ಕೊಳ್ಳೇಗಾಲ ಶಾಸಕರ ಕಾರು ಅಪಘಾತ
ಚಾಮರಾಜನಗರ, ಏಪ್ರಿಲ್, 25: ಕೊಳ್ಳೇಗಾಲ ಶಾಸಕರ ಕಾರಿನ ಟೈಯರ್ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದ ಘಟನೆ ಮೈಸೂರಿನ ನಾಡನಹಳ್ಳಿ ಬಳಿ ನಡೆದಿದೆ.
ಬುಧವಾರ (ಏಪ್ರಿಲ್ 24) ರಾತ್ರಿ ಸುಮಾರು 11.50ರ ವೇಳೆಗೆ ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿರುವಾಗ ನಾಡನಹಳ್ಳಿ ಬಳಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಈ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಘಟನೆಯಲ್ಲಿ ಶಾಸಕರು ಅದೃಷ್ಟವಶಾತ್ ಶಾಸಕ ಎ.ಆರ್.ಕೃಷ್ಣಮೂರ್ತಿ, ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್ ಮತ್ತು ವಾಹನ ಚಾಲಕ ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೈಸೂರಿನತ್ತ ತೆರಳುತ್ತಿದ್ದಾಗ ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆಬದಿ ಹಳ್ಳಕೆ ಇಳಿದು ನಿಂತಿದೆ. ಯಾವುದೇ ಬೇರೆ ವಾಹನಗಳು ಆ ವೇಳೆ ಇಲ್ಲದಿದ್ದು, ಜೊತೆಗೆ ಕಾರು ರಸ್ತೆಬದಿಯ ಹಳ್ಳಕ್ಕೆ ಬಂದು ನಿಂತಿದ್ದರಿಂದ ಎಲ್ಲರೂ ಪ್ರಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಆಟೋ ಪಲ್ಟಿ: ರಾಷ್ಟ್ರೀಯ ಹೆದ್ದಾರಿ ನಾಲ್ಕರ ರಸ್ತೆಯಲ್ಲಿ ಎನ್ಹೆಚ್ಎಐ ಅಧಿಕಾರಿಗಳು ರಸ್ತೆಯಲ್ಲಿ ಹಂಪ್ಸ್ ಹಾಕಿ ಯಡವಟ್ಟು ಮಾಡಿದ್ದು, ಇದರಿಂದ ಒಂದೇ ದಿನ ನಾಲ್ಕೈದು ಅಪಘಾತ ಸಂಭವಿಸಿರುವ ಘಟನೆ ನಡೆದಿದೆ. ಇನ್ನು ನಿನ್ನೆ (ಏಪ್ರಿಲ್ 18) ರಾತ್ರಿ ವೇಳೆಗೆ ವೇಗವಾಗಿ ಬಂದ ಆಟೋ ಪಲ್ಟಿಯಾದ ಘಟನೆ ಚಿತ್ರದುರ್ಗದ ಬಳಿ ನಡೆದಿದೆ.
ಚಿತ್ರದುರ್ಗ ಉಪಾಧ್ಯ ಹೋಟೆಲ್ ಮುಂಭಾಗದ ರಸ್ತೆಯಲ್ಲಿ ಹಂಪ್ಸ್ ಹಾಕಿದ್ದು, ಈ ಹಿನ್ನೆಲೆ ಮೂರ್ನಾಲ್ಕು ಜನರನ್ನು ಕೂರಿಸಿಕೊಂಡು ವೇಗವಾಗಿ ಬಂದ ಆಟೋವೊಂದು ಪಲ್ಟಿಯಾಗಿದೆ. ಇನ್ನು ಆಟೋದಲ್ಲಿ ಕೊಲಿಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಹಂಪ್ಸ್ ಇದೆ ನಿಧಾನವಾಗಿ ಹೋಗಿ ಎಂದು ಚಾಲಕನಿಗೆ ಸೂಚನೆ ನೀಡಿದ್ದಾರೆ.
ಆದರೆ ಕೂಡ ಆಟೋ ಚಾಲಕ ಕೂಲಿ ಕಾರ್ಮಿಕನ ಮಾತನ್ನೂ ಪರಿಗಣಿಸದೇ ಆಟೋವನ್ನು ಕಂಟ್ರೋಲ್ ಮಾಡದೇ ಹಂಪ್ಸ್ ಮೇಲೆ ಜೋರಾಗಿ ಹತ್ತಿಸಿದ್ದು, ಪರಿಣಾಮವಾಗಿ ಆಟೋ ಪಲ್ಟಿಯಾಗಿದೆ. ಈ ವೇಳೆ ಆಟೋದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಟೋ ಸಂಪೂರ್ಣ ಜಖಂ ಗೊಂಡಿದೆ ಎಂದು ತಿಳಿದುಬಂದಿದೆ.
ಬೆಂಗಳೂರು-ಪುಣೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಬೆಂಗಳೂರು, ತುಮಕೂರು, ಶಿರಾ, ಹಿರಿಯೂರು ಚಿತ್ರದುರ್ಗ, ದಾವಣಗೆರೆ, ಹರಿಹರ ಹಾವೇರಿ ಗದಗ ಮೂಲಕ ಪುಣೆ ತಲುಪಲಿದೆ. ಇಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹೈವೇ ರಸ್ತೆಯಾಗಿರುವುದರಿಂದ ವಾಹನಗಳು ಅತೀ ವೇಗವಾಗಿ ಸಂಚಾರ ಮಾಡುತ್ತವೆ.
ಆದರೆ ಇಷ್ಟು ದಿನ ಇಲ್ಲದ ಹಂಪ್ಸ್ ಈಗ ಯಾಕೆ ಹಳವಡಿಸಿದ್ದಾರೆ ಏನು ಎಂಬುದು ಗೊತ್ತಿಲ್ಲ. ರಾಷ್ಟ್ರೀಯ ಹೆದ್ದಾರಿಯಲ್ಲಿ ಜನಸಂದಣಿ ಇಲ್ಲದ ಕಡೆ ಹಂಪ್ಸ್ ಹಾಕಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಹಂಪ್ಸ್ ತೆರವುಗೊಳಿಸುವಂತೆ ವಾಹನ ಸವಾರರು ಆಗ್ರಹಿಸಿದ್ದಾರೆ. ಇನ್ನು ಆಟೋ ಅಪಘಾತ ಘಟನೆ ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications