ಚಾಮರಾಜನಗರ: ಕೊನೆಗೂ ಬೋನಿಗೆ ಬಿದ್ದ ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ
ಚಾಮರಾಜನಗರ, ಫೆಬ್ರವರಿ, 15: ಕಳೆದ ಕೆಲವು ದಿನಗಳಿಂದ ರೈತರಿಗೆ ಉಪಟಳ ಕೊಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದ ಘಟನೆ ಚಾಮರಾಜನಗರ ತಾಲೂಕಿನ ಗಣಗನೂರು ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಗಣಗನೂರು ಗ್ರಾಮದ ಜಮೀನೊಂದರಲ್ಲಿ ಇರಿಸಲಾಗಿದ್ದ ಅಂದಾಜು 3-4 ವರ್ಷ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಬುಧವಾರದಂದು ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಕರು ದೇಹವನ್ನು ಬೋನಿನಲ್ಲಿ ಇಡಲಾಗಿತ್ತು.

ಇದೀಗ ಬೇಟೆಯಾಡಿದ ಕರುವನ್ನು ತಿನ್ನಲು ಬಂದು ಬೋನಿಗೆ ಬಿದ್ದಿದೆ. ಚಿರತೆ ಸೆರೆಯಾದ್ದುದ್ದರಿಂದ ಗಣಗನೂರು, ಜನ್ನೂರು, ಹಳ್ಳಿಕೆರೆಹುಂಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರೈತರು ನಿರಾಳರಾಗಿದ್ದಾರೆ. ಸೆರೆಯಾದ ಚಿರತೆಯನ್ನು ಬಿಆರ್ಟಿ ಅರಣ್ಯ ಪ್ರದೇಶಕ್ಕೆ ಬಿಟ್ಟ ಅರಣ್ಯ ಇಲಾಖೆ ಬಿಡುಗಡೆ ಮಾಡಿದೆ.












Click it and Unblock the Notifications