ಗುಂಡ್ಲುಪೇಟೆ ಕಡಬೂರು ಗೇಟ್ ಬಳಿ ಸಾರಿಗೆ ಬಸ್ ಪಲ್ಟಿ
ಚಾಮರಾಜಗರ, ಜನವರಿ 10: ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಗುಂಡ್ಲುಪೇಟೆ ತಾಲೂಕಿನ ಕಡಬೂರು ಗೇಟ್ ಸಮೀಪ ನಡೆದಿದ್ದು, ಬಸ್ ನಿಯಂತ್ರಣ ತಪ್ಪಲು ರಸ್ತೆಯ ಕಳಪೆ ಕಾಮಗಾರಿಯೇ ಕಾರಣ ಎಂಬ ಆರೋಪ ಕೇಳಿಬಂದಿದೆ.
ಪಟ್ಟಣದ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಚಾಮರಾಜಗರ ತಾಲೂಕಿನ ಯರಗನಹಳ್ಳಿ ಗ್ರಾಮಕ್ಕೆ ತೆರಳಿ ಮತ್ತೆ ಪಟ್ಟಣದತ್ತ ಹಿಂತಿರುಗುತ್ತಿದ್ದಾಗ ಘಟನೆ ನಡೆದಿದೆ. ಕಿರಿದಾದ ಹಾಗೂ ಬದಿಯಲ್ಲಿ ಹಳ್ಳಕೊಳ್ಳಗಳಿಂದ ಕೂಡಿದ ರಸ್ತೆಯಲ್ಲಿ ಎದುರು ಬಂದ ವಾಹನಕ್ಕೆ ಅವಕಾಶ ಮಾಡಿ ಕೊಡಲು ಸರಿದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಬದಿಗೆ ನಿಧಾನವಾಗಿ ಮಗುಚಿದೆ.[ಬೈಕ್ ಗೆ ಬಸ್ ಡಿಕ್ಕಿ: ಅಣ್ಣ ಸ್ಥಳದಲ್ಲೇ ಸಾವು, ತಂಗಿ ಸ್ಥಿತಿ ಗಂಭೀರ]

ಬಸ್ ನಲ್ಲಿ ಸಿಬ್ಬಂದಿಯೊಂದಿಗೆ ಕೇವಲ 5 ಪ್ರಯಾಣಿಕರಿದ್ದು ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಬೊಮ್ಮನಹಳ್ಳಿಯಿಂದ ಅರಕಲವಾಡಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. 8 ತಿಂಗಳಿನಿಂದಲೂ ಕಾಮಗಾರಿ ನಡೆಸುತ್ತಿದ್ದು, ಮೆಟ್ಲಿಂಗ್ ಹಂತದಲ್ಲಿ ಸ್ಥಗಿತವಾಗಿದೆ.[ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ದುರಂತ. ಆರು ಮಂದಿ ಸಾವು]
ಸಮರ್ಪಕ ನೀರು ದೊರಕದ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ನಡೆಸುತ್ತಿದ್ದು, ನೀರು ಹರಿಸದ ಪರಿಣಾಮವಾಗಿ ದೂಳು ಎದ್ದು ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ಮಾರ್ಗದಲ್ಲಿ ಕಲ್ಲುಗಳು ಮೇಲೆದ್ದು, ರಸ್ತೆಯಲ್ಲಿ ವಾಹನಗಳು ಸಂಚರಿಸಲು ಸಾಧ್ಯವಿಲ್ಲದಂತಾಗಿದೆ. ರಸ್ತೆ ಬದಿಯಲ್ಲಿ ಹಳ್ಳ-ಗುಂಡಿಗಳಿಗೆ ಮಣ್ಣು ತುಂಬಿಸಿ ಸಮತಟ್ಟು ಮಾಡದ ಪರಿಣಾಮವಾಗಿ ಎದುರು ಬರುವ ವಾಹನಕ್ಕೆ ದಾರಿ ಕೊಡಲು ಸಾಧ್ಯವಿಲ್ಲದಂತಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications