ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಯುವಕರನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಚಾಮರಾಜನಗರ, ಆಗಸ್ಟ್‌, 28: ಬೈಕ್ ಹಾಗೂ‌ ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಚಾಲಾನಾ ಸಮಾರಂಭದ ಹಿನ್ನೆಲೆ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವೆ ಮಂಡ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ನಗರದ ಹೊರವಲಯದ ಸಂತೇಮರಳ್ಳಿ ಮುಖ್ಯ ರಸ್ತೆಯ ದೊಡ್ಡಪೇಟೆ ಕ್ರಾಸ್ ಬಳಿ ಬೈಕ್‌ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬಿದ್ದು ನರಳಾಡುತ್ತಿದ್ದರು.

lakshmi-hebbalkar-help-to-victims

ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತಮ್ಮ ಕಾರನ್ನು ನಿಲ್ಲಿಸಿ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಕೆಲಸದ ಒತ್ತಡದ ಮಧ್ಯೆಯೂ ಸಚಿವೆ ಗಾಯಾಳುಗಳನ್ನು ಸಾಗಿಸಲು ಎಲ್ಲ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಈ ವೇಳೆ ಸ್ಥಳೀಯರು ದೊಡ್ಡಪೇಟೆ ಕ್ರಾಸ್‌ನಲ್ಲಿ ಪದೆ ಪದೇ ಅಪಘಾತ ಸಂಭವಿಸುತ್ತಿದ್ದು, ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು. ಗಾಯಾಳುಗಳಿಗೆ ನೆರವಾದ ಸಚಿವರ ಮಾನವೀಯತೆ ಕಾರ್ಯ ಸ್ಥಳೀಯರು ಮೆಚ್ಚುಗೆ ಪಾತ್ರವಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+