ನಾಯಿ ಬೇಟೆಯಾಡಲು ಸರಗೂರಿನಲ್ಲಿ ಮನೆಗೆ ನುಗ್ಗಿದ ಚಿರತೆ
ಚಾಮರಾಜನಗರ ಜಿಲ್ಲೆಯ ಸರಗೂರಿನಲ್ಲಿ ಚಿರತೆಯೊಂದು ಮನೆಗೆ ನುಗ್ಗಿ ನಾಯಿಯನ್ನು ಬೇಟೆಯಾಡಲು ಯತ್ನಿಸಿದೆ. ಇದೀಗ ಸರಗೂರಿನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಚಿರತೆ ಸೆರೆಗೆ ಸ್ಥಳೀಯರು ಆಗ್ರಹಿಸಿದ್ದಾರೆ
ಸರಗೂರು, ಏಪ್ರಿಲ್ 24: ಇದುವರೆಗೆ ಕಾಡಿನಂಚಿನ ಜನರಿಗೆ ಕಾಟ ಕೊಡುತ್ತಿದ್ದ ಚಿರತೆ ಪಟ್ಟಣದತ್ತ ಆಹಾರ ಅರಸಿಕೊಂಡು ಬರತೊಡಗಿದ್ದು, ಸಾಕುನಾಯಿಗಳ ಮೇಲೆ ದಾಳಿ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಸರಗೂರಿನ ಮನೆಯೊಳಗೆ ನುಗ್ಗಿದ ಚಿರತೆ ಮನೆಯಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಕಚ್ಚಿ ಗಾಯಗೊಳಿಸಿದ್ದು, ನಾಯಿಯ ಅರಚಾಟಕ್ಕೆ ಮನೆಯವರು ಬೊಬ್ಬೆ ಹಾಕುತ್ತಾ ಮನೆಯಿಂದ ಬಂದಿದ್ದರಿಂದ ಹೆದರಿದ ಚಿರತೆ ಓಡಿಹೋಗಿದೆ. ಇದರಿಂದ ಪಟ್ಟಣದ ಜನರು ಆತಂಕಗೊಂಡಿದ್ದಾರೆ.[ದಾವಣಗೆರೆ: ಮೇಕೆ ಮರಿ ಹಿಡಿದ ಚಿರತೆಯನ್ನು ಜೀವಂತವಾಗಿ ಸುಟ್ಟರು]

ಬಸ್ ನಿಲ್ದಾಣ ಸಮೀಪದ ಚರ್ಚ್ ಬಳಿಯಿರುವ ಶಿವಶಂಕರ್ ಎಂಬುವರ ಮನೆಯಲ್ಲಿ ಸುಮಾರು 15 ಸಾವಿರ ರುಪಾಯಿಗೂ ಹೆಚ್ಚು ಬೆಲೆಯುಳ್ಳ ಮುಧೋಳ ನಾಯಿಯನ್ನು ಕಟ್ಟಿ ಹಾಕಲಾಗಿತ್ತು. ಇದನ್ನು ದೂರದಿಂದಲೇ ಕಂಡ ಚಿರತೆ ನಾಯಿಯನ್ನು ತಿನ್ನಲು ಯತ್ನಿಸಿ, ನಾಯಿಯ ಕತ್ತಿಗೆ ಬಲವಾಗಿ ಕಚ್ಚಿದೆ.
ಈ ವೇಳೆ ನಾಯಿ ಅರಚತೊಡಗಿದೆ. ಆಗ ಮನೆಯ ಮಾಲೀಕ ಮನೆಯೊಳಗಿನಿಂದ ಬೊಬ್ಬೆ ಹಾಕುತ್ತಾ ಹೊರಬಂದಿದ್ದು, ಆಗ ಹೆದರಿದ ಸುಮಾರು 4 ಅಡಿ ಎತ್ತರದ ಚಿರತೆ ಮನೆಯ ತಡೆಗೋಡೆ ಹಾರಿ ಓಡಿಹೋಗಿದೆ.[ಅಂತೂ ಇಂತೂ ಉಡುಪಿಯ ಚಿರತೆ ಬೋನಿಗೆ ಬಿತ್ತು!]
ಈ ಸಂಬಂಧ ಅರಣ್ಯ ಇಲಾಖೆಯವರ ಗಮನಕ್ಕೆ ತರಲಾಗಿದ್ದ, ಸರಕಾರಿ ಪಶು ಚಿಕಿತ್ಸಾಲಯದ ಸಿಬ್ಬಂದಿ ರಫೀಕ್, ದೊಳಪ್ಪ ಎಂಬುವರು ನಾಯಿಗೆ ಸೂಕ್ತ ಚಿಕಿತ್ಸೆ ನೀಡಿದ್ದಾರೆ. ಪಟ್ಟಣದೊಳಗೆ ಚಿರತೆ ಬಂದಿರುವ ವಿಚಾರ ತಿಳಿದ ಜನ ಭಯಗೊಂಡಿದ್ದು, ಅರಣ್ಯ ಇಲಾಖೆ ಬೋನು ಇಟ್ಟು ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications