದ ಆಕ್ರೋಶಗೊಂಡ ಜನರು, ವಾಹನಗಳನ್ನು ಜಖಂಗೊಳಿಸಿದ್ದಾರೆ ಮತ್ತು ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪರಿಶಿಷ್ಟ ಜಾತಿಯ ಸಂಘಟನೆಗಳಿಂದ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆದವು.

ಜಿಲ್ಲೆ ಪೊಲೀಸರು ಕೊಳ್ಳೇಗಾಲದಲ್ಲಿ ಜನವರಿ 22ರವರೆಗೆ ನಿಷೇಧಾಜ್ಞೆ ಆದೇಶಿಸಿದ್ದಾರೆ. ಕೆಲವು ಅಪರಿಚಿತರು ದಲಿತರೇ ಹೆಚ್ಚಾಗಿ ವಾಸಿಸುವ ಭೀಮ್ ನಗರ್ ನಲ್ಲಿ ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆ. ಕಮಾನಿನ ಮಧ್ಯೆ ಅಂಬೇಡ್ಕರ್ ಚಿತ್ರವಿತ್ತು. ಅದಕ್ಕೆ ಚಪ್ಪಲಿ ಹಾರ ಹಾಕಿದ್ದಾರೆ.[ನೋಟು ಬದಲಿಸಲು ಶೇ 30 ಕಮಿಷನ್: ಬ್ಯಾಂಕ್ ನೌಕರ ಅಮಾನತು]

Chamarajanagar

ಈ ವಿಚಾರ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಸ್ಥಳೀಯರು ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಪ್ರಮುಖ ರಸ್ತೆಗಳನ್ನು ತಡೆದರು. "ಒಂದು ಕೆ ಎಸ್ ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಲಾಗಿದೆ. ಖಾಸಗಿ ವಾಹನವೊಂದು ಜಖಂ ಆಗಿದೆ. ಪಟ್ಟಣದಲ್ಲಿ ಪೊಲಿಸರನ್ನು ನಿಯೋಜಿಸಿದ್ದೇವೆ. ಪರಿಸ್ಥಿತಿ ಹತೋಟಿಯಲ್ಲಿದೆ" ಎಂದು ಜಿಲ್ಲೆಯ ಎಸ್ ಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ತಪ್ಪಿತಸ್ಥರನ್ನು ಬಂಧಿಸುವಂತೆ ವಿವಿಧ ಸಂಘಟನೆ ಸದಸ್ಯರು ಆಗ್ರಹಿಸಿದ್ದಾರೆ. ಪೊಲೀಸರು ತಿಳಿಸಿರುವ ಪ್ರಕಾರ ಈವರೆಗೆ ಯಾರನ್ನೂ ಬಂಧಿಸಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+