Get Updates
Get notified of breaking news, exclusive insights, and must-see stories!

ವಿಷಪ್ರಸಾದ ಸೇವಿಸಿ ಮೃತರಾದವರ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್‌ನಿಂದ 1 ಲಕ್ಷ

Recommended Video

      Chamarajanagar Temple Tragedy : ಕೆಪಿಸಿಸಿ, ಸರ್ಕಾರದಿಂದ ನೊಂದವರಿಗೆ ಸಹಾಯ

      ಮೈಸೂರು, ಡಿಸೆಂಬರ್ 15: ಚಾಮರಾಜನಗರದ ಸುಳ್ವಾಡಿ ಗ್ರಾಮದ ಕಿಚ್ಚಗತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಮೃತರಾದ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್‌ ವತಿಯಿಂದ ತಲಾ ಒಂದು ಲಕ್ಷ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

      ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗಿಗಳನ್ನು ಭೇಟಿ ಮಾಡಿ, ವೈದ್ಯರೊಂದಿಗೆ ಮಾತನಾಡಿದ್ದೇವೆ, ಸರ್ಕಾರವು ಪರಿಹಾರ ಘೋಷಿಸಿದೆ ಜೊತೆಗೆ ಕೆಪಿಸಿಸಿ ಸಹ ಪರಿಹಾರ ನೀಡುತ್ತದೆ ಎಂದು ಅವರು ಹೇಳಿದರು.

      KPCC giving 1 lakh to compensation to the deceased family in Chamarajanagar

      ಸಿದ್ದರಾಮಯ್ಯ ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಸ್ಥಿತಿ-ಗತಿ ನೋಡಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

      ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಫುಡ್‌ ಪಾಯ್ಸನ್‌ನಿಂದ ಆಗಿರುವ ಘಟನೆ ಅಲ್ಲವೆಂದು ವೈದ್ಯರು ಹೇಳುತ್ತಿದ್ದಾರೆ. ಯಾರೋ ಪಾತಕಿಗಳು ಉದ್ದೇಶಪೂರ್ವಾಕವಾಗಿ ವಿಷ ಬೆರೆಸಿರುವ ಅನುಮಾನ ಇದೆ, ಸರ್ಕಾರ ಈಗಾಗಲೆ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು.

      ನಾನು ಕೂಡ ಸಿಎಂ ಬಳಿ ಮಾತನಾಡಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತೇನೆ. ಈ ಕೃತ್ಯ ಎಸಗಿದ ಪಾತಕಿಗೆ ಕಠಿಣ ಶಿಕ್ಷೆ ಆಗಲೇ ಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+