ಗುಂಡ್ಲುಪೇಟೆ: ಚಿರತೆ ಬಂತು ಚಿರತೆ.. ಕಾರಿನ ಬಳಿಯೇ ಬಂದ್ಬಿಡ್ತು; ವಿಡಿಯೋ ಭಾರೀ ವೈರಲ್
ಚಾಮರಾಜನಗರ, ನವೆಂಬರ್, 09: ಚಾಮರಾಜನಗರ ಜಿಲ್ಲೆಯಲ್ಲಿನ ಪ್ರಾಣಿಗಳ ಹಾವಳಿ ವಿಡಿಯೋ ಸಮಾಜಿಕ ಜಾಲತಾನಗಳಲ್ಲಿ ವೈರಲ್ ಆಗುತ್ತಲೇ ಇವೆ. ಇತ್ತೀಚೆಗಷ್ಟೇ ಗುಂಡ್ಲುಪೇಟೆ ತಾಲ್ಲೂಕಿನ ಗೋಪಾಲಸ್ವಾಮಿ ಬೆಟ್ಟಕ್ಕೆ ಹುಲಿ ಬಂದಿದ್ದು, ಈ ದೃಶ್ಯ ಪ್ರವಾಸಿಗ ಫೋನ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದೀಗ ಇದೇ ಸ್ಥಳದಲ್ಲಿ ಚಿರತೆಯ ಹಾವಾಳಿ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ.
ಹಸಿರಿನ ವನಸಿರಿಗೆ ಸದಾ ಮಂಜು ಮುಸುಕಿ ದೃಶ್ಯ ಕಾವ್ಯವನ್ನೇ ಸೃಷ್ಟಿಸುವ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟ ಕರ್ನಾಟಕದ ಕಾಶ್ಮೀರ ಎನಿಸಿಕೊಂಡಿದೆ. ಇಲ್ಲಿನ ಗೋಪಾಲಸ್ವಾಮಿಗೆ ಅಪಾರ ಭಕ್ತರಿದ್ದಾರೆ. ವಾರಾಂತ್ಯ ಬಂತೆಂದರೆ ಸಾಕು ಇಲ್ಲಿಗೆ ಪ್ರವಾಸಿಗರ ದಂಡೇ ಹರಿದುಬರಲಿದೆ. ಇನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಬೆಟ್ಟವಿದ್ದು, ಇಲ್ಲಿರುವ ಹುಲಿ, ಚಿರತೆ, ಕರಡಿ, ಆನೆಗಳು ಪ್ರವಾಸಿಗರಿಗೆ ದರ್ಶನ ಕೊಡುತ್ತಲೇ ಇರುತ್ತಿರುತ್ತವೆ.

ಅಂದಹಾಗೆ ಕೆಲ ದಿನಗಳ ಹಿಂದೆಯಷ್ಟೇ ಜೋಡಿ ಚಿರತೆಗಳು ದರ್ಶನ ಕೊಟ್ಟಿದ್ದು, ಒಂದು ಚಿರತೆ ಹಿಂದೆಯೇ ಬೇರೆ ಕಡೆ ಹೊರಟರೆ, ಒಂದಂತೂ ಯಾವುದೇ ಅಳುಕಿಲ್ಲದೇ ತಾನೇ ಇಲ್ಲಿನ ರಾಜ ಎಂಬಂತೆ ನಡೆದುಬಂದಿದೆ. ಹತ್ತಿತ-ಹತ್ತಿರ ಇನ್ನೂ ಹತ್ತಿರ ಎಂಬಂತೆ ಕೆಲವೇ ಮೀಟರ್ಗಳ ಅಂತರಕ್ಕೆ ಬಂದ ಚಿರತೆ ರಸ್ತೆ ತಡೆಗೋಡಿ ಏರಿ ಮಾಯವಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಚುಮು ಚುಮು ಚಳಿಯಲ್ಲಿ ಓಡಾಡಿದ ಬೆಟ್ಟದ ಹುಲಿ: ಗೋಪಾಲಸ್ವಾಮಿ ಬೆಟ್ಟದಲ್ಲಿ ಮಧ್ಯಾಹ್ನದವರೆಗೂ ದಟ್ಟ ಮಂಜು ತಂಪು ತಂಪು ವಾತಾವರಣ ಕವಿದಿರುತ್ತದೆ. ಇದರ ನಡುವೆಯೇ ಬೆಟ್ಟದಲ್ಲಿ ಹುಲಿರಾಯ ಆಗಾಗ ದರ್ಶನ ನೀಡುತ್ತಿದ್ದು, ಇದರಿಂದ ಪ್ರವಾಸಿಗರು, ಭಕ್ತರು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸುತ್ತಮುಮುತ್ತಲಿನ ಕಾಡಿನಲ್ಲಿ ಆಗಾಗ ಹುಲಿಯೊಂದು ಕಾಣಿಸಿಕೊಳ್ಳುತ್ತಿದೆ. ಹೀಗೆ ಪ್ರವಾಸಿಗರ ಕಣ್ಣಿಗೆ ಕಾಣಿಸಿಕೊಳ್ಳುವ ಮೂಲಕ ಬೆಟ್ಟದ ಹುಲಿ ಅಂತಲೇ ಕರೆಸಿಕೊಳ್ಳುತ್ತಿವೆ.
ಒಟ್ಟಿನಲ್ಲಿ ದಟ್ಟ ಮಂಜಿನ ಆನಂದ ಅನುಭವಿಸುತ್ತಿದ್ದ ಪ್ರವಾಸಿಗರು ಈಗ ಬೆಟ್ಟದ ಹುಲಿಯನ್ನು ಕಂಡು ಖುಷಿಪಡುತ್ತಿದ್ದಾರೆ. ಅಷ್ಟೇ ಅಲ್ಲದೆ, ಈ ದೃಶ್ಯವನ್ನು ಮೊಬೈಲ್ಗಳಲ್ಲಿ ಸೆರೆಹಿಡಿದು ಪ್ರವಾಸಿಗರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ. ಈ ಮೂಲಕ ಈ ವಿಡಿಯೋಗಳು ಸಖತ್ ಟ್ರೆಂಡ್ ಆಗಿಬಿಟ್ಟಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications