ಕೊಳ್ಳೇಗಾಲ: ದೇವಸ್ಥಾನದಲ್ಲಿ ತಟ್ಟೆ ಕಾಸಿಗಾಗಿ ಹೊಡೆದಾಡಿಕೊಂಡ ಅರ್ಚಕರು; CCTVಯಲ್ಲಿ ದೃಶ್ಯ ಸೆರೆ
ಚಾಮರಾಜನಗರ, ಜನವರಿ, 17: ತಟ್ಟೆ ಕಾಸಿಗಾಗಿ ಪೂಜಾರಿಗಳು ಹೊಡೆದಾಡಿಕೊಂಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನ ಶ್ರೀ ಸಿದ್ದಪ್ಪಾಜಿ ದೇವಾಲಯದಲ್ಲಿ ನಡೆದಿದೆ.
ಯಂತ್ರ ಹಾಗೂ ಭಕ್ತರಿಂದ ತಟ್ಟೆಗೆ ಬೀಳುವ ಹಣದ ವಿಚಾರಕ್ಕೆ ಅರ್ಚಕ ಕುಟುಂಬಕ್ಕೆ ಸೇರಿದ ಅಣ್ಣ- ತಮ್ಮಂದಿರು ಪರಸ್ಪರ ಹೊಡೆದಾಡಿಕೊಂಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿ ದೃಶ್ಯ ವೈರಲ್ ಆಗಿದೆ. ಘಟನೆ ಎರಡು ಮೂರು ದಿನದ ಹಿಂದೆ ನಡೆದಿದ್ದು, ವೀಡಿಯೋ ವೈರಲ್ಲಾದ ಬಳಿಕ ಹೊಡೆದಾಟ ಬೆಳಕಿಗೆ ಬಂದಿದೆ.
ಭಾನುವಾರ ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ಶ್ರೀ ಸಿದ್ದಪ್ಪಾಜಿ ದೇವಾಲಯದ ಅರ್ಚಕ ಕುಟುಂಬದವರಿಗೆ ಹಣದ ವಿಚಾರವಾಗಿ ಗಲಾಟೆ ನಡೆದಿದೆ. ರಾಜ್ಯದಲ್ಲಿಯೇ ಶ್ರೀ ಕ್ಷೇತ್ರ ಸಿದ್ದಪ್ಪಾಜಿ ಜಾತ್ರೆ ಹೆಸರುವಾಸಿಯಾಗಿದ್ದು, ಜನವರಿ 6 ರಿಂದ 10 ರವರೆಗೆ ಅದ್ಧೂರಿಯಾಗಿ ಜಾತ್ರೆ ನಡೆದಿತ್ತು. ಜಾತ್ರೆ ಮುಗಿದರೂ ಭಕ್ತರು ರಾಜ್ಯದ ನಾನಾ ಭಾಗಗಳಿಂದ ಚಿಕ್ಕಲ್ಲೂರಿಗೆ ಇನ್ನೂ ಭೇಟಿ ನೀಡುತ್ತಲೇ ಇದ್ದಾರೆ. ಜಾತ್ರೆಗೆ ಬಾರದ ಜನರು ಇದೀಗ ಹರಕೆ ತೀರಿಸುತ್ತಿದ್ದಾರೆ. ಈ ವೇಳೆ ಭಕ್ತರು ಹಾಕಿದ ತಟ್ಟೆ ಕಾಸಿಗೆ ಪೂಜಾರಿಗಳು ಹೊಡೆದಾಡಿಕೊಂಡಿದ್ದಾರೆ.

ದೇವಸ್ಥಾನದಲ್ಲಿಯೇ ಅರ್ಚಕರ ಸಮರ
ಬೊಪ್ಪೇಗೌಡನ ಪೀಠಾಧಿಪತಿ ಪುರದ ಶ್ರೀ ಜ್ಞಾನರಾಜೇ ಅರಸ್ ಹಾಗೂ ದಿ.ಪ್ರಭುದೇವ ರಾಜೇ ಅರಸ್ ಪುತ್ರ ಭರತರಾಜೇ ಅರಸ್ ನಡುವೆ ದೇವಾಲಯ ಆಡಳಿತ ನಿರ್ವಹಣೆ ಹಾಗೂ ಗೋಲಕ ವಿಚಾರವಾಗಿ ವೈಮನಸ್ಸು ಉಂಟಾಗಿದ್ದು ಎಲ್ಲರಿಗೂ ತಿಳಿದ ವಿಚಾರವಾಗಿದೆ.

ಕೊಳ್ಳೇಗಾಲ ಗ್ರಾಮಾಂತರ ಠಾಣೆಗೆ ದೂರು
ಇತ್ತೀಚೆಗೆ ಹಳೇ ಮಠದಲ್ಲಿ ಮರದ ಸಾಮಾಗ್ರಿಗಳಿಗೆ ಬೆಂಕಿ ಬಿದ್ದ ವಿಚಾರವಾಗಿ ಶ್ರೀ ಜ್ಞಾನರಾಜೇ ಅರಸ್ ಪತ್ನಿ ಸನ್ಮತಿ ಎಂಬುವವರು ಈ ಘಟನೆಗೆ ಭರತರಾಜೇ ಅರಸ್ ಹಾಗೂ ಸಂಗಡಿಗರು ಕಾರಣ ಎಂದು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಾಗೆಯೇ ಭರತ ರಾಜೇ ಅರಸ್ ಕೂಡ ಜ್ಞಾನ ರಾಜೇ ಅರಸ್ ಮೇಲೆ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಜಿಲ್ಲಾಡಳಿತದಿಂದ ಅರ್ಚಕರಿಗೆ ವಾರ್ನ್
ಇದ್ದರಿಂದ ಈ ಎರಡು ಗುಂಪುಗಳ ನಡುವೆ ವೈಮನಸ್ಸು ಏರ್ಪಟಿತ್ತು. ಅಷ್ಟರಲ್ಲಿ ಜಾತ್ರೆ ಕೂಡ ಬಂದಿದ್ದು, ಜಾತ್ರೆ ನಡೆಸುವ ಸಂಬಂಧ ಜಿಲ್ಲಾಡಳಿತ, ಶಾಸಕ ಆರ್.ನರೇಂದ್ರ, ಶ್ರೀ ಜ್ಞಾನರಾಜೇ ಅರಸ್, ಭರತರಾಜೇ ಅರಸ್ ಕುಟುಂಬದ ಜೊತೆ ಸಭೆ ನಡೆಸಿತ್ತು. ನಿಮ್ಮ ಕುಟುಂಬದ ಕಲಹದಿಂದ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಜಾತ್ರೆ ನಡೆಸುವಂತೆಯೂ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿತ್ತು. ಈ ಎಲ್ಲ ಗೊಂದಲಗಳ ನಡುವೆ ಜಾತ್ರೆ ಯಶಸ್ವಿಯಾಗಿ ನಡೆಯಿತು ಎನ್ನುವಷ್ಟರಲ್ಲಿಯೇ ಅರ್ಚಕರ ಗಲಾಟೆ ಭಕ್ತರ ಕೆಂಗಣ್ಣಿಗೆ ಗುರಿಯಾಗಿದೆ.

ಜಗಳ ಬಿಡಿಸಿದ್ದ ದೇವಸ್ಥಾನದ ಸಿಬ್ಬಂದಿ
ಅರ್ಚಕ ಕುಮಾರ್ ಹಾಗೂ ಮತ್ತೊಬ್ಬ ಅರ್ಚಕ ಶಿವಮೂರ್ತಿ ಅವರ ತಂದೆ ಶಂಕರಪ್ಪ ಹಾಗೂ ಇತನ ಮಗ ಮಹೇಶ್ ಅಲಿಯಾಸ್ ಬಾಲಾಜಿ ನಡುವೆ ಗಲಾಟೆ ನಡೆದಿದೆ. ಭಕ್ತರಿಗೆ ನೀಡುವ ಯಂತ್ರ ಹಣ ಹಾಗೂ ತಟ್ಟೆ ಕಾಸಿನ ಹಂಚಿಕೆ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಈ ಹೊಡೆದಾಟ ನಡೆದಿದ್ದು, ಬಳಿಕ ಅಲ್ಲಿದ್ದ ಸಿಬ್ಬಂದಿ ಜಗಳ ಬಿಡಿಸಿದ್ದಾರೆ.
ಅರ್ಚಕರ ನಡುವೆ ಗಲಾಟೆ ನಡೆದಿರುವ ಬಗ್ಗೆ ಮಾಹಿತಿ ತಿಳಿದಿದೆ. ಆದರೆ ಯಾವ ಕಾರಣಕ್ಕೆಂದು ಗೊತ್ತಿಲ್ಲ. ಗಲಾಟೆ ಬಗ್ಗೆ ಸಂಪೂರ್ಣ ಮಾಹಿತಿ ನನಗೆ ತಿಳಿದಿಲ್ಲ. ದೇವಾಲಯದಲ್ಲಿ ಗಲಾಟೆ ಮಾಡುವುದು ತಪ್ಪು. ವಿಚಾರಣೆ ನಡೆಸಿ ಕ್ರಮ ಕೈಗೊಳಲಾಗುವುದು ಎಂದು ಕ್ಷೇತ್ರದ ಆಡಳಿದ ಮಂಡಳಿಯ ಸನ್ಮತಿ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications