ಮತ ಪೆಟ್ಟಿಗೆಯಲ್ಲಿ ಬೋರ್ವೆಲ್, ಸರ್ಕಾರಿ ಕೆಲಸಕ್ಕಾಗಿ ಪತ್ರ!
ಚಾಮರಾಜನಗರ, ಜೂನ್ 16: ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆದಿದೆ. ಮತ ಎಣಿಕೆ ಗುರುವಾರ ಪೂರ್ಣಗೊಂಡಿದೆ. ಮತಪೆಟ್ಟಿಗೆಯಲ್ಲಿ ಸಿಕ್ಕ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ಬುಧವಾರ ಆರಂಭವಾಗಿತ್ತು. ಗುರುವಾರ ಎಣಿಕೆ ಕಾರ್ಯ ಪೂರ್ಣಗೊಂಡು ಫಲಿತಾಂಶ ಘೋಷಣೆ ಮಾಡಲಾಗಿದೆ. ಕೊಳವೆ ಬಾವಿ ತೊಡಿಸಿಕೊಡಿ ಎಂದು ಯುವಕನೊಬ್ಬ ಮನವಿ ಪತ್ರವನ್ನು ಮತಪಟ್ಟಿಗೆಗೆ ಹಾಕಿದ್ದಾನೆ.ಇನ್ನೊಬ್ಬ ಮತದಾರ ಯಾರು ದುಡ್ಡು ಕೊಟ್ಟಿಲ್ಲ ಅಂತಾ ಚುನಾವಣಾ ಅಭ್ಯರ್ಥಿಗಳ ವಿರುದ್ಧ ಕಿಡಿಕಾರಿರುವ ಪತ್ರವೂ ಸಿಕ್ಕಿದೆ.
ಮತದಾರ ಚಾಮರಾಜನಗರ ಜಿಲ್ಲೆಯ ಯಳಂದೂರಿನ ತಾಲೂಕಿನ ಗಣಿಗನೂರು ಗ್ರಾಮದ ನಿವಾಸಿ. ಹಲವಾರು ಮತದಾರರುಮತ ಪೆಟ್ಟಿಯೊಳಗೆ ವಿಭಿನ್ನ ಕೋರಿಕೆಯ ಪತ್ರಗಳನ್ನು ಹಾಕಿದ್ದಾರೆ. ಪೆಟ್ರೋಲ್ ಬೆಲೆ ಇಳಿಸಲು ಮನವಿ, ರಸಗೊಬ್ಬರ ಬೆಲೆ ಕಡಿಮೆ ಮಾಡುವಂತೆಯೂ ಮನವಿ ಮಾಡಿದ ಪತ್ರಗಳು ಮತ ಪೆಟ್ಟಿಗೆಯಲ್ಲಿ ಸಿಕ್ಕಿವೆ.

ಸರ್ಕಾರಿ ಕೆಲಸಕ್ಕೆ ಮನವಿ; ಎಂಎ, ಬಿಎಸ್ಎ ವ್ಯಾಸಂಗ ಮಾಡಿದ್ದೇನೆ. ಆದರೆ ನನಗೆ ಕೆಲಸ ಸಿಕ್ಕಿಲ್ಲ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಜಮೀನಿಗೆ ಕೊಳವೆ ಬಾವಿಯ ಅವಶ್ಯಕತೆ ಇದೆ. ನನಗೆ ಸರ್ಕಾರಿ ಕೆಲಸ ಕೊಡಿ. ಇಲ್ಲ ಅಂದರೆ ಜಮೀನಿನಲ್ಲಿ ಕೊಳವೆಬಾವಿ ತೊಡಿಸಿಕೊಡಿ ಎಂದು ಮತದಾರನೊಬ್ಬ ಮನವಿ ಮಾಡಿದ್ದಾನೆ.
ಬ್ಯಾಲೆಟ್ ಪತ್ರದ ಮೇಲೆಯೇ ಅಭ್ಯರ್ಥಿಗಳ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಯಾವ ಅಭ್ಯರ್ಥಿಗಳು ಕೂಡ ಹಣ ಕೊಟ್ಟಿಲ್ಲ ಎಂದು ಬ್ಯಾಲೇಟ್ ಪೇಪರ್ ಮೇಲೆ ಮತದಾರ ಬರೆದು, ಮತಪೆಟ್ಟಿಗೆಗೆ ಹಾಕಿದ್ದಾನೆ.
ವಿಚಿತ್ರ ಪತ್ರಗಳು; ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯ ವೇಳೆ ಚುನಾವಣೆ ಬಹಿಷ್ಕಾರ ಮಾಡುತ್ತೇನೆಂದು ಮತದಾರ ಬರೆದಿರುವ ಪತ್ರವೂ ಸಿಕ್ಕಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಜಂಗಮರಹಳ್ಳಿ ಮತಪೆಟ್ಟಿಗೆಯಲ್ಲಿ ಪತ್ರ ದೊರೆತಿದ್ದು, ಪತ್ರದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಪಂಚಾಯಿತಿ ಅಭಿವೃದ್ಧಿಯಾಗುವ ತನಕ ಮತ ಹಾಕುವುದಿಲ್ಲ ಎಂದು ಅನಾಮಧೇಯ ಮತದಾರ ಬರೆದಿದ್ದಾನೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications