ದೀಪಾವಳಿ ವಿಶೇಷ: ಮಹದೇಶ್ವರ ಬೆಟ್ಟದಲ್ಲಿ ಅದ್ದೂರಿಯಾಗಿ ನೆರವೇರಿದ ಹಾಲರವೆ ಉತ್ಸವ
ಚಾಮರಾಜನಗರ, ಅಕ್ಟೋಬರ್ 25: ಪ್ರಸಿದ್ಧ ಯಾತ್ರಾ ಸ್ಥಳ ಹನೂರು ತಾಲೂಕಿನ ಮಲೆ ಮಹದೇಶ್ವರಸ್ವಾಮಿ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಪ್ರಯುಕ್ತ ಮಂಗಳವಾರ ಹಾಲರವೆ ಉತ್ಸವ ಸಂಭ್ರಮ, ಸಡಗರದಿಂದ ಬೇಡಗಂಪಣ ವಿಧಿ ವಿಧಾನದಲ್ಲಿ ಸಂಪ್ರದಾಯ ಬದ್ಧವಾಗಿ ನೆರವೇರಿದೆ.
ಪ್ರತಿ ವರ್ಷ ದೀಪಾವಳಿ ಜಾತ್ರೆಯ ಸಮಯದಲ್ಲಿ ಅಮಾವಾಸ್ಯೆ ದಿನದಂದು ಈ ಉತ್ಸವ ನಡೆಯಲಿದೆ. ಕಳೆದ ಎರಡು ವರ್ಷಗಳಿಂದ ಕೋವಿಡ್ 19 ಕಾರಣದಿಂದ ಭಕ್ತರಿಗ ನಿರ್ಬಂಧ ವಿಧಿಸಲಾಗಿತ್ತು. ಸ್ಥಳೀಯರ ಉಪಸ್ಥಿತಿಯಲ್ಲಿ ಮಾತ್ರ ಉತ್ಸವ ನಡೆದಿತ್ತು. ಆದರೆ ಈ ಬಾರಿ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹಾಲರವಿ ಉತ್ಸವವನ್ನು ಕಣ್ತುಂಬಿಕೊಂಡರು.
ಸ್ಥಳೀಯ ಬೇಡಗಂಪಣ ಸಮುದಾಯದವರು ಮಾದೇಶ್ವರನಿಗೆ ನಡೆಸುವ ಉತ್ಸವ ಇದಾಗಿದ್ದು, ಸಮುದಾಯದ 10 ರಿಂದ 12 ವರ್ಷದ 101 ಹೆಣ್ಣು ಮಕ್ಕಳು ಇದರಲ್ಲಿ ಭಾಗಿಯಾಗುತ್ತಾರೆ.
ಉತ್ಸವದಲ್ಲಿ ಪಾಲ್ಗೊಳ್ಳುವ ಹೆಣ್ಣು ಮಕ್ಕಳು ಉಪವಾಸ ಇರುತ್ತಾರೆ. ಎಲ್ಲರೂ ಬೆಳ್ಳಂಬೆಳಗ್ಗೆ ಬೆಟ್ಟದಿಂದ ಸುಮಾರು ಏಳು ಕಿ.ಮೀ ದೂರದಲ್ಲಿರುವ ಹಾಲರವಿ ಬಾವಿಗೆ ತೆರಳಿ ಅಲ್ಲಿ ಸ್ನಾನ ಮಾಡಿ ಹಿತ್ತಾಳೆಯ ಕಳಶದಲ್ಲಿ ಹಾಲರವಿ ಹಳ್ಳದ ನೀರನ್ನು ತುಂಬಿ, ಅದನ್ನು ತಲೆ ಮೇಲೆ ಇರಿಸಿ ಕಳಶಗಳಿಗೆ ಪೂಜೆಯನ್ನು ನೆರವೇರಿಸಲಾಗುತ್ತದೆ. ಬಳಿಕ 101 ಹೆಣ್ಣು ಮಕ್ಕಳು ಕಳಶವನ್ನು ಹೊತ್ತು ಏಳು ಕಿ.ಮೀ ಕಾಲ್ನಡಿಗೆಯಲ್ಲೇ ಸಾಗಿ ಬಂದು ಬೆಟ್ಟದ ಪ್ರವೇಶ ದ್ವಾರ ತಲುಪುತ್ತಾರೆ.

ಹಾಲರವಿ ಉತ್ಸವ ಜರಗುವುದಕ್ಕೂ ಮುನ್ನ ಕತ್ತಿ ಪವಾಡ ನಡೆಯುತ್ತದೆ. ಹರಕೆ ಹೊತ್ತ ಭಕ್ತರೊಬ್ಬರು ಕತ್ತಿಯ ಅಲಗಿನ ಮೇಲೆ ಮಲಗುತ್ತಾರೆ. ಅವರ ಮೇಲೆ ಬೇಡಗಂಪಣ ಅರ್ಚಕರು ನಡೆದುಕೊಂಡು ಹೋಗುತ್ತಾರೆ.
ಏಳು ಕಿ.ಮೀ ದೂರದಿಂದ ನೀರು ತರುವ ಹೆಣ್ಣುಮಕ್ಕಳು ಉಪವಾಸವಿದ್ದು, ಬರಿಗಾಲಲ್ಲಿ ನಡೆದುಕೊಂಡು ಬರುತ್ತಾರೆ. ಮಾರ್ಗ ಮಧ್ಯದಲ್ಲಿ ಯಾವುದೇ ದುಷ್ಟಶಕ್ತಿಗಳ ಕಣ್ಣು ಬಿದ್ದಿದ್ದರೂ ಕತ್ತಿ ಪವಾಡ ಮಾಡುವ ಸ್ಥಳದಲ್ಲಿ ಇವು ನಿಲ್ಲುವುದಿಲ್ಲ, ಪವಾಡ ಮಾಡಿದ ಸ್ಥಳದಿಂದ ಹಾಲರವೆ ಗಂಗೆ ಶುದ್ಧಳಾಗುತ್ತಾಳೆ ಎಂಬ ನಂಬಿಕೆ ಭಕ್ತರದ್ದಾಗಿದೆ.
ಮಂಗಳವಾರ ಸೂರ್ಯಗ್ರಹಣ ಇದ್ದು, ಇಂದೂ ಕೂಡ ಪೂಜೆ ಪುನಸ್ಕಾರಗಳು ನಿಗದಿಯಂತೆ ನಡೆಯಲಿದೆ. ದೇವರ ದರ್ಶನಕ್ಕೆ ಅವಕಾಶ ಇದೆ.
ತೆಪ್ಪೋತ್ಸವ ರದ್ಧು
ಪ್ರತಿವರ್ಷ ಮಹದೇಶ್ವರ ಬೆಟ್ಟದಲ್ಲಿ ರಥೋತ್ಸವದ ದಿನ ರಾತ್ರಿ ತೆಪ್ಪೋತ್ಸವದ ಮೂಲಕ ಕೊನೆಯಾಗುವುದು ವಾಡಿಕೆ, ಆದರೆ ಬೆಟ್ಟದ ದೊಡ್ಡಕೆರೆಯ ಅಭಿವೃದ್ಧಿ ಕಾರ್ಯ ನಡೆಯುತ್ತಿರುವುದರಿಂದ ತೆಪ್ಪೋತ್ಸವವನ್ನು ರದ್ದು ಮಾಡಲಾಗಿದೆ. ಹಾಗಾಗಿ ಬುಧವಾರ ಮಹಾರಥೋತ್ಸವ ನಡೆಯಲಿದ್ದು, ಆ ಮೂಲಕ ಜಾತ್ರೆಗೆ ತೆರೆ ಬೀಳಲಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications