ಸಾಕುನಾಯಿಗಳನ್ನು ಕೊಂದು ಜನರಲ್ಲಿ ಭಯ ಹುಟ್ಟಿಸಿದ ಚಿರತೆ ಸಾವು!
ಚಾಮರಾಜನಗರ, ಜನವರಿ 24: ರೈತರ ಜಮೀನು ಬಳಿ ಆಗಾಗ್ಗೆ ಕಾಣಿಸಿಕೊಳ್ಳುತ್ತಾ ಸಾಕು ನಾಯಿಗಳ ಮೇಲೆ ದಾಳಿ ಮಾಡಿ ತಿನ್ನುತ್ತಾ ಜನರಲ್ಲಿ ಭಯ ಹುಟ್ಟಿಸಿದ ಚಿರತೆಯೊಂದು ಶವವಾಗಿ ಪತ್ತೆಯಾಗಿದೆ. ಈ ಚಿರತೆ ಕೆಲವು ದಿನಗಳ ಹಿಂದೆಯೇ ಸಾವನ್ನಪ್ಪಿರಬಹುದೆಂದು ಹೇಳಲಾಗಿದ್ದು, ಸ್ವಾಭಾವಿಕ ಸಾವೇ ಅಥವಾ ಯಾರಾದರೂ ಸಾಯಿಸಿದರೇ ಎಂಬ ಶಂಕೆ ವ್ಯಕ್ತವಾಗಿದೆ.
ಚಾಮರಾಜನಗರ ಜಿಲ್ಲೆ ಹರವೇ ಹೋಬಳಿಯ ನಂಜದೇವನಪುರ ಕರಿಕಲ್ ಕ್ವಾರಿಯ ಬಳಿ ದುರ್ನಾತ ಬೀರುತ್ತಿದ್ದರಿಂದ ಏನಿರಬಹುದೆಂದು ಕುತೂಹಲದಿಂದ ತೆರಳಿ ನೋಡಿದವರಿಗೆ ಚಿರತೆಯ ಕೊಳೆತ ದೇಹ ಪತ್ತೆಯಾಗಿದೆ. ಈ ಚಿರತೆಯು ಕೆಲವು ಸಮಯಗಳಿಂದ ಉಡಿಗಾಲ, ತಮ್ಮಡಳ್ಳಿ ಗ್ರಾಮದ ಸುತ್ತಮುತ್ತ ಅಲ್ಲಲ್ಲಿ ಕಾಣಿಸಿಕೊಂಡು ಸಾಕು ನಾಯಿ ಕೊಂದು ತಿನ್ನುತ್ತಿತ್ತು.
ಚಿರತೆ ಗ್ರಾಮದ ವ್ಯಾಪ್ತಿಯಲ್ಲಿ ಅಡ್ಡಾಡುತ್ತಿದ್ದರಿಂದ ರೈತರು ಭಯಭೀತರಾಗಿದ್ದರು. ಆದರೆ ಈ ಚಿರತೆ ನಾಯಿಗಳನ್ನಷ್ಟೆ ಹಿಡಿದು ತಿನ್ನುತ್ತಾ ಗ್ರಾಮಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಓಡಾಡಿಕೊಂಡಿತ್ತು. ಇದರ ಹೆಜ್ಜೆ ಗುರುತು ಹಾಗೂ ತಮ್ಮ ನಾಯಿಗಳು ನಾಪತ್ತೆಯಾಗುತ್ತಿದ್ದುದರಿಂದ ಜನ ಚಿರತೆಯ ಭಯದಲ್ಲಿಯೇ ದಿನ ಕಳೆಯುತ್ತಿದ್ದರು.

ನಂಜದೇವನಪುರ ಕರಿಕಲ್ ಕ್ವಾರಿಯ ಬಳಿ ಕೆಲ ದಿನಗಳಿಂದ ದುರ್ವಾಸನೆ ಬರಲಾರಂಭಿಸಿತ್ತು. ಹೀಗಾಗಿ ಯಾವ ಪ್ರಾಣಿ ಸತ್ತಿರಬಹುದೆಂದು ಪರಿಶೀಲಿಸಿದ ಜನಕ್ಕೆ ಚಿರತೆಯ ಕೊಳೆತ ಮೃತದೇಹ ಪತ್ತೆಯಾಗಿದ್ದು, ಆದರೆ ಚಿರತೆಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಒಂದು ವೇಳೆ ಆಯತಪ್ಪಿ ಬಿದ್ದು ಸತ್ತಿದೆಯಾ? ಅಥವಾ ಕಾದಾಟದಲ್ಲಿ ಸತ್ತಿದೆಯಾ ಎನ್ನುವುದು ಇನ್ನಷ್ಟೆ ತಿಳಿಯಬೇಕಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications